ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷವನ್ನು ಬೂತ್ ಮಟ್ಟದಿಂದಲೇ ಸಂಘಟಿಸಲು ಜಿಲ್ಲೆಯ ಎಲ್ಲಾ ಬ್ಲಾಕ್ ಅಧ್ಯಕ್ಷರುಗಳು ಹಾಗೂ ವಿವಿಧ ಘಟಕಗಳ ಅಧ್ಯಕ್ಷರುಗಳು ಮುಂದಾಗುವಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಕರೆ ನೀಡಿದರು.
ಅವರು ಮಂಗಳವಾರ ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಜಿಲ್ಲೆಯ ಎಲ್ಲಾ ಬ್ಲಾಕ್ ಅಧ್ಯಕ್ಷರುಗಳು ಹಾಗೂ ಜಿಲ್ಲಾ ಕಾಂಗ್ರೆಸ್ನ ವಿವಿಧ ಘಟಕಗಳ ಅಧ್ಯಕ್ಷರುಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿ, ರಾಜ್ಯ ಬಿಜೆಪಿ ಸರ್ಕಾರದ ಆಡಳಿತ ವೈಪಲ್ಯವನ್ನು ಹಾಗೂ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸಿದ ಸಂದರ್ಭದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ಮನಮುಟ್ಟುವಂತೆ ತಿಳಿಸುವ ಕೆಲಸವನ್ನು ಕಾರ್ಯಕರ್ತರು ಮಾಡುವಂತೆ ಸೂಚಿಸಿದರು.
ಬಿ.ಎಲ್.ಎ ೨ ಗಳ ನೇಮಕಾತಿ ಮತ್ತು ಪ್ರಾಜೆಕ್ಟ್ ಪ್ರಜಾಪ್ರತಿನಿಧಿಗಳ ವಿವರ ಹಾಗೂ ಇದೇ ತಿಂಗಳ ನವೆಂಬರ್ ೧೪ ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕಾಂಗ್ರೆಸ್ ಸದಸ್ಯತ್ವ ಅಭಿಯಾನದ ಉದ್ಘಾಟನೆಯಲ್ಲಿ ಪಾಲ್ಗೊಳ್ಳುವ ಬಗ್ಗೆ ಮತ್ತು ಮುಂಬರುವ ವಿಧಾನ ಪರಿಷತ್ ಚುನಾವಣೆ ಹಾಗೂ ಪಕ್ಷ ಸಂಘಟನೆಯ ಬಗ್ಗೆ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ, ಜಿಲ್ಲಾ ಕಾಂಗ್ರೆಸ್ ವಕ್ತಾರರಾದ ಹಿರೇಮಗಳೂರು ಪುಟ್ಟಸ್ವಾಮಿ, ರೂಬಿನ್ ಮೊಸಸ್, ನಗರ ಕಾಂಗ್ರೆಸ್ ಅಧ್ಯಕ್ಷ ಪಿ.ತನೋಜ್ ಕುಮಾರ್, ಎಸ್ ಸಿ ವಿಭಾಗದ ಜಿಲ್ಲಾಧ್ಯಕ್ಷ ಎಂ.ಸಿ.ಹೂವಪ್ಪ, ಜಿಲ್ಲಾ ಕಿಸಾನ್ ಸೆಲ್ನ ಪ್ರಕಾಶ್, ಅಲ್ಪ ಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಮಹಮದ್ ನಯಾಜ್, ಅಸಂಘಟಿತ ಕಾರ್ಮಿಕ ವಿಭಾಗದ ರಸೂಲ್ಖಾನ್, ಮಹಿಳಾ ಕಾಂಗ್ರೆಸ್ ವಿಭಾಗದ ಯಶೋಧ, ಎಸ್ ಟಿ ಸೆಲ್ನ ಗುಣವಂತಿ, ಸಾಮಾಜಿಕ ಜಾಲತಾಣದ ವಿನಾಯಕ, ಹಿಂದುಳಿದ ವರ್ಗಗಳ ವಿಭಾಗದ ಮೋಹನ್, ಸೇವಾದಳ ಸೆಲ್ನ ಸಿಲ್ವೆಸ್ಟರ್, ಎಸ್ಸಿ ಘಟಕದ ಹೊನ್ನೇಶ್ ಸೇರಿದಂತೆ ಜಿಲ್ಲೆಯ ಎಲ್ಲಾ ಬ್ಲಾಕ್ ಕಾಂಗ್ರೆಸ್ನ ಅಧ್ಯಕ್ಷರು ಹಾಗೂ ವಿವಿಧ ಘಟಕಗಳ ಅಧ್ಯಕ್ಷರು ಭಾಗವಹಿಸಿದ್ದರು.
ಇದನ್ನೂ ಓದಿ: ವಿವಿಧ ಪಕ್ಷಗಳ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡ ಯುವ ಕಾರ್ಯಕರ್ತರು
Discussion about this post