ನವದೆಹಲಿ : ಆಫ್ಘಾನಿಸ್ತಾನದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಹವಣಿಸುತ್ತಿರುವ ತಾಲಿಬಾನಿಗಳು ಇದೀಗ ಭಾರತಕ್ಕೆ ಪತ್ರವನ್ನು ಬರೆದಿದ್ದಾರೆ ಎಂದು ರಾಷ್ಟ್ರೀಯ ಸುದ್ದಿವಾಹಿನಿ ಇಂಡಿಯಾ ಟುಡೇ ವರದಿ ಮಾಡಿದೆ. ಸದರಿ ಪತ್ರದಲ್ಲಿ ಆಫ್ಘಾನಿಸ್ತಾನ ಮತ್ತು ಭಾರತದ ನಡುವೆ ವಿಮಾನ ಹಾರಾಟವನ್ನು ಪುನರಾರಂಭಿಸುವ ಸಲುವಾಗಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ ಎಂದು ಸಹ ವರದಿಯಾಗಿದೆ.
ಅಫ್ಘಾನಿಸ್ತಾನದ ನಾಗರೀಕ ವಿಮಾನಯಾನ ಪ್ರಾಧಿಕಾರದ ಹಂಗಾಮಿ ಸಚಿವ ಅಲ್ಹಾಜ್ ಹಮೀಉಲ್ಲಾ ಅಖುಂಜಾದಾ ಭಾರತದ ನಾಗರೀಕ ವಿಮಾನಯಾನ ಸಚಿವಾಲಯದ ಮಹಾನಿರ್ದೇಶಕ ಅರುಣ್ ಕುಮಾರ್ ಅವರಿಗೆ ಪತ್ರವನ್ನು ಬರೆದಿದ್ದಾರೆ. ಕಾಬೂಲ್ ವಿಮಾನ ನಿಲ್ದಾಣ ಅಮೇರಿಕನ್ ಪಡೆಗಳಿಂದಾಗಿ ಹಾನಿಗೊಳಗಾಗಿದೆ. ಹೀಗಾಗಿ ಕತಾರ್ನ ತಾಂತ್ರಿಕ ಸಹಾಯದೊಂದಿಗೆ ವಿಮಾನ ಹಾರಾಟಕ್ಕೆ ಸಜ್ಜಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.
ಎರಡು ದೇಶಗಳ ನಡುವೆ ಪ್ರಯಾಣಿಕರ ಸುಗಮ ಸಂಚಾರಕ್ಕೆ ಅವಕಾಶ ಕೊಡುವುದು ಮುಖ್ಯ ಉದ್ದೇಶವಾಗಿದೆ ಎಂದು ಸಹ ಹೇಳಲಾಗಿದೆ. ಸದರಿ ವಿಮಾನ ಯಾನ ಆರಂಭದಿಂದಾಗಿ ವಾಣಿಜ್ಯ ವಿಮಾನಗಳ ಹಾರಾಟದಿಂದ ವಾಣಿಜ್ಯ ಚಟುವಟಿಕೆಗಳನ್ನು ಕೈಗೊಳ್ಳಲು ಸಹಕಾರಿಯಾಗಲಿದೆ ಅನ್ನೋದನ್ನು ಪತ್ರದಲ್ಲಿ ಉಲ್ಲೇಖಿಸಲಾಗಿದೆ ಎಂದು ವರದಿ ತಿಳಿಸಿದೆ.
Discussion about this post