ಚಿಕ್ಕಮಗಳೂರು: ಮೂಲಭೂತ ಹಕ್ಕುಗಳಿಂದ ಯಾರು ವಂಚಿತರಾಗಬಾರದು ಜತೆಗೆ ಪ್ರತಿಯೊಬ್ಬ ನಾಗರೀಕನು ಕಾನೂನು ಪಾಲನೆ ಮಾಡಬೇಕು ಎನ್ನುವ ನಿಟ್ಟಿನಲ್ಲಿ ಪ್ರತಿ ಹಳ್ಳಿಗಳಲ್ಲ್ಲಿ ಕಾನೂನು ಅರಿವು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು ಇದರ ಸದುಪಯೋಗ ಪಡೆದುಕೊಳ್ಳುವಂತೆ ಹಿರಿಯ ಸಿವಿಲ್ ನ್ಯಾಯಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸೋಮ ಎ.ಎಸ್ ತಿಳಿಸಿದರು.
ನಗರಸಭೆ ಕಛೇರಿ ಸಭಾಂಗಣದಲ್ಲಿ ನಡೆದ ೭೫ ನೇ ಸ್ವಾತಂತ್ರ್ಯ ವ?ಚರಣೆಯ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸುಪ್ರೀಂಕೋರ್ಟ್ ಮತ್ತು ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದಂತೆ ದೇಶದ ಪ್ರತಿಯೊಬ್ಬ ನಾಗರೀಕನಿಗೂ ಕಾನೂನಿನ ತಿಳುವಳಿಕೆ ಅಗತ್ಯ ಎಂಬ ನಿಟ್ಟಿನಲ್ಲಿ ಪ್ರತಿ ಹಳ್ಳಿಗಳಲ್ಲ್ಲಿ ಕಾನೂನಿನ ಅರಿವು ಕಾರ್ಯಕ್ರಮದ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಜನತೆ ಇದರ ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು.
ಆರ್ಥಿಕವಾಗಿ, ಸಾಮಾಜಿಕವಾಗಿ ಅಸಹಾಯಕರಾಗಿರುವ ಯಾರೊಬ್ಬರು ಕಾನೂನು ನೆರವು ಸಿಗದೆ ಅನ್ಯಾಯಕ್ಕೆ ಒಳಗಾಗಬಾರದು ಎನ್ನುವ ಉದ್ದೇಶದಿಂದ ಕಾನೂನು ಸೇವಾ ಪ್ರಾಧಿಕಾರ ಅಗತ್ಯವಿದ್ದಲ್ಲಿ ವಕೀಲರನ್ನು ನೇಮಿಸುವ ಮೂಲಕ ಉಚಿತವಾಗಿ ಕಾನೂನಿನ ನೆರವು ನೀಡಲಿದೆ. ಕಾನೂನಿನ ಚೌಕಟ್ಟಿನಲ್ಲಿ ದೊರೆಯುವಂತಹ ಸೇವೆಗಳು ಮತ್ತು ಸೌಲಭ್ಯಗಳನ್ನು ಜನಸಾಮಾನ್ಯರಿಗೆ ತಿಳಿಸಲು ನವೆಂಬರ್ ೦೨ ರಿಂದ ೧೪ ರ ವರೆಗೆ ಜಿಲ್ಲೆಯದ್ಯಾಂತ ಮಲೆನಾಡಿನ ಗುಡ್ಡ ಗಾಡು ಪ್ರದೇಶ ಒಳಗೊಂಡಂತೆ ಪ್ರತಿ ಹಳ್ಳಿಗಳಲ್ಲಿ ಕಾನೂನು ಅರಿವು ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಮೂಲಭೂತ ಹಕ್ಕುಗಳಿಂದ ಯಾರೊಬ್ಬರು ವಂಚಿತರಾಗಬಾರದು, ಕಾನೂನು ನಿಯಮಗಳ ಪಾಲನೆ, ಕರ್ತವ್ಯಗಳ ತಿಳುವಳಿಕೆ, ಪ್ರಾಮುಖ್ಯತೆ ಪ್ರತಿಯೊಬ್ಬ ನಾಗರೀಕನಿಗೂ ಅಗತ್ಯ. ಕಾನೂನನ್ನು ನಾವು ಪಾಲನೆ ಮಾಡಿದರೆ, ಕಾನೂನು ನಮ್ಮನ್ನು ರಕ್ಷಣೆ ಮಾಡುತ್ತದೆ ಎಂದು ಹೇಳಿದರು.
ನಗರಸಭೆ ಪೌರಯುಕ್ತ ಬಿ.ಸಿ ಬಸವರಾಜ್ ಮಾತನಾಡಿ, ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನಾತ್ಮಕವಾಗಿ ರೂಪಿತವಾದ ಕಾನೂನಿನ ಚೌಕಟ್ಟಿನಲ್ಲಿ ಪ್ರತಿಯೊಬ್ಬರು ಕಾರ್ಯನಿರ್ವಹಿಸಬೇಕು. ನಗರಸಭೆಗೆ ಸಂಬಂಧಿಸಿದಂತೆ ಕಂದಾಯ ವಸೂಲಿ ವೇಳೆ ಸಾಕಷ್ಟು ತಕರಾರುಗಳು ನಡೆಯುತ್ತವೆ ಇದೆಲ್ಲವನ್ನು ಸಮರ್ಥವಾಗಿ ಎದುರಿಸಲು ಕಾನೂನಿನ ಬಲ ಸಹಾಯಕವಾಗಲಿದೆ ಎಂದರು.
ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಡಿ.ಬಿ ಸುಜೇಂದ್ರ ಮಾತನಾಡಿ ದೇಶದ ಆಡಳಿತ ವ್ಯವಸ್ಥೆ ಕಾನೂನಿನ ಅಡಿಯಲ್ಲಿ ನಡೆಯುತ್ತಿದ್ದು ಸಂಬಂಧಿಸಿದ ಅಧಿಕಾರಿಗಳು ಕಾರ್ಯಾಂಗದ ಮೂಲಕ ಕಾರ್ಯನಿರ್ವಹಿಸುತ್ತಿದ್ದಾರೆ, ದೇಶದಲ್ಲಿ ಕಾನೂನಿಗಿಂತ ದೊಡ್ಡವರು ಯಾರಿಲ್ಲ ಪ್ರತಿಯೊಬ್ಬರು ಕಾನೂನು ಅಡಿಯಲ್ಲಿ ಕರ್ತವ್ಯ ನಿರ್ವಹಿಸಬೇಕಾಗಿದೆ ಅದಕ್ಕಾಗಿ ಅವುಗಳ ಅರಿವು ಅತ್ಯಗತ್ಯ ಎಂದರು.
ಶ್ರೀಸಾಮಾನ್ಯನು ತನ್ನ ಹಕ್ಕುಚ್ಯುತಿಯಾದಾಗ, ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ನ್ಯಾಯಪಡೆಯಲು ಅಸಹಾಯಕನಾದಾಗ ಪ್ರಾಧಿಕಾರದ ಮೂಲಕ ಕಾನೂನಿನ ನೆರವು ಪಡೆದುಕೊಳ್ಳಬಹುದಾಗಿದೆ ಎಂದು ಸಲಹೆ ನೀಡಿದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ವಿ.ಟಿ ಥಾಮಸ್ ದೇಶಕ್ಕೆ ಸ್ವಾತಂತ್ರ್ಯ ಲಭಿಸಿ ೭೫ ವ? ಪೂರೈಸಿದ್ದರೂ. ದೇಶದಲ್ಲಿ ದರೋಡೆ, ಅತ್ಯಾಚಾರ, ಅಕ್ರಮಗಳು ಹೆಚ್ಚಾಗುತ್ತಿರುವುದು ದುರದೃಷ್ಟಕರ. ಇಂತಹ ಪ್ರಕರಣಗಳನ್ನು ತಡೆಗಟ್ಟುವಲ್ಲಿ ಸಾರ್ವಜನಿಕರಿಗೆ ಕಾನೂನು ಅರಿವು ಅತೀ ಅಗತ್ಯವಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ತಾರಾನಾಥ್, ನಗರಸಭೆ ವ್ಯವಸ್ಥಾಪಕ ಮಂಜುನಾಥ್ಕೆ.ಎಸ್, ನಗರಸಭೆ ಕಂದಾಯಾಧಿಕಾರಿ ಬಸವರಾಜ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

























Discussion about this post