ಚಿಕ್ಕಮಗಳೂರು: ದತ್ತಪೀಠದಲ್ಲಿ ನಡೆಯುವ ಪೂಜಾ ವಿಷಯಕ್ಕೆ ಸಂಬಂಧಿಸಿದಂತೆ ಮುಜಾವರ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ 2008ರ ಮಾ.19ರಂದು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.
ಸರ್ಕಾರದ ಆದೇಶ ಪ್ರಶ್ನಿಸಿ ಶ್ರೀ ಗುರು ದತ್ತಾತ್ರೇಯ ಪೀಠ ದೇವಸ್ಥಾನ ಸಂವರ್ಧನಾ ಸಮಿತಿ ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ಏಕ ಸದಸ್ಯ ನ್ಯಾಯಪೀಠ ಸರ್ಕಾರದ ಆದೇಶವನ್ನು ರದ್ದುಪಡಿಸಿದೆ.
ವಿಶೇಷ ಸಮಿತಿಯ ವರದಿಯನ್ನು ಪರಿಗಣಿಸದೆ ಪ್ರಕರಣವನ್ನು ಹೊಸದಾಗಿ ಪರಿಶೀಲಿಸುವಂತೆ ಹೈಕೋರ್ಟ್ ಸರ್ಕಾರಕ್ಕೆ ಮಂಗಳವಾರ ಮಧ್ಯಾಹ್ನ ನಿರ್ದೇಶನ ನೀಡಿದೆ.
ಇನಾಂ ದತ್ತಾತ್ರೇಯಸ್ವಾಮಿ ಪೀಠದ ಸಮಸ್ಯೆ ಸರ್ವೋಚ್ಚ ನ್ಯಾಯಾಲಯದ ಮುಂದಿದ್ದು, ಈ ಸಮಸ್ಯೆಯನ್ನು ಸರ್ಕಾರವೇ ಬಗೆಹರಿಸಬೇಕೆಂದು ೨೦೧೭ರಲ್ಲಿ ತೀರ್ಪು ನೀಡಿದ್ದು, ದತ್ತಪೀಠದ ಸಮಸ್ಯೆ ಇತ್ಯರ್ಥಪಡಿಸುವ ಚೆಂಡು ಸರ್ಕಾರಕ್ಕೆ ಅಂಗಳಕ್ಕೆ ಬಂದು ನಿಂತಿತ್ತು.
ಆಗ ರಾಜ್ಯದಲ್ಲಿ ಆಡಳಿತದಲ್ಲಿದ್ದ ಸರ್ಕಾರ ನ್ಯಾಯಾಮೂರ್ತಿ ನಾಗಮೋಹನ್ದಾಸ್ ನೇತೃತ್ವದಲ್ಲಿ ಸಮಿತಿ ರಚಿಸಿದ್ದು, ಎಸ್.ಎಸ್.ಶೆಟ್ಟರ್ ಮತ್ತು ತರೀಕೆರೆಯ ರಹಮತ್ ಈ ಸಮಿತಿಯಲ್ಲಿದ್ದರು. ಈ ಸಮಿತಿ ಸಾರ್ವಜನಿಕರು, ವಿವಿಧ ಸಂಘ,ಸಂಸ್ಥೆಗಳ ಮುಖಂಡರ ಹೇಳಿಕೆ ಮತ್ತು ಅಗತ್ಯ ದಾಖಲೆಗಳನ್ನು ಪಡೆದು ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು.
ದತ್ತಪೀಠದಲ್ಲಿ ಪೂಜೆ ಸಲ್ಲಿಸಲು ಮುಜಾವರ್ ಅವರನ್ನು ನೇ
Discussion about this post