• Home
  • About Us
  • Contact Us
  • Terms of Use
  • Privacy Policy
Saturday, June 27, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

ಸರಿಯಾಗಿ ಕೆಲಸ ಮಾಡಿ, ಇಲ್ಲಂದ್ರೇ ನಿಮ್ಮ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುತ್ತದೆ

ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವರಾದ ಡಾ.ನಾರಾಯಣ ಗೌಡ

Shri News Desk by Shri News Desk
Oct 26, 2021, 05:28 am IST
in ರಾಜ್ಯ
Share on FacebookShare on TwitterTelegram

ಬೀದರ್: ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವರಾದ ಡಾ.ನಾರಾಯಣ ಗೌಡ  ಬೀದರ್ ಜಿಲ್ಲೆಯಲ್ಲಿ ಇಲಾಖಾ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿ ರೇಷ್ಮೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯಲ್ಲಿ ಕೈಗೊಂಡಿರುವ ಕಾರ್ಯಕ್ರಮಗಳು, ಯೋಜನೆಗಳ ಅನುಷ್ಠಾನ ಕುರಿತು ಅಧಿಕಾರಿಗಳಿಂದ ಸಚಿವ ನಾರಾಯಣಗೌಡ ಅವರು ಮಾಹಿತಿ ಪಡೆದರು.

ಮೊದಲಿಗೆ ರೇಷ್ಮೆ ಇಲಾಖೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದರು. ಜಿಲ್ಲೆಯಲ್ಲಿ 545 ರೇಷ್ಮೆ ಬೆಳೆಗಾರರಿದ್ದು, ಸುಮಾರು 1116 ಎಕರೆಯಲ್ಲಿ ಹಿಪ್ಪು ನೇರಳೆ ಬೆಳೆಯುತ್ತಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಅಧಿಕಾರಿಗಳ ಈ ಮಾಹಿತಿಗೆ ಬೇಸರ ವ್ಯಕ್ತಪಡಿಸಿದ ಸಚಿವ ಡಾ.ನಾರಾಯಣಗೌಡ ಅವರು, ಈ ಭಾಗದಲ್ಲಿ ಉತ್ತಮ ನೀರಾವರಿ ಸೌಕರ್ಯ ಇದೆ. ಹಾಗಿದ್ದರೂ 1116 ಎಕರೆಯಲ್ಲಿ ಮಾತ್ರ ರೇಷ್ಮೆ ಬೆಳೆ ಬೆಳೆಯುತ್ತಿದ್ದಾರೆ. ರೇಷ್ಮೆ ಬೆಳೆಯುವುದರಿಂದ ಲಾಭ ಹೆಚ್ಚಿದೆ, ರೈತರಿಗೆ ಅರಿವು ಮೂಡಿಸುವ ಕೆಲಸ ಆಗಬೇಕು. ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಸಚಿವರು ಗರಂ ಆದರು.

ಈ ಭಾಗದ ರೈತರು ಶ್ರಮಜೀವಿಗಳು. ಕನಿಷ್ಠ 5 ಸಾವಿರ ಜನ ರೇಷ್ಮೆ ಬೆಳೆಯುವಂತಾಗಬೇಕು. ಆ ನಿಟ್ಟಿನಲ್ಲಿ
ಅಧಿಕಾರಿಗಳು ಸರಿಯಾದ ರೀತಿಯಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಕರಪತ್ರಗಳು ಹಂಚುವುದು ಸೇರಿದಂತೆ ಉತ್ತಮ ಪ್ರಚಾರ ನೀಡುವಂತಹ ಕೆಲಸ ಮಾಡಿ. ಜಿಲ್ಲೆಯಲ್ಲಿ ಈಗ ಉತ್ತಮ ಇಳುವರಿ ತೆಗೆಯುತ್ತಿರುವ ರೈತರ ತೋಟಗಳು ಸೇರಿದಂತೆ ಬೇರೆ ಜಿಲ್ಲೆಗಳಲ್ಲಿ ಅಧ್ಯಯನ ಪ್ರವಾಸ ಕರೆದುಕೊಂಡು ಹೋಗಿ, ಅರಿವು ಮೂಡಿಸಿ ