ಬೆಂಗಳೂರು: ದೆಹಲಿಯಲ್ಲಿ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಿರಂತರ ಹೋರಾಟ ನಡೆಸುತ್ತಿರುವ ರೈತರನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ‘ದಲ್ಲಾಳಿಗಳು’, ‘ಮಧ್ಯವರ್ತಿಗಳು’ ಎಂದು ಅವಮಾನಿಸಿರುವನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ.
ಬಿಜೆಪಿ ಸರ್ಕಾರದ ಕೃಷಿ ಕಾಯ್ದೆಗಳನ್ನು ರೈತರು ವಿರೋಧಿಸಿದ್ದು, ಖಂಡನೀಯ ಹೇಳಿಕೆ ನೀಡಿರುವ ಸಚಿವೆ ಕೂಡಲೇ ಕ್ಷಮೆ ಯಾಚಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.
ಈ ಹೇಳಿಕೆಯು ಸರ್ಕಾರದ ಅಧಿಕೃತ ನಿಲುವಾಗಿದ್ದರೆ ಪ್ರಧಾನಿ ಒಪ್ಪಬೇಕು, ಇಲ್ಲವಾದರೆ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಪ್ರೊ. ಎಂ. ಡಿ. ನಂಜುಂಡ ಸ್ವಾಮಿಯವರಂತಹ ಧೀಮಂತರು ನಡೆಸಿದ್ದ ರೈತ ಸಂಘದ ಹೋರಾಟಕ್ಕೆ ಹೆಮ್ಮೆಯ ಪರಂಪರೆ ಹೊಂದಿದೆ. ಇದೆಲ್ಲಾ ಅಧಿಕಾರಕ್ಕಾಗಿ ಸಚಿವರಾಗಬೇಕೆಂದು ಮಾಡುವ ದಲ್ಲಾಳಿ ಕಾರ್ಯವಲ್ಲ ಎಂದು ಹೇಳಿದ್ದಾರೆ.
ಪ್ರಧಾನಿಯು ಈ ಸಚಿವೆಯ ಹೇಳಿಕೆ ಕುರಿತು ಕ್ರಮ ಕೈಗೊಳ್ಳಬೇಕೆಂದು ತಾಕೀತು ಮಾಡಿದರು.
Discussion about this post