ಜಮ್ಮು: ತ್ರಿಕೂಟ ಬೆಟ್ಟಗಳಲ್ಲಿರುವ ಪ್ರಸಿದ್ಧ ಯಾತ್ರಾ ಕ್ಷೇತ್ರ ಮಾತಾ ವೈಷ್ಣೋದೇವಿಯಲ್ಲಿ ಹೊಸ ವರ್ಷದ ಮೊದಲ ದಿನವೇ ಕಾಲ್ತುಳಿತ ಉಂಟಾಗಿದ್ದು, ಈ ದುರಂತದಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ. 14 ಜನರು ಗಾಯಗೊಂಡಿದ್ದು, ಇವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ. ಹೊಸ ವರ್ಷದ ಕಾರಣ ಹೆಚ್ಚಿನ ಎಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸೇರಿದ್ದರು.
ಯಾತ್ರಾ ಗುಂಪಿನಲ್ಲಿದ್ದ ಕೆಲವು ಯುವಕರ ಮಧ್ಯೆ ಸಣ್ಣ ಜಗಳದಿಂದ ಶುರವಾದ ಗಲಾಟಯಲ್ಲಿ ತಳ್ಳಾಟ- ನೂಕಾಟ ಉಂಟಾದ ಕಾರಣ ಈ ದುರ್ಘಟನೆ ನಡೆಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸರು ಮತ್ತು ಬೇರೆ ಇಲಾಖೆಯ ಅಧಿಕಾರಿಗಳು ಘಟನಾ ಸ್ಥಳದಲ್ಲಿ ತುರ್ತು ಕಾರ್ಯಕ್ಕೆ ನೆರವಾಗಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಮುಖ್ಯಸ್ಥ ದಲ್ಬೀರ್ಸಿಂಗ್ ತಿಳಿಸಿದ್ದಾರೆ.
ದುರ್ಘಟನೆಯು ಅತೀವ ನೋವು ತಂದಿದೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲಾಗುವುದು ಎಂದು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಮನೋಜ್ ಸಿನ್ಹಾ ತಿಳಿಸಿದ್ದಾರೆ.
ಕೇಂದ್ರಾಡಳಿತ ಪ್ರದೇಶದ ಆಡಳಿತವು ಮೃತ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಮತ್ತು ಗಾಯಗೊಂಡರವರಿಗೆ 2 ಲಕ್ಷ ರೂಪಾಯಿ ನೆರವನ್ನು ಪ್ರಕಟಿಸಿದೆ.
ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಆಘಾತ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ. ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿಗಳ ನೆರವನ್ನು ಪ್ರಕಟಿಸಿದ್ದಾರೆ.
12 Dead, 14 Injured In Stampede At Mata Vaishno Devi
ಇದನ್ನು ಓದಿ: Screening of women: 30 ವರ್ಷಗಳಲ್ಲಿ ಮೊದಲ ಬಾರಿಗೆ ಜಮ್ಮು ಕಾಶ್ಮೀರದಲ್ಲಿ ಮಹಿಳೆಯರ ತಪಾಸಣೆ
ಇದನ್ನೂ ಓದಿ: ಯುನೆಸ್ಕೊ ಸೃಜನಾತ್ಮಕ ನಗರದ ಪಟ್ಟಿಗೆ ಸೇರಿದ ಶ್ರೀನಗರ
Discussion about this post