ನವದೆಹಲಿ: ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ತಮ್ಮ ಮಕ್ಕಳ ಇನ್ಸ್ಟಾಗ್ರಾಂ ಖಾತೆಯನ್ನು ಸರ್ಕಾರ ಹ್ಯಾಕ್ ಮಾಡಿಸಿದೆ ಎಂದು ಆರೋಪಿಸಿದ ಬೆನ್ನಿಗೆ ಈ ಬಗ್ಗೆ ತನಿಖೆ ನಡೆಸುವುದಾಗಿ ಎಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (ಐಟಿ) ಹೇಳಿದೆ. ಸಚಿವಾಲಯದ ಭಾತರೀಯ ಕಂಪ್ಯೂಟರ್ ತುರ್ತು ಸ್ಪಂದನಾ ತಂಡ (ಸಿಇಆರ್ಟಿ-ಇನ್) ಈ ಬಗ್ಗೆ ತನಿಖೆ ನಡೆಸಲಿದೆ.
ಉತ್ತರ ಪ್ರದೇಶದ ಸರ್ಕಾರ ತಮ್ಮ ದೂರವಾಣಿಯನ್ನು ಕದ್ದಾಲಿಸುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಭಾನುವಾರ ಆರೋಪಿಸಿದ ಬೆನ್ನಿ ಪ್ರಿಯಾಂಕಾ ಗಾಂಧಿ, ತಮ್ಮ ಮಕ್ಕಳ ಇನ್ಸ್ಟಾಗ್ರಾಂ ಖಾತೆಯನ್ನೂ ಹ್ಯಾಕ್ ಮಾಡಿಸಲಾಗಿದೆ ಎಂದು ಮಂಗಳವಾರ ಆರೋಪಿದ್ದರು. ಈ ಸರ್ಕಾರಕ್ಕೆ ಪ್ರತಿಪಕ್ಷಗಳ ನಾಯಕರ ವಿರುದ್ಧ ಬೇಹುಗಾರಿಕೆ ನಡೆಸುವುದನ್ನು ಬಿಟ್ಟು ಬೇರೆ ಕೆಲಸ ಇಲ್ಲವೆ ಎಂದು ಪ್ರಶ್ನಿಸಿದ್ದರು.
ಅಖಿಲೇಶ್ ಯಾದವ್ ಆರೋಪಕ್ಕೆ ಪ್ರತಿಕ್ರಿಯಿಸಿದ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ, ಅಖಿಲೇಶ್ ಅಧಿಕಾರದಲ್ಲಿದ್ದಾಗ ರಾಜಕೀಯ ನಾಯಕ ದೂರವಾಣಿ ಕದ್ದಾಲಿಕೆ ಮಾಡಿರಬೇಕು. ಹೀಗಾಗಿ ಈಗ ಬೇರೆಯವರ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಚುನಾವಣೆ ಎದುರು ನೋಡುತ್ತಿರುವ ಉತ್ತರ ಪ್ರದೇಶದಲ್ಲಿ ರಾಜಕೀಯ ಮುಖಂಡರ ಆರೋಪ ಮತ್ತು ಪ್ರತ್ಯಾರೋಪಗಳು ಈಗ ಹೆಚ್ಚಾಗಿವೆ. ಪಕ್ಷ ಸಂಘಟನೆಗೆ ಎಲ್ಲ ಪಕ್ಷಗಳು ಒತ್ತು ನೀಡಿವೆ. ಬಿಜೆಪಿಯು ಪ್ರಧಾನಿಯವರನ್ನು ರಾಜ್ಯಕ್ಕೆ ಕರೆಯಿಸಿ ಒಂದರ ನಂತರ ಒಂದರಂತೆ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುತ್ತಿದೆ. ಅಖಿಲೇಶ್ ಯಾದವ್ ಕಾರ್ಯಕ್ರಮಗಳ ಮೇಲೆ ಕಾರ್ಯಕ್ರಮ ನಡೆಸುತ್ತಿದ್ದಾರೆ. ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಎರಡು ದಿನಗಳ ಹಿಂದೆ ಅಮೇಠಿಯಲ್ಲಿ ಪಾದಯಾತ್ರೆ ನಡೆಸಿದ್ದರು.
IT Ministry Orders Probe Into Priyanka Gandhi’s ‘Kids’ Insta Account Hacked’Allegation
ಇದನ್ನು ಓದಿ: ಪ್ರಧಾನಿಯಾದರೆ ಮೊದಲ ಕೆಲಸ ಮಹಿಳೆಯರಿಗೆ ಮೀಸಲಾತಿಯ ಆದೇಶ ಎಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ಇದನ್ನೂ ಓದಿ: Congress Manifesto: ಉತ್ತರ ಪ್ರದೇಶ ಚುನಾವಣೆಗೆ ಕಾಂಗ್ರೆಸ್ನಿಂದ ಭರಪೂರ ಭರವಸೆ
Discussion about this post