ಮುಂಬೈ: ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಗಳ ಗ್ರಾಹಕರು ‘ನಿಮ್ಮ ಗ್ರಾಹಕರ ಬಗ್ಗೆ ತಿಳಿಯಿರಿ’ (ಕೆವೈಸಿ) ಪ್ರಕ್ರಿಯೆಯನ್ನು ಡಿಸೆಂಬರ್ ಅಂತ್ಯದೊಳಗೆ ಪೂರೈಸದಿದ್ದರೆ ಅಂಥವರ ಖಾತೆ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಹೀಗೆ ನಿಷ್ಕ್ರಿಯಗೊಂಡ ಖಾತೆಗಳಿಂದ ಹಣತೆಗೆಯುವುದು ಅಥವಾ ಜಮಾ ಮಾಡಲು ಆಗುವುದಿಲ್ಲ. ವೈಯಕ್ತಿಕ ಮತ್ತು ಸಂಸ್ಥೆಗಳ ಖಾತೆಗಳಿಗೆ ಇದು ಅನ್ವಯವಾಗಲಿವೆ ಎನ್ನಲಾಗಿದೆ.
ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಗಳು ಗ್ರಾಹಕರ ಕುರಿತ ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಲ್ಲದ ಕಾರಣ ನಿಯಮ ಪಾಲನೆ ಮಾಡಿಲ್ಲ. ಹೀಗಾಗಿ ಆರ್ಬಿಐ ಈ ಹಿಂದೆಯೇ ಇಂಥ ಖಾತೆಗಳನ್ನು ನಿಷ್ಕ್ರಿಯಗೊಳಿಸಲು ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಗಳಿಗೆ ಸೂಚಿಸಿತ್ತು. ಆದರೆ, ಕೊರೊನಾ ಎರಡನೇ ಅಲೆಯ ಕಾರಣ ಇದನ್ನು ಮುಂದೂಡಿತ್ತು. ಆದರೀಗ ಡಿಸೆಂಬರ್ 31ರೊಳಗೆ ಕೆವೈಸಿ ಪೂರ್ಣಗೊಳಿಸುವಂತೆ ಕಟ್ಟುನಿಟ್ಟಿನ ಸೂಚನೆಯನ್ನು ಬ್ಯಾಂಕ್ಗಳಿಗೆ ನೀಡಿದೆ.
ಹಣಕಾಸು ವ್ಯವಹಾರದಲ್ಲಿ ಅಕ್ರಮಗಳನ್ನು ತಡೆಯಲು ಆರ್ಬಿಐ ಈ ಕ್ರಮ ಕೈಗೊಂಡಿದೆ. ಬೇನಾಮಿ ಖಾತೆಗಳ ಮೂಲಕ ಅಕ್ರಮ ಹಣ ವರ್ಗಾವಣೆ, ತೆರಿಗೆ ವಂಚನೆಯಂತಹ ಅಕ್ರಮಗಳಿಗೆ ಕಡಿವಾಣ ಹಾಕುವುದು ಇದರ ಉದ್ದೇಶ ಆಗಿದೆ.
ಉಳಿತಾಯ ಖಾತೆಗಳನ್ನು ಹೊಂದಿರುವ ಗ್ರಾಹಕರು 10 ವರ್ಷಕ್ಕೆ ಒಮ್ಮೆ ಕೆವೈಸಿ ಮಾಹಿತಿಯನ್ನು ನವೀಕರಿಸಬೇಕು. ಹೆಚ್ಚಿನ ಮೊತ್ತದ ವಹಿವಾಟು ನಡೆಸುವವರನ್ನು ಹೈರಿಸ್ಕ್ ಪ್ರೊಫೈಲ್ ಎಂದು ಪರಿಗಣಿಸಲಾಗುತ್ತದೆ. ಇಂಥ ಖಾತೆದಾರರು ಎರಡು ವರ್ಷಕ್ಕೊಮ್ಮೆ ಕೆವೈಸಿ ದಾಖಲೆ ಸಲ್ಲಿಸಬೇಕು.
ಬ್ಯಾಂಕ್ ಅಥವಾ ಹಣಕಾಸು ಸಂಸ್ಥೆಗಳ ಶಾಖೆಗೆ ತೆರಳಿ ಅಥವಾ ಆನ್ಲೈನ್ ಮೂಲಕವೂ ಕೆವೈಸಿ ಪ್ರಕ್ರಿಯೆಯನ್ನು ಗ್ರಾಹಕರು ಪೂರ್ಣಗೊಳಿಸಬಹುದಾಗಿದೆ.
ಬ್ಯಾಂಕ್ಗಳು ಕೆವೈಸಿ ಪ್ರಕ್ರಿಯೆಗೆ ಸೂಚನೆ ನೀಡುತ್ತಿವೆ ಎಂಬುದನ್ನು ತಿಳಿದ ಸೈಬರ್ ಖದೀಮರು ಹಣ ಲಪಟಾಯಿಸುವ ಉದ್ದೇಶದಿಂದ ಗ್ರಾಹಕರಿಂದ ದೂರವಾಣಿ ಮೂಲಕವೇ ಪಾಸ್ವರ್ಡ್, ಎಟಿಎಂ ಪಿನ್, ಸಿವಿವಿ ಸಂಖ್ಯೆಗಳನ್ನು ಪಡೆದುಕೊಳ್ಳುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಹೀಗಾಗಿ ಗ್ರಾಹಕರು ಈ ಬಗ್ಗೆ ಹೆಚ್ಚು ಎಚ್ಚರಿಕೆ ವಹಿಸಬೇಕು.
KYC: Banks, Finance Companies Will Freeze It From Jan 1
ಇದನ್ನು ಓದಿ: ರೇಷನ್ ಕಾರ್ಡ್ ಹೊಂದಿದ ಸದಸ್ಯರಿಗೆ ಇ-ಕೆವೈಸಿ ಕಡ್ಡಾಯ
ಇದನ್ನೂ ಓದಿ: RBI: ಬ್ಯಾಂಕ್ಗಳ ಸೇವ್ ಲಾಕರ್ ನಿಯಮ ಪರಿಷ್ಕರಿಸಿದ ಆರ್ಬಿಐ
Discussion about this post