• Home
  • About Us
  • Contact Us
  • Terms of Use
  • Privacy Policy
Thursday, August 7, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

ನ್ಯಾಯಾಧೀಶರಾಗುವವರಲ್ಲಿ ನ್ಯಾಯಿಕ ಮನೋಧರ್ಮ ಇರಬೇಕು

ಜಿಲ್ಲೆಯಿಂದ ಉಚ್ಛನ್ಯಾಯಾಲಕ್ಕೆ ನ್ಯಾಯಾಧೀಶರಾಗಿ ನೇಮಕಗೊಂಡ ಎಚ್.ಟಿ.ನರೇಂದ್ರ ಪ್ರಸಾದ್

Shri News Desk by Shri News Desk
Oct 17, 2021, 03:09 pm IST
in ಚಿಕ್ಕಮಗಳೂರು
H.T. Narendra felicitated as Judge

ನ್ಯಾಯಾಧೀಶರಾಗಿ ನೇಮಕಗೊಂಡ ಎಚ್.ಟಿ.ನರೇಂದ್ರಗೆ ಸನ್ಮಾನ

Share on FacebookShare on TwitterTelegram

ಚಿಕ್ಕಮಗಳೂರು: ನ್ಯಾಯಾಧೀಶರಾಗುವವರಲ್ಲಿ ನ್ಯಾಯಿಕ ಮನೋಧರ್ಮ ಇರಬೇಕು. ಇಂತಹ ಗುಣ ಚಿಕ್ಕಮಗಳೂರಿನ ಯುವಕರಲ್ಲಿ ಹೆಚ್ಚಿದೆ ಎಂದು ಜಿಲ್ಲೆಯಿಂದ ಉಚ್ಛನ್ಯಾಯಾಲಯದ ನ್ಯಾಯಾಧೀಶರಾಗಿ ನೇಮಕಗೊಂಡಿರುವ ಎಚ್.ಟಿ.ನರೇಂದ್ರ ಪ್ರಸಾದ್ ಹೇಳಿದರು.

ನ.ರಾ.ಪುರ ತಾಲ್ಲೂಕಿನ ಮಡಬೂರಿನವರಾದ ನರೇಂದ್ರ ಪ್ರಸಾದ್  ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಚಿಕ್ಕಮಗಳೂರು ವಕೀಲರ ಸಂಘದಿಂದ ಹಮ್ಮಿಕೊಳ್ಳಲಾಗಿದ್ದ ಕಾನೂನು ಅರಿವು ಹಾಗೂ ಅಭಿನಂದನಾ ಸಮಾರಂಭದಲ್ಲಿ ಗೌರವ ಸ್ವೀಕರಿಸಿ ಮಾತನಾಡಿದರು.

ನ್ಯಾಯಿಕ ಮನೋಧರ್ಮದ ಗುಣಮಟ್ಟ ಇರುವುದೇ ನಮ್ಮ ಚಿಕ್ಕಮಗಳೂರು ಯುವಕರಲ್ಲಿ. ಕೇವಲ ವಿದ್ಯಾಭ್ಯಾಸ ಮಾಡಿ ಕಾನೂನನ್ನು ಚೆನ್ನಾಗಿ ತಿಳಿದುಕೊಂಡ ಮಾತ್ರಕ್ಕೆ ನ್ಯಾಯಾಧೀಶರಾಗಲು ಆಗುವುದಿಲ್ಲ. ನ್ಯಾಯಿಕ ಮನೋಧರ್ಮ ಇರಬೇಕು. ಇದಕ್ಕೆ ಸ್ವಲ್ಪ ಸಮಾಧಾನವಾಗಿ ಕೆಲಸ ಮಾಡುವ ಅನುಭವ ಇರಬೇಕು. ಅದು ನಮ್ಮ ಗುಣ ಆದರೂ ಹೈಕೋರ್ಟ್‌ನಲ್ಲಿ ನಮ್ಮ ಪ್ರಾತಿನಿಧ್ಯ ಕಡಿಮೆ ಆಗಿದೆ ಎಂದರು.

