ಚಿಕ್ಕಮಗಳೂರು : ನಗರದ ಸಮುದಾಯ ಶೌಚಾಲಯ ಒಳಗೊಂಡAತೆ ಸಾರ್ವಜನಿಕರ ಸ್ಥಳಗಳನ್ನು ಸ್ವಚ್ವವಾಗಿಟ್ಟುಕೊಳ್ಳುವ ಬಗ್ಗೆ ಜನಜಾಗೃತಿ ಅಗತ್ಯವಿದೆ ಎಂದು ನಗರಸಭೆ ಪೌರಾಯುಕ್ತ ಬಿ.ಸಿ.ಬಸವರಾಜ್ ಹೇಳಿದರು.
ಸ್ವಾತಂತ್ರö್ಯದ ಅಮೃತ ಮಹೋತ್ಸವ ಅಂಗವಾಗಿ ನಗರದ ನಗರಸಭೆ ವತಿಯಿಂದ ಆಯೋಜಿಸಿದ್ದ ಜನರ ಪಾಲ್ಗೊಳ್ಳುವಿಕೆಯೊಂದಿಗೆ ಸ್ವಚ್ಚ ಸಾರ್ವಜನಿಕ ಶೌಚಾಲಯಗಳ ಅಮೃತಮೋಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ದೇಶಕ್ಕೆ ಸ್ವಾತಂತ್ರö್ಯ ಲಭಿಸಿ ೭೫ ವರ್ಷಗಳು ಪೂರೈಸುತ್ತಿರುವ ಹಿನ್ನಲೆ ಅದರ ಸವಿನೆನಪಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿರ್ದೇಶನದಂತೆ ಎಲ್ಲೆಡೆ ವಿವಿಧ ಸ್ವಚ್ಚತಾ ಅಭಿಯಾನ ಜತೆಗೆ ನೀರು, ನೈರ್ಮಲ್ಯದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಅ.೨ ಗಾಂಧೀ ಜಯಂತಿ ಪ್ರಯುಕ್ತ ಮುಂದಿನ ೪ ದಿನಗಳ ಕಾಲ ವಿವಿಧ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು. ನಗರವನ್ನು ಸ್ವಚ್ಚ ಹಾಗೂ ಸುಂದರವಾಗಿಸುವ ನಿಟ್ಟಿನಲ್ಲಿ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯದೆ ಹಸಿ ಹಾಗೂ ಒಣಕಸವನ್ನು ಪ್ರತ್ಯೇಕವಾಗಿ ವಿಂಗಡಿಸುವ ಬಗ್ಗೆ ಈಗಾಗಲೇ ಜಾಗೃತಿ ಅಭಿಯಾನ ಕೈಗೊಳ್ಳಲಾಗಿದೆ. ಇದರಿಂದಾಗಿ ನಗರದ ವಿವಿಧ ವಾರ್ಡ್ಗಳಲ್ಲಿ ಜನರು ಸ್ವಯಂ ಪ್ರೇರಿತವಾಗಿ ತ್ಯಾಜ್ಯವನ್ನು ವಿಂಗಡಿಸಿ ನೀಡುತ್ತಿದ್ದಾರೆ ಎಂದರು.
ಸಾರ್ವಜನಿಕ ಶೌಚಾಲಯಗಳನ್ನು ತಮ್ಮ ಮನೆಯ ಶೌಚಾಲಯವೆಂದು ಭಾವಿಸಿ ಸ್ವಚ್ಚತೆಗೆ ಹೆಚ್ಚು ಆಧ್ಯತೆ ನೀಡಬೇಕು, ಎಲ್ಲೆಂದರಲ್ಲಿ ಉಗುಳುವುದು, ಕಸವನ್ನು ಎಸೆಯುವುದು ಮಾಡಬಾರದು. ಸಾರ್ವಜನಿಕ ಆಸ್ತಿ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಈ ನಿಟ್ಟಿನಲ್ಲಿ ಹೆಚ್ಚು ಜನಜಾಗೃತಿ ಅಗತ್ಯವಿದೆ ಮುಂದಿನ ದಿನಗಳಲ್ಲಿ ಯುಜಿಡಿ ಮ್ಯಾನ್ಹೋಲ್ ಸ್ವಚ್ಚತೆ, ನೀರಿನ ಮಿತಬಳಕೆ ಸೇರಿದಂತೆ ಹಲವು ಜಾಗೃತಿ ಅಭೀಯಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ನಗರ ಆಶ್ರಯ ಸಮಿತಿ ಅಧ್ಯಕ್ಷ ನಾರಾಯಣಸ್ವಾಮಿ ಕಾರ್ಯಕ್ರಮಕ್ಕೆ ಚಾಲನೆ ಮಾತನಾಡಿ ನಗರದಲ್ಲಿ ನಿರಂತರವಾಗಿ ಸ್ವಚ್ಚತೆ ಕಾಪಾಡಲು ಸಾರ್ವಜನಿಕರ ಸಹಕಾರ ಅಗತ್ಯ. ಕೋವಿಡ್ ನಿಯಂತ್ರಣ ಮಾಡುವಲ್ಲಿ ಪೌರಕಾರ್ಮಿಕರ ಶ್ರಮ ದೊಡ್ಡದು. ಮಹಾತ್ಮ ಗಾಂಧೀಜಿಯವರ ಸ್ವಚ್ಚಭಾರತದ ಕನಸನ್ನು ನನಸಾಗಿಸುವ ನಿಟ್ಟಿನಲ್ಲಿ ಸಾರ್ವಜನಿಕರು ಕೈಜೋಡಿಸಬೇಕು ಎಂದು ಕರೆ ನೀಡಿದರು.
ಮನೆ ಮನೆ ಕಸ ಸಂಗ್ರಹಣೆ ವೇಳೆ ತ್ಯಾಜ್ಯವನ್ನು ಪ್ರತ್ಯೇಕವಾಗಿಸಿ ನೀಡಬೇಕು. ಪರಿಸರಕ್ಕೆ ಹಾನಿಯಾಗುವಂತಹ ಪ್ಲಾಸ್ಟಿಕ್ ಬಳಕೆ ನಿಷೇಧಿಸಿದ್ದು ಸಾರ್ವಜನಿಕರು ಸಹಕರಿಸಬೇಕು ಹಸಿ ಮತ್ತು ಒಣಕಸವನ್ನು ಪ್ರತ್ಯೇಕಿಸಿ ನೀಡುವುದರಿಮದ ವಿಘಟನೆಗೆ ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಕೆಎಸ್ಆರ್ಟಿಸಿ ವ್ಯವಸ್ಥಾಪಕ ಕುಮಾರ್ ಮಾತನಾಡಿ ನಮ್ಮ ಸುತ್ತಮುತ್ತಲಿನ ಪರಿಸರ ಉತ್ತಮವಾಗಿದ್ದಾಗ ಮಾತ್ರ ರೋಗರುಜಿನಗಳು ಬಾರದಂತೆ ನಿಯಂತ್ರಿಸಿ ಉತ್ತಮ ಆರೋಗ್ಯ ಹೊಂದಲು ಸಹಕಾರಿಯಾಗಲಿದೆ. ಸಾರ್ವಜನಿಕ ಆಸ್ತಿಗಳಾದ ಶಾಲೆ, ಆಸ್ಪತ್ರೆ, ಸರ್ಕಾರಿ ಬಸ್ ನಿಲ್ದಾಣ, ಸಮುದಾಯ ಶೌಚಾಲಯಗಳನ್ನುಸ ಸ್ವಚ್ಚವಾಗಿಸುವ ನಿಟ್ಟಿನಲ್ಲಿ ಸಾರ್ವಜನಿಕರು ಸಹಕರಿಸಬೇಕು. ಬಸ್ ನಿಲ್ದಾಣಗಳಲ್ಲಿ ಉಗುಳುವುದು, ತ್ಯಾಜ್ಯವನ್ನು ಎಲ್ಲೆಂದರೆಲ್ಲಿ ಎಸೆಯುವುದನ್ನು ಮಾಡದೆ ಸ್ವಚ್ಚತೆಗೆ ಆಧ್ಯತೆ ನೀಡಿ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ನೈರ್ಮಲ್ಯ ಮೇಲ್ವಿಚಾರಕ ಅಣ್ಣಯ್ಯ, ವಿವೇಕ್, ಸುನೀಲ್, , ಆರೋಗ್ಯ ಪರಿವೀಕ್ಷಕ ವೆಂಕಟೇಶ್, ಶಶಿಪ್ರಸಾದ್, ಈಶ್ವರ್, ರಂಗಪ್ಪ, ಕಂದಾಯಾಧಿಕಾರಿ ಬಸವರಾಜ್ ಸೇರಿದಂತೆ ನಗರಸಭೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

























Discussion about this post