ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ನವರು ಮಿಷನ್ 123 ಗುರಿ ಇಟ್ಟುಕೊಂಡರೇ, ಬಿಜೆಪಿಯವರು ಮಿಷನ್ 150 ಗುರಿ ಇಟ್ಟುಕೊಂಡಿದ್ದಾರೆ ಆದ್ರೆ ನಮ್ಮದು ಮಾತ್ರ ಮಿಷನ್ 224 ಗುರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾರ್ಮಿಕವಾಗಿ ಹೇಳಿದರು.
ಚುನಾವಣೆಯ ಪಕ್ಷದ ನಡೆ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ನಾನು 224 ಶಾಸಕರ ಜತೆಗೂ ಮಾತನಾಡುತ್ತೇನೆ. ಯಾರ ಜತೆಗೂ ನನಗೆ ಭಿನ್ನಾಭಿಪ್ರಾಯವಿಲ್ಲ. ರಾಜಕೀಯ ಸಂಪರ್ಕದ ವಿಚಾರ ಮಾಧ್ಯಮಗಳ ಮುಂದೆ ಮಾತನಾಡುವಂತದ್ದಲ್ಲ. ಜೆಡಿಎಸ್ ನದ್ದು ಮಿಷನ್ 123, ಬಿಜೆಪಿಯವರದ್ದು ಮಿಷನ್ 150. ಆದರೆ, ನಮ್ಮದು ಮಿಷನ್ 224 ಎಂದು ತಿಳಿಸಿದ್ದಾರೆ.
ರಾಜ್ಯದ ಸಿಂದಗಿ ಹಾಗೂ ಹಾನಗಲ್ ಈ ಎರಡು ಕ್ಷೇತ್ರಗಳ ಉಪಚುನಾವಣೆ ಕುರಿತು ಮಾತನಾಡಿದ ಅವರು, ಮುಂಬರುವ ಸಿಂದಗಿ ಹಾಗೂ ಹಾನಗಲ್ ಉಪ ಚುನಾವಣೆಗೆ ಕಾಂಗ್ರೆಸ್ ಸಿದ್ಧವಾಗಿದೆ. ಮುಂಬರುವ ಸಿಂದಗಿ ಹಾಗೂ ಹಾನಗಲ್ ಉಪ ಚುನಾವಣೆ ಸಂಬಂಧ ಎಐಸಿಸಿ (AICC) ಈಗಾಗಲೇ ಒಂದು ಕ್ಷೇತ್ರದ ಅಭ್ಯರ್ಥಿ ಹೆಸರು ಪ್ರಕಟಿಸಲಾಗಿದೆ. ಮತ್ತೊಂದು ಕ್ಷೇತ್ರದ ಅಭ್ಯರ್ಥಿ ಹೆಸರನ್ನು ಚರ್ಚಿಸಿ ಹೈಕಮಾಂಡ್ ಗೆ ಕಳುಹಿಸುತ್ತೇವೆ ಎಂದು ಸಹ ಸಮಜಾಯಿಶಿ ನೀಡಿದರು.
ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎನ್ನುವ ಮೂಲಕ ಎಲ್ಲಾ ಹೈಕಮಾಂಡ್ ಲೀಲೆ ಎಂದು ಒತ್ತಿ ಹೇಳಿದ್ದಾರೆ. ಮುಂದಿನ ಮುಖ್ಯಮಂತ್ರಿ ವಿಚಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, ‘ಸಿದ್ದರಾಮಯ್ಯ ಅವರ ಹೇಳಿಕೆ ನನಗೆ ಮಾಹಿತಿ ಇಲ್ಲ. ಕಾಂಗ್ರೆಸ್ ಪಕ್ಷವೇ ಒಂದು ಕುಟುಂಬ. ನಮ್ಮ ಕುಟುಂಬದಲ್ಲಿ ಯಾವುದೇ ಕಲಹ ಇಲ್ಲ. ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರು ಏನು ಹೇಳುತ್ತಾರೋ ಅದೇ ಅಂತಿಮ’ ಎಂದು ಹೈಕಮಾಂಡ್ ಬಗ್ಗೆ ಮತ್ತೊಮ್ಮೆ ಹೇಳಿದರು.
Discussion about this post