ಚಿಕ್ಕಮಗಳೂರು: ಕರ್ತವ್ಯಲೋಪದ ಆರೋಪದ ಮೇಲೆ ಗ್ರಾಮ ಪಂಚಾಯಿತಿ ಇಬ್ಬರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಮೂವರನ್ನು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ. ಪ್ರಭು ಅಮಾನತು ಮಾಡಿ ಆದೇಶಿಸಿದ್ದಾರೆ.
ಕಾಮನ ಕೆರೆಯಲ್ಲಿ ಪಿಡಿಒ ಆಗಿರುವ ಶ್ರುತಿ ಈ ಹಿಂದೆ ಅಜ್ಜಂಪುರ ತಾಲೂಕು ಗೌರಾಪುರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಖರೀದಿ ನಿಯಮಗಳನ್ನು ಉಲ್ಲಂಘಿಸಿದ್ದಾರೆ, ಮತ್ತು ಲೆಕ್ಕ ಪತ್ರ ನೀಡುವಲ್ಲಿ ವಿಫಲವಾಗಿದ್ದಾರೆ ಎಂದು ಆರೋಪಿಸಿ ಅಮಾನತುಗೊಳಿಸಲಾಗಿದೆ.
ಕೆರೆಸಂತೆ ಪಂಚಾಯಿತಿ ಪಿಡಿಒ, ಬಿ ನಾಗರಾಜು ಹಣ ದುರ್ಬಳಕೆ ಆರೋಪದ ಮೇಲೆ ಅಮಾನತುಗೊಂಡಿದ್ದಾರೆ. ಎಸ್.ಬಿದರೆ ಗ್ರಾಮ ಪಂಚಾಯ್ತಿಯಲ್ಲಿ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಆಗಿರುವ ಮಂಜುನಾಥ್ ಕಚೇರಿ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಿಲ್ಲ, ಅಲ್ಲದೆ ಕಡತ ನೀಡುವಲ್ಲಿ ವಿಫಲವಾಗಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅಮಾನತು ಶಿಕ್ಷೆ ಎದುರಿಸುವಂತಾಗಿದೆ.
Discussion about this post