ಚಿಕ್ಕಮಗಳೂರು: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಜಗತ್ತೆ ನಿಬ್ಬೆರಗಾಗುವಂತೆ ಲಸಿಕೆ ವಿತರಣೆಯಲ್ಲಿ ಭಾರತ ಮಹತ್ತರ ಸಾಧನೆ ತೋರಿದೆ. ಇದು ವಿಶ್ವದ ಅತಿದೊಡ್ಡ ಲಸಿಕಾ ಅಭಿಯಾನ ಎಂದು ಶ್ಲಾಘಿಸಿ ಬಿಜೆಪಿ ಕಾರ್ಯಕರ್ತರು ಕೊರೋನಾ ವಾರಿಯರ್ಸ್ ಗಳಿಗೆ ಗೌರವ ಸಮರ್ಪಿಸಿದರು.
ಗುರುವಾರ ಹಿರೇಮಗಳೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೊರೊನಾ ವಾರಿಯರ್ಸ್ ಆಗಿ ಸೇವೆ ಸಲ್ಲಿಸುತ್ತಿರುವ ಆರೋಗ್ಯ ಸಿಬ್ಬಂದಿಗಳಿಗೆ ಗೌರವ ಸಮರ್ಪಣೆ ಸಲ್ಲಿಸಿ. ದೇಶ ಕೋವಿಡ್ ಲಸಿಕೆ ವಿತರಣೆಯಲ್ಲಿ ೧೦೦ ಕೋಟಿ ಮೈಲಿಗಲ್ಲು ಸಾಧಿಸಿರುವುದನ್ನು ಸ್ಮರಿಸಿದರು.
ಈ ಸಂದರ್ಭದಲ್ಲಿ ಕನ್ನಡ ಪೂಜಾರಿ ಕಣ್ಣನ್, ಸಿಡಿಎ ಅಧ್ಯಕ್ಷ ಆನಂದ್, ರಾಂಪುರ ಕೇಶವ, ನಗರಸಭಾ ಮಾಜಿ ಸದಸ್ಯ ಜಾನಯ್ಯ, ಮಾಜಿ ಅಧ್ಯಕ್ಷ ಹೆಚ್.ಡಿ.ತಮ್ಮಯ್ಯ, ಶ್ರೀದೇವಿ ಮೋಹನ್, ರಾಜ್ಕುಮಾರ್, ಬಿ.ರೇವನಾಥ್, ನಂದನ್, ಸಂಜಯ್, ಪ್ರಸಾದ್, ತಾರೇಶ್, ಸುನೀಲ್, ಲಕ್ಷ್ಮಣ್, ನಂಜುಂಡಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Discussion about this post