ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಗಾಯತ್ರಿ ಶಾಂತೇಗೌಡ ಶುಕ್ರವಾರ ನಾಮಪತ್ರ ಸಲ್ಲಿಸಿದರು. ಜಿಲ್ಲಾಧಿಕಾರಿ ಕಚೇರಿಗೆ ಪಕ್ಷದ ಕಾರ್ಯಕರ್ತರೊಂದಿಗೆ ಆಗಮಿಸಿದ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕೆ.ಎನ್.ರಮೇಶ್ ಅವರನ್ನು ಭೇಟಿಮಾಡಿ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಸುವ ವೇಳೆ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ, ಕಾಂಗ್ರೆಸ್ ಪಕ್ಷ ದ ಜಿಲ್ಲಾಧ್ಯಕ್ಷ ಡಾ| ಕೆ.ಪಿ.ಅಂಶುಮಂತ್, ಮಾಜಿ ಸಚಿವ ಸಗೀರ್ ಅಹಮದ್, ತರೀಕೆರೆ ಕ್ಷೇತ್ರದ ಮಾಜಿ ಶಾಸಕ ಜಿ.ಎಚ್.ಶ್ರೀನಿವಾಸ್, ಮಹಡಿಮನೆ ಸತೀಶ್ ಸೇರಿದಂತೆ ಅನೇ ಕರು ಇದ್ದರು.
ವಿಧಾನ ಪರಿಷತ್ ಚುನಾವಣೆ ಘೋಷಣೆಯಾದ ಬಳಿಕ ಜಿಲ್ಲೆಯಲ್ಲಿ ಇಂದು ಮೊದಲ ನಾಮಪತ್ರ ಸಲ್ಲಿಕೆಯಾಗಿದ್ದು, ನಾಮಪತ್ರ ಸಲ್ಲಿಸಿ ನಂತರ ಸುದ್ದಿಗಾರರ ಜೊತೆ ಮಾತ ನಾಡಿದ ಗಾಯತ್ರಿಶಾಂತೇಗೌಡ, ಇಂದಿರಾಗಾಂಧಿಯವರ ೧೦೪ನೇ ಜನ್ಮದಿನದಂದು ನಾಮ ಪತ್ರವನ್ನು ಸಲ್ಲಿಸಿದ್ದೇನೆ. ಬಿಜೆಪಿ ಸರ್ಕಾರದ ದೌರ್ಜನ್ಯ, ದಬ್ಬಾಳಿಕೆಯಿಂದ ಜನರು ಬೇಸ ತ್ತಿದ್ದು, ನನ್ನನ್ನು ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲ್ಲಿಸುತ್ತಾರೆಂಬ ವಿಶ್ವಾಸವಿದೆ ಎಂ ದರು.
ಈ ಹಿಂದೇ ವಿಧಾನ ಪರಿಷತ್ ಸದಸ್ಯೆಯಾಗಿದ್ದ ಸಂದರ್ಭದಲ್ಲಿ ಉತ್ತಮ ಕೆಲಸಗಳನ್ನು ಮಾಡುವ ಮೂಲಕ ಪಕ್ಷ ಹಾಗೂ ಜಿಲ್ಲೆಗೆ ಕೀರ್ತಿ ತಂದಿದ್ದೇನೆ. ಎಐಸಿಸಿ ಅಧ್ಯಕ್ಷೆ ಸೋ ನಿಯ ಗಾಂಧಿ ಹಾಗೂ ರಾಹುಲ್ಗಾಂಧಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕಾಂಗ್ರೆಸ್ ಪಕ್ಷದ ಮುಖಡರ ಅಭಿಲಾಷೆ ಯಂತೆ ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ ಎಂದರು.
ಮಾಜಿ ಸಚಿವ ಸಗೀರ್ ಅಹಮದ್ ಮಾತನಾಡಿ, ಚಿಕ್ಕಮಗಳೂರು ವಿಧಾನ ಪರಿಷತ್ ಸ್ಥಾನಕ್ಕೆ ಗಾಯತ್ರ ಶಾಂತೇಗೌಡ ಅವರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಒಮ್ಮತ ದಿಂದ ಆಯ್ಕೆ ಮಾಡಿದ್ದು ಬಿಜೆಪಿ ಪಕ್ಷದ ದುರಾಡಳಿತದಿಂದ ಬೇಸತ್ತ ಜನರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸಲಿದ್ದಾರೆ ಎಂದರು.
ತರೀಕೆರೆ ಕ್ಷೇತ್ರದ ಮಾಜಿ ಶಾಸಕ ಜಿ.ಎಸ್.ಶ್ರೀನಿವಾಸ್ ಮಾತನಾಡಿ, ಎಲ್ಲರೂ ಒಮ್ಮತ ದಿಂದ ಗಾಯತ್ರಿ ಶಾಂತೇಗೌಡ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದ್ದು, ಗಾಯತ್ರಿ ಶಾಂತೇಗೌಡ ಅವರು ಗೆಲವು ಸಾಧಿಸಲಿದ್ದಾರೆ ಎಂದರು.
ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ ಮಾತನಾಡಿ, ಬಿಜೆಪಿ ಸರ್ಕಾರದ ದುರಾ ಡಳಿತಂದ ಪಂಚಾಯತ್ಗಳಿಗೆ ನೀಡಿದ ಅನುದಾನದ ಬಡ್ಡಿ ಹಣವನ್ನು ವಾಪಾಸ್ ಪಡೆಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಥಳೀಯ ಸಂಸ್ಥೆಗಳಿಗೆ ಶಕ್ತಿ ಬರಬೇಕಾದರೆ ಮತ್ತು ವೀಕೇಂದ್ರೀಕರಣ ವ್ಯವಸ್ಥೆ ಉಳಿಯಬೇಕಾದರೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಎಂ.ಎಲ್.ಮೂರ್ತಿ, ಮಹಡಿಮನೆ ಸತೀ ಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ, ಬಿ.ಎಂ.ಸಂದೀಪ್, ಅಕ್ಮಲ್, ಜಿ.ಪಂ. ಮಾಜಿ ಅಧ್ಯಕ್ಷ ಕೆ.ಮಹಮದ್, ಡಾ|ವಿಜಯಕುಮಾರ್, ಹಿರೇಮಗಳುರು ಪುಟ್ಟ ಸ್ವಾಮಿ ಸೇರಿದಂತೆ ಅನೇಕರು ಇದ್ದರು.
Discussion about this post