ನವದೆಹಲಿ: ಶಿರೋಮಣಿ ಅಕಾಲಿದಳ (SAD) ಮುಖ್ಯಸ್ಥ ಸುಖ್ಬೀರ್ ಬಾದಲ್ ಮತ್ತು ಮಾಜಿ ಕೇಂದ್ರ ಸಚಿವ ಹರ್ಸಿಮ್ರತ್ ಕೌರ್ ಬಾದಲ್ ಸೇರಿದಂತೆ 15 ಪಕ್ಷದ ನಾಯಕರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ಸಂಸತ್ತಿಗೆ ಪ್ರತಿಭಟನಾ ಮೆರವಣಿಗೆ ನಡೆಸಿದಕ್ಕೆ ಬಂಧಿಸಿ, ಸಂಸದ್ ಮಾರ್ಗ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು ಪೊಲೀಸ್ ಮೂಲಗಳು ತಿಳಿಸಿವೆ ಎಂದು ಎಎನ್ಐ (ANI) ಸುದ್ದಿಸಂಸ್ಥೆ ವರದಿ ಮಾಡಿದೆ.
ಕೇಂದ್ರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳು ಜಾರಿಗೆ ಬಂದು ಒಂದು ವರ್ಷ ಪೂರ್ತಿಗೊಂಡಿರುವ ಹಿನ್ನಲೆಯಲ್ಲಿ ಗುರುದ್ವಾರ ರಕಾಬ್ ಗಂಜ್ ಸಾಹಿಬ್ನಿಂದ ಸಂಸತ್ತಿನವರೆಗೆ ಎಸ್ಎಡಿ (SAD) ಪ್ರತಿಭಟನಾ ಮೆರವಣಿಗೆ ಆಯೋಜಿಸಿತ್ತು
ಇಂದು (ಶುಕ್ರವಾರ) ಮುಂಜಾನೆ ಹಂಚಿಕೊಂಡ ಟ್ವೀಟ್ನಲ್ಲಿ, ಎಲ್ಲಾ ದೆಹಲಿ ಗಡಿಗಳನ್ನು ಮುಚ್ಚಲಾಗಿದೆ ಮತ್ತು ಪಂಜಾಬ್ ವಾಹನಗಳನ್ನು ಅಧಿಕಾರಿಗಳು ನಿಲ್ಲಿಸಿದ್ದಾರೆ ಎಂದು ಪಕ್ಷ ಹೇಳಿದೆ.
“ನಮ್ಮ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಪಂಜಾಬಿಗಳಿಗೆ ಹೇಳಲಾಗುತ್ತಿದೆ. ನಮ್ಮ ಶಾಂತಿಯುತ ಧ್ವನಿಯು ಶಕ್ತಿಗಳನ್ನು ಹೆದರಿಸಿದೆ ಎಂದು ಎಸ್ಎಡಿ ಟ್ವೀಟ್ (S.A.D. TWEETED) ಮಾಡಿದೆ.
ಎಎನ್ಐ ಪ್ರಕಾರ, ‘ಬ್ಲಾಕ್ ಫ್ರೈಡೇ’ (BLACK FRIDAY PROTEST) ಪ್ರತಿಭಟನೆಗೆ ಸುಖ್ಬೀರ್ ಬಾದಲ್ ಮತ್ತು ಹರ್ಸಿಮ್ರತ್ ಕೌರ್ ಬಾದಲ್ ನೇತೃತ್ವ ವಹಿಸಿದ್ದರು ಎಂದು ಹೇಳಲಾಗಿದೆ. ಈ ಹಿಂದೆ, ಎಸ್ಎಡಿ ಪ್ರಧಾನ ಕಾರ್ಯದರ್ಶಿ ಪ್ರೇಮ್ ಸಿಂಗ್ ಚಂದುಮಾಜ್ರಾ ಅವರು ಮೆರವಣಿಗೆ ಶಾಂತಿಯುತವಾಗಿರುತ್ತದೆ ಎಂದು ಸಹ ಹೇಳಿಕೆ ನೀಡಿದ್ದರು.
ಪಕ್ಷದ ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ ಮಾಡಲಾಯಿತು ಮತ್ತು ಅವರ ವಾಹನಗಳ ಮೇಲೆ ಭದ್ರತಾ ಸಿಬ್ಬಂದಿ ದಾಳಿ ಮಾಡಿದ್ದಾರೆ ಎಂದು ಬಾದಲ್ ಹೇಳಿದ್ದಾರೆ.
“ಶಾಂತಿಯುತ ಪ್ರತಿಭಟನೆಗೆ ತಡೆಯೊಡ್ಡಲಾಯ್ತು. ಪಂಜಾಬ್ ಸೇರಿದಂತೆ ಇಡೀ ದೇಶವು ತನ್ನ ಸರ್ಕಾರದ ವಿರುದ್ಧವಾಗಿದೆ ಎಂದು ಪ್ರಧಾನಿ ಮೋದಿಗೆ ಸಂದೇಶ ನೀಡಲು ಇಲ್ಲಿಗೆ ಬಂದಿದ್ದೇವೆ ಎಂದು ಬಾದಲ್ ಹೇಳಿದ್ದಾರೆ.
ಎಸ್ಎಡಿ (SAD) ಪ್ರತಿಭಟನಾ ಮೆರವಣಿಗೆ ಆಯೋಜಿಸಿತ್ತು, ನವದೆಹಲಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ದೆಹಲಿಯಾದ್ಯಂತ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ದೆಹಲಿ ಪೊಲೀಸ್ ಅಧಿಕಾರಿಗಳು ಎಎನ್ಐಗೆ ತಿಳಿಸಿದ್ದಾರೆ.
Discussion about this post