ಬೆಂಗಳೂರು: ಮೊನ್ನೆ ನಡೆದ ಪಾಲಿಕೆ ಚುನಾವಣೆಗಳನ್ನೂ ಜಯಿಸಿದ ಬಿಜೆಪಿ ವೇಗಕ್ಕೆ ಬ್ರೇಕ್ ಹಾಕಲು ರಾಜ್ಯದಲ್ಲಿನ ಜಾತ್ಯಾತೀತ ಪಕ್ಷಗಳು ಒಗ್ಗೂಡಬೇಕೆಂದು ರಾಜ್ಯ ಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಈ ಕುರಿತು ಸುದ್ದಿಗಾರಾರೊಂದಿಗೆ ಮಾತನಾಡಿ, ಕಲಬುರಗಿ ಪಾಲಿಕೆಯಲ್ಲಿ ಕಾಂಗ್ರೆಸ್ ೨೭ ಸ್ಥಾನ ಗೆದ್ದಿದೆ. ಕೇವಲ ೨೩ ಸ್ಥಾನ ಗಳಿಸಿ ಸಲ್ಲದ ಮಾರ್ಗ ಅನುಸರಿಸಿ ಅಧಿಕಾರ ಹಿಡಿಯಲು ಯತ್ನಿಸುತ್ತಿದೆ ಎಂದಿದ್ದಾರೆ.
ತಮ್ಮ ಪಕ್ಷಕ್ಕೆ ಬೆಂಬಲ ನೀಡಬೇಕೆಂದು, ಖುದ್ದು ಮಾಜಿ ಪ್ರಧಾನಿ ದೇವೇಗೌಡರ ಜೊತೆಗೆ ಚರ್ಚಿಸಿರುವುದಾಗಿ ಅವರು ಇದೇ ವೇಳೆ ತಿಳಿಸಿದ್ದಾರೆ. ಕಾಂಗ್ರೆಸ್ ಜನಾಭಿಪ್ರಾಯದ ಪ್ರಕಾರ ಅಧಿಕಾರದ ಗದ್ದುಗೆ ಹಿಡಿಯಲು ಅವಕಾಶ ಇದೆ. ಆದ್ರೆ ಮೇಯರ್ ಬಿಜೆಪಿಯೋರೆ ಆಗಲಿದ್ದಾರೆ ಎಂದಿದ್ದ ಮುಖ್ಯಮಂತ್ರಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಲಿಲ್ಲ.
ಕಾಂಗೈ-ಜೆಡಿಎಸ್ ನಡುವೆ ಯಾವುದೇ ಶಿಥಲ ಸಮರವಿಲ್ಲ ಎಂದು ಪ್ರತಿಪಾದಿಸಿದ ಅವರು ನಮ್ಮ ನಡುವೆ ಒಡಕು ತರಬೇಡಿ ಎಂದು ಎಚ್ಚರಿಸಿದ್ದಾರೆ. ಸಿದ್ದಾಂತದ ಮೇಲೆ ನಡೆಯುವ ನಮಗೆ ಇತರೆ ಪಕ್ಷಗಳ ನಡುವೆ ಹೊಂದಾಣಿಕೆ ಸುಲಭ. ತಮಿಳುನಾಡಿನಲ್ಲೂ ಡಿಎಂಕೆ ಜೊತೆಗೆ ನಮ್ಮ ಕೈಸೇರಿದೆ ಎಂದರು.
Discussion about this post