ಧಾರವಾಡ, ಗುಲ್ಬರ್ಗದಲ್ಲಿ ನ್ಯಾಯಾಧೀಶರಾಗಿ ಕೆಲಸ ಮಾಡಿದ್ದೇವೆ. ಇಲ್ಲಿ ಸಿಕ್ಕ ಗೌರವ ನಮ್ಮ ಹೃದಯವನ್ನು ಸ್ಪರ್ಶಿಸಿದೆ. ನಮ್ಮ ಜಿಲ್ಲೆಯಿಂದ ಒಬ್ಬರು ಹೈಕೋರ್ಟ್ ನ್ಯಾಯಾಧೀಶರಾಗಲು ೭೦ ವರ್ಷ ಬೇಕಾಯಿತು ಎನ್ನುವ ವಿಷಾಧವಿದೆ. ಇದರಲ್ಲಿ ನಮ್ಮ ತಪ್ಪೂ ಇದೆ. ವಿದ್ಯಾಭ್ಯಾಸವನ್ನು ಮಂಗಳೂರು, ಬೆಂಗಳೂರು ಅಥವಾ ಮೈಸೂರಿನಲ್ಲಿ ಮಾಡುತ್ತೇವೆ. ವಿದ್ಯಾಭ್ಯಾಸ ಮುಗಿಸಿ ಶೇ.೯೦ ರಷ್ಟು ಮಂದಿ ಮತ್ತೆ ತವರಿಗೆ ವಾಪಾಸಾಗಿ ಇಲ್ಲಿ ಕೃಷಿಗೆ ಉತ್ತಮ ಅವಕಾಶವಿದೆ ಎಂದು ಅದಕ್ಕೆ ಒತ್ತುಕೊಡುತ್ತಾರೆ. ವಕೀಲ ವೃತ್ತಿಗೆ ಹೋಗುವವರೇ ಕಡಿಮೆ ಎಂದರು.

ವಕೀಲ ವೃತ್ತಿ ಒಂದು ಉದಾತ್ತ ಸೇವೆ, ಬಹುತೇPರಿಗೆ ಐಟಿ ಉದ್ಯೋಗಿಗಳು ಒಳ್ಳೆ ಸೂಟ್ ಹಾಕಿಕೊಂಡು ಹೋಗುತ್ತಾರೆ ಎನ್ನಿಸಬಹುದು. ಆದರೆ ಎಲ್ಲದಕ್ಕಿಂತ ವಕೀಲ ವೃತ್ತಿ ಶ್ರೇಷ್ಠವಾಗಿದ್ದು, ಎಂದಿಗೂ ಈ ವೃತ್ತಿಗೆ ಬಂದು ತಪ್ಪು ಮಾಡಿಕೊಂಡೆ ಎಂದು ಅಂದುಕೊಳ್ಳಬೇಡಿ. ಈ ದೇಶದ ಸ್ವಾತಂತ್ರ್ಯ ಹೊರಾಟದ ಮುಂಚೂಣಿಯಲ್ಲಿದ್ದವರೆಲ್ಲ ವಕೀಲರಾಗಿದ್ದವರೆ ಎಂದರು.

ಹೈಕೊರ್ಟ್ ಜಡ್ಜ್ ಆಗಲು ತಂದೆ ಇತರೆ ಸಂಬಂಧಿಕರು ಜಡ್ಜ್ ಆಗಿದ್ದರೆ ಮಾತ್ರ ಸಾಧ್ಯ, ಇಲ್ಲವೇ ಯಾರದ್ದೂ ಶಿಫಾರಸ್ಸಿರಬೇಕು ಎನ್ನುವುದೆಲ್ಲ ಸುಳ್ಳು. ಅದಕ್ಕೆ ನಾನೇ ಉದಾಹರಣೆ. ನಮ್ಮೂರಿನಲ್ಲಿ ನಾನೇ ಮೊದಲ ಕಾನೂನು ಪದವಿಧರ. ಬೆಂಗಳೂರಿಗೆ ಹೋದಾಗಲೂ ಯಾವ ಹಿರಿಯ ವಕೀಲರ ಪರಿಚಯ ಇರಲಿಲ್ಲ. ಕಠಿಣ ಪರಿಶ್ರಮ ಮತ್ತು ಪ್ರಾಮಾಣಿಕತೆಗೆ ಎಂದಿದ್ದರೂ ಮನ್ನಣೆ ಸಿಕ್ಕೇ ಸಿಗುತ್ತದೆ. ಯಾವುದೇ ಜಾತಿಯ ಪ್ರಶ್ನೆ ಇಲ್ಲಿ ಇರುವುದಿಲ್ಲ. ಪರಿಶ್ರಮ ಇದ್ದರೆ ಯಾವುದೇ ಗುರಿಯನ್ನು ತಲುಪಬಹುದು ಅದು ನಮ್ಮ ಪ್ರಜಾಪ್ರಭುತ್ವದ ಸೌಂದರ್ಯ ಎಂದರು.

ಯುವ ವಕೀಲರು ಪರೀಕ್ಷೆಗಳನ್ನು ಬgಯಬೇಕು. ನುರಿತ ವಕೀಲರನ್ನು ಕರೆಸಿ ವಿಚಾರ ಸಂಕಿರಣಗಳನ್ನು ಏರ್ಪಡಿಸಬೇಕು. ಸುಮ್ಮನೆ ಕೋರ್ಟ್‌ಗೆ ಬಂದು ಹೋದರೆ ಸಾಲದು ಎಂದು ಸಲಹೆ ಮಾಡಿದರು.

ವಿಧಾನ ಪರಿಷತ್ ಸದಸ್ಯ, ಕರ್ನಾಟಕ ವಕೀಲರ ಸಂಘದ ಸದಸ್ಯ ಎಸ್.ಎಲ್.ಬೋಜೇಗೌಡ ಮಾತನಾಡಿ ವಕೀಲರು ಏನಪ್ಪಾ ನಾವು ವೃತ್ತಿಯನ್ನು ಆಯ್ಕೆ ಮಾಡಿಕೊಂಡೆವಲ್ಲ ಎಂದುಕೊಳ್ಳಬಾರದು. ಯಾವುದೇ ವೃತ್ತಿಯನ್ನು ಅಪ್ಪಿಕೊಂಡು ಪ್ರೀತಿಸಬೇಕಾಗುತ್ತದೆ. ಅದರಲ್ಲಿ ತಲ್ಲೀನರಾಗಬೇಕಾಗುತ್ತದೆ. ಅನೇಕ ಸರ್ಕಾರಿ ವಕೀಲರು ಫೈಲ್‌ಗಳನ್ನೇ ನೋಡಿರುವುದಿಲ್ಲ. ಕೋರ್ಟ್ ಇದನ್ನೆಲ್ಲಾ ತುಂಬಾ ಗಂಭೀರವಾಗಿ ಗಮನಿಸುತ್ತದೆ. ಅವರ ಸೇವಾ ಅವಧಿಯ ಸಾಧನೆಯ ದಾಖಲೆಗಳನ್ನು ಪರಿಗಣಿಸಿ ನ್ಯಾಯಾಧೀಶರ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಕರಾರುವಕ್ಕಾಗಿ ವಾದ ಮಂಡಿಸಬೇಕಾಗುತ್ತದೆ ಎಂದರು.

ಇಂತಹ ಸರ್ಕಾರಿ ವಕೀಲರು ಹೇಳಿದ್ದಾರೆ ಎಂದರೆ ಅದನ್ನು ನ್ಯಾಯಾಧೀಶರು ಕೂಡಲೇ ಒಪ್ಪುವಂತಿರಬೇಕು. ಅದನ್ನು ಅನುಮಾನದಲ್ಲಿ ನೋಡುವಂತಾಗಬಾರದು. ಎಂದೂ ಅನುಮಾನಕ್ಕೆಡೆಮಾಡಿಕೊಡದೆ ನಿರಂತರ ಕಾಯಕ ಮಾಡಿದ ಫಲವಾಗಿ ನರೇಂದ್ರ ಪ್ರಸಾದ್ ಅವರಿಗೆ ಇಂದು ನ್ಯಾಯಾಧೀಶರ ಹುದ್ದೆ ಲಭಿಸಿದೆ ಎಂದರು.

ಚಿಕ್ಕಮಗಳೂರು ವಕೀಲರ ಸಂಘದ ಅಧ್ಯಕ್ಷ ವಿ.ಟಿ.ಥೋಮಸ್ ಮಾತನಾಡಿ, ಕಂದಾಯ ವಿಷಯ ಸೇರಿದಂತೆ ಎಲ್ಲಾ ವಿಷಯಗಳಲ್ಲಿ ತುಂಬಾ ಜ್ಞಾನವನ್ನು ನರೇಂದ್ರ ಪ್ರಸಾದ್ ಹೊಂದಿದ್ದಾರೆ. ಅಂತಹವರು ಇದ್ದಾಗ ಈಗ ಇರುವ ನ್ಯಾಯಾಂಗ ವ್ಯವಸ್ಥೆಯನ್ನು ಮುಂದುವರಿಸಿಕೊಂಡು ಹೋಗಲು ಸಾಧ್ಯ ಎಂದರು.

ಒಂದನೆ ಹೆಚ್ಚುವರಿ ಮತ್ತು ಜಿಲ್ಲಾ ನ್ಯಾಯಾಧೀಶರಾದ ಪುಷ್ಪಾಂಜಲಿ, ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ. ಕೆ.ಶಿಲ್ಪಾ, ಪ್ರಧಾನ ಸಿವಿಲ್ ಲಕ್ಷ್ಮೀಶ್ ಇತರೆ ನ್ಯಾಯಾಧೀಶರು, ವಕೀಲರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಹಿರಿಯ ವಕೀಲ ಎಸ್.ಎಸ್.ವೆಂಕಟೇಶ್ ಸ್ವಾಗತಿಸಿ, ಸುಜೇಂದ್ರ ನಿರೂಪಿಸಿ, ದೇವರಾಜ್ ವಂದಿಸಿದರು.

Tags: H.T. Narendra felicitated as JudgeTOP NEWS
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಇಂಥವರನ್ನು ಎಂದಿಗೂ ಮನೆಗೆ ಕರಿಯಬೇಡಿ ಎನ್ನುತ್ತಾರೆ ಚಾಣಕ್ಯರು..

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

ನಿಮ್ಮ ದೃಷ್ಟಿ ತೀಕ್ಷ್ಣವಾಗಿರಬೇಕು, ಕಣ್ಣು ಆರೋಗ್ಯವಾಗಿರಬೇಕು ಅಂದ್ರೆ ಈ ಟಿಪ್ಸ್ ಅನುಸರಿಸಿ

Beauty Tips: ಈ 6 ಸೌಂದರ್ಯ ಸಲಹೆ ಅನುಸರಿಸಿ, ನಿಮ್ಮ ಬ್ಯೂಟಿ ಹೆಚ್ಚಿಸಿ

Spiritual Story: ವಿಷ್ಣು ಮತ್ತು ಲಕ್ಷ್ಮೀ ಮಾರುವೇಷದಲ್ಲಿ ಭೂಲೋಕಕ್ಕೆ ಬಂದಾಗ ಏನಾಗಿತ್ತು..? ಸುಂದರ ಕಥೆ

Spiritual: 6 ಪುರಾಣ ಕಥೆಗಳು: ಗಂಗಾ ಸ್ನಾನ, ಭೃಗು ಋಷಿ ಶಾಪ, ಹನುಮನ ಗಧೆ ಹಲವು ವಿಷಯಗಳ ಬಗ್ಗೆ ಕಥೆ

ನೆನೆಸಿಟ್ಟ ಹೆಸರು ಕಾಳನ್ನು ಒಂದು ತಿಂಗಳು ಸೇವಿಸಿ ನೋಡಿ, ವಾವ್ ಅಂತಾ ನೀವೇ ಹೇಳ್ತೀರಾ..

Recipe: 10 ಬಗೆಯ ರುಚಿಯಾದ ಧಿಡೀರ್ ತಿಂಡಿಗಳ ರೆಸಿಪಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In