ಮಹಾರಾಷ್ಟ್ರದ ಅಹಮದ್ನಗರ ಆಸ್ಪತ್ರೆಯಲ್ಲಿ ಅಗ್ನಿ ಅವಘಡದ ಕಾರಣ 11 ರೋಗಿಗಳು ಅಸುನೀಗಿದ್ದಾರೆ. ಮೂರ್ನಾಲ್ಕು ಮಂದಿ ಗಾಯಗೊಂಡಿದ್ದಾರೆ.
ಅಹಮದ್ನಗರ: ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಮಹಾರಾಷ್ಟ್ರದ ಅಹಮದ್ನಗರದ ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಶನಿವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ 11 ರೋಗಿಗಳು ಸಾವನ್ನಪ್ಪಿದ್ದಾರೆ. ಐಸಿಯುನಲ್ಲಿದ್ದ 17 ಮಂದಿಯಲ್ಲಿ ಮೂರ್ನಾಲ್ಕು ಸೋಂಕಿತರಿಗೆ ಗಾಯವಾಗಿದೆ.
ಗಾಯಗೊಂಡವರು ಮತ್ತು ಇನ್ನಿತರನ್ನು ಇನ್ನೊಂದು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅಗ್ನಿ ಆಕಸ್ಮಿಕಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ ಅಗ್ನಿ ಶಾಮಕ ದಳದ ಪ್ರಕಾರ, ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಈ ರ್ದುಘಟನೆ ಸಂಭವಿಸಿರುವ ಸಾಧ್ಯತೆ ಇದೆ.
ವಿಡಿಯೋ ವೈರಲ್
ಆಸ್ಪತ್ರೆಯ ಕೆಳಮಹಡಿಯಲ್ಲಿ ಹೊಗೆ ಕಾಣಿಸಿಕೊಂಡ, ಅಪಾಯದಲ್ಲಿ ಸಿಲುಕಿದವರ ರಕ್ಷಣೆಗೆ ಆಸ್ಪತ್ರೆ ಸಿಬ್ಬಂದಿ ಧಾವಿಸುತ್ತಿರುವ ಮತ್ತು ಗಾಯಗೊಂಡವರನ್ನು ವೈದ್ಯರು ಉಪಚರಿಸುತ್ತಿರುವ, ಬೆಂಕಿಯ ಕಾರಣ ತಾರಸಿಯ ಗಾರೆ ಉದುರಿರುವ ಗೋಡೆಗಳಿಗೆ ಕಪು$್ಪಸುತ್ತಿಕೊಂಡಿರುವ ದೃಶ್ಯಗಳ ವಿಡಿಯೋ ವೈರಲ್ ಆಗಿದೆ.
ತನಿಖೆ ಆದೇಶಿಸಿದ ಸಿಎಂ:
ಅಹಮದ್ನಗರದ ಆಸ್ಪತ್ರೆಯ ರ್ದುಘಟನೆ ಬಗ್ಗೆ ದಿಗ್ಭ್ರಾಂತಿ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಮೃತರ ಕಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ರ್ದುಘಟನೆ ಬಗ್ಗೆ ಬಗ್ಗೆ ತನಿಖೆಗೂ ಆದೇಶಿಸಿದ್ದಾರೆ.
ಕೋವಿಡ್ ರೋಗಿಗಳ ಚಿಕಿತ್ಸೆಗಾಗಿಯೇ ಹೊಸದಾಗಿ ಈ ಆಸ್ಪತ್ರೆ ಕಟ್ಟಲಾಗಿತ್ತು. ಆದರೂ ಬೆಂಕಿ ಆಕಸ್ಮಿಕ ಸಂಭವಿಸಿದೆ. ಆದ್ದರಿಂದ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತಗಳನ್ನ ತಡೆಯಲು ಕೈಗೊಂಡಿದ್ದ ಮುಂಜಾಗ್ರತಾ ಕ್ರಮಗಳ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಮಹಾರಾಷ್ಟ್ರದ ಸಚಿವ ನವಾಬ್ ಮಲಿಕ್ ಹೇಳಿದ್ದಾರೆ.
ಈ ರ್ದುಟನೆ ಬಗ್ಗೆ ಸಮಗ್ರವಾಗಿ ತನಿಖೆ ನಡೆಯಬೇಕು ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಗಳು ಜರುಗಬೇಕು ಎಂದು ವಿರೋಧ ಪಕ್ಷದ ನಾಯಕ ಮತ್ತು ಮಾಜಿ ಸಿಎಂ ದೇವೇಂದ್ರ ಡ್ನವಿಸ್ ಆಗ್ರಹಿಸಿದ್ದಾರೆ.
ಪ್ರಧಾನಿ ಸಂತಾಪ:
ಅಗ್ನಿ ಅನಾಹುತದಲ್ಲಿ ಸತ್ತವರಿಗೆ ಶೋಕ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಸಾವನ್ನಪ್ಪಿದವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
Corona case decreases: ದೇಶದಲ್ಲಿ ಕೊರೋನಾ ಪ್ರಕರಣ ಇಳಿಕೆ
Fire breaks out at government hospital in Ahmadnagar
Discussion about this post