ಹೃಷಿಕೇಶ್: ೨೦೦೧ರಲ್ಲಿ ಮುಖ್ಯಮಂತ್ರಿಯಾಗುವ ಅವಕಾಶ ಸಿಕ್ಕಿತ್ತು. ಜನ ಬೆಂಬಲದಿಂದ ಪ್ರಧಾನಿ ಆಗಿದ್ದೇನೆ. ಆದರೆ, ಭವಿಷ್ಯದಲ್ಲಿ ಪ್ರಧಾನಿ ಆಗ್ತೇನೆ ಎಂದು ಯಾವತ್ತೂ ಸಹ ಕನಸಲ್ಲೂ ಅನ್ಕೊಂಡಿರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಸಾಂವಿಧಾನಿಕ ಹುದ್ದೆ ಸ್ವೀಕರಿಸಿ ಅ. ೭ಕ್ಕೆ ಇಪ್ಪತ್ತು ವರ್ಷ ಪೂರೈಸುತ್ತಿತ್ತು. ದೇಶಾದ್ಯಂತ ಇದೇ ದಿನ ಆಕ್ಸಿಜನ್ ಘಟಕಗಳ ಉದ್ಘಾಟನೆ ನಡೆಸಲಾಗುತ್ತಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದರು. ಅಕ್ಸಿಜನ್ ಘಟಕದ ಉದ್ಘಾಟನೆ ನಿಮಿತ್ತ ಉತ್ತರಾಖಂಡ್ ರಾಜ್ಯದ ಹೃಷಿಕೇಶಕ್ಕೆ ತೆರಳಿರುವ ಮೋದಿ ಏಮ್ಸ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಪ್ಲಾಂಟ್ ಉದ್ಘಾಟನೆ ಮಾಡಿ ಮಾತನಾಡಿದರು.
ಪಿಎಂ ಕೇರ್ ಫಂಡ್ (PM CARE FUND) ಅಡಿಯಲ್ಲಿ ದೇಶದ ೩೫ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಾಳಲ್ಲಿ ಆಕ್ಸಿಜನ್ ಪ್ಲಾಂಟ್ ಏಕಕಾಲದಲ್ಲಿ ಉದ್ಘಾಟನೆಯನ್ನು ನೆರವೇರಿಸಲಾಗಿದೆ. ಕಡಿಮೆ ಅವಧಿಯಲ್ಲಿ ದೇಶದಲ್ಲಿ ಅಕ್ಸಿಜನ್ ಪ್ಲಾಂಟ್, ಕೋವಿಡ್ ಟೆಸ್ಟ್ ಲ್ಯಾಬ್ ಇದೆ. ಅಗತ್ಯ ಮೂಲ ಸೌಲಭ್ಯಗಳನ್ನು ಪೂರೈಸಿಕೊಂಡಿದ್ದು ದೇಶದ ಸಾಮರ್ಥ್ಯವನ್ನು ತೋರಿಸಿದ್ದೇವೆ.
ಭಾರತ ಈಗ ಕೋವಿಡ್ ಲಸಿಕೆ, ಕಿಟ್, ಮಾಸ್ಕ್ ಇನ್ನಿತರ ಉತ್ಪನ್ನಗಳನ್ನು ವಿದೇಶಗಳಿಗೆ ಪೂರೈಕೆ ಮಾಡುತ್ತಿದೆ. ದೇಶದಾದ್ಯಂತ ಕೋವಿಡ್ ಲಸಿಕೆಯನ್ನು ನೀಡಿದೆ ಜೊತೆಗೆ ಸಾಗರ ಮತ್ತು ಕಾಡಿನ ಮೂಲೆಗಳಲ್ಲಿರುವ ಜನರಿಗೂ ಲಸಿಕೆಯನ್ನು ತಲುಪಿಸಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಮೋದಿಯವರನ್ನು ಶ್ಲಾಘಿಸಿದ ಉತ್ತರಾಖಂಡ್ ಮುಖ್ಯಮಂತ್ರಿಪುಷ್ಕರ್ ಸಿಂಗ್ ಧಾಮಿ ಮೋದಿಯವರನ್ನು ಕುರಿತು, ಸಾರ್ವಜನಿಕ ಜೀವನದ ೨೦ ವರ್ಷಗಳನ್ನು ಪೂರೈಸಿದ ದಿವಸವೇ ನಮ್ಮಲ್ಲಿ ಆಗಮಿಸಿದ್ದು ನಿಜಕ್ಕೂ ಹೆಮ್ಮೆಯ ಕ್ಷಣ ಎಂದಿದ್ದಾರೆ. ಅಷ್ಟೇ ಅಲ್ಲದೆ ನರೇಂದ್ರ ಮೋದಿಯವರು ಈಗ ಜಗತ್ತಿನ ಅತ್ಯಂತ ಪ್ರಭಾವಿ ನಾಯಕ, ಅವರು ದೇವಭೂಮಿಗೆ ಬಂದಿದ್ದು ಶುಭದ ಸೂಚನೆ, ಇದಕ್ಕಾಗಿ ನಾವು ಕಾಯುತ್ತಿದ್ದೆವು ಎಂದು ಹಾಡಿ ಹೊಗಳಿದ್ದಾರೆ.
೨೦೦೧ರಲ್ಲಿ ಅಕ್ಟೋಬರ್ ೭ರಂದು ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ, ೧೩ ವರ್ಷ ಪೂರೈಸಿದ್ದರು. ನಂತರ ಮುಖ್ಯಮಂತ್ರಿಯಾಗಿದ್ದೇ ಪ್ರಧಾನಿಯಾಗಿ ಏಳು ವರ್ಷ ಪೂರೈಸಿದ್ದು, ಒಟ್ಟು ೨೧ನೇ ವರ್ಷವನ್ನು ಹೃಷಿಕೇಶದಿಂದ ಆರಂಭಿಸುತ್ತಿದ್ದೇನೆ ಎಂಬುದಾಗಿ ಇದನ್ನೇ ಉಲ್ಲೇಖ ಮಾಡಿದ್ದಾರೆ.
Discussion about this post