ಚಿಕ್ಕಮಗಳೂರು: ನಾಗೇನಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಅಗ್ರಹಾರ ತಾಂಡ್ಯದಲ್ಲಿ ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆ ಅಡಿ ೩೪.೬೦ ಲಕ್ಷ ವೆಚ್ಚದಲ್ಲಿ ರಸ್ತೆ, ಚರಂಡಿ ಒಳಗೊಂಡಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸಿ.ಟಿ.ರವಿ ಭೂಮಿ ಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು ನಾಗೇನಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ೨೦೧೮ ರಿಂದ ಪ್ರಸ್ತುತ ಅವಧಿಯವರೆಗೆ ಸುಮಾರು ೬ ಕೋಟಿಗೂ ಹೆಚ್ಚು ಅನುದಾನ ಬಿಡುಗಡೆಗೊಳಿಸಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಬಾಣೂರು-ಹೊಸಳ್ಳಿ-ಹುಲಿಕೆರೆ ಸಂಪರ್ಕ ರಸ್ತೆಗೆ ೩ ಕೋಟಿ, ರಸ್ತೆ ಕಾಂಕ್ರೀಟ್ ೨೫ ಲಕ್ಷ, ಸಮುದಾಯ ಭವನ ೨೦ ಲಕ್ಷ ದೇವಸ್ಥಾನ ಅಭಿವೃದ್ಧಿ, ಕುಡಿಯುವ ನೀರು ಸೇರಿದಂತೆ ವಿವಿಧ ಯೋಜನಾ ಕಾಮಗಾರಿಗೆ ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲೆಯ ಅತಿದೊಡ್ಡ ಯೋಜನೆಗಳಲ್ಲಿ ಒಂದಾದ ಭದ್ರಾಉಪಕಣಿವೆಯಿಂದ ಕುಡಿಯುವ ನೀರು ಪೂರೈಸುವ ಮೊದಲ ಹಂತದ ಯೋಜನೆಗೆ ೪೦೦ ಕೋಟಿ ಅನುದಾನ ಬಿಡುಗಡೆಯಾಗಿದ್ದು ಟೆಂಡರ್ ಆಗಿ ಅ.೧೬ಕ್ಕೆ ಮುಖ್ಯಮಂತ್ರಿಗಳು ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದರಿಂದಾಗಿ ಜಿಲ್ಲೆಯ ತರೀಕೆರೆ, ಕಡೂರು ಹಾಗೂ ಚಿಕ್ಕಮಗಳೂರು ಭಾಗದ ಬಯಲು ಸೀಮೆ ಕೆರೆಗಳಿಗೆ ನೀರು ಪೂರೈಕೆಯಾಗಲಿದ್ದು ಕುಡಿಯುವ ನೀರಿನ ಸಮಸ್ಯೆ ಪರಿಹಾರವಾಗಲಿದೆ. ೧೨೮೧ ಕೋಟಿ ವೆಚ್ಚದ ಯೋಜನೆ ಇದಾಗಿದೆ ಎಂದು ತಿಳಿಸಿದರು.
ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಗೆ ಶಾಸಕರು ವಿಶೇಷ ಆಧ್ಯತೆ ನೀಡಿದ್ದಾರೆ. ಜಿಲ್ಲೆಯ ಸಮಗ್ರ ಅಭಿವೃದ್ಧಿ ನಿಟ್ಟಿನಲ್ಲಿ ಶಾಸಕರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಹೆಚ್.ಸಿ.ಕಲ್ಮರುಡಪ್ಪ, ತಾ.ಪಂ ಮಾಜಿ ಸದಸ್ಯ ಅಣ್ಣಾನಾಯ್ಕ್, ಚಂದ್ರಪ್ಪ, ಪಿಳ್ಳೇನಹಳ್ಳಿ ರಮೇಶ್, ನಿಲೇನಹಳ್ಳಿ ಜಗನ್ನಾಥ್ ಸೇರಿದಂತೆ ಮತ್ತಿತರರು ಇದ್ದರು.

























Discussion about this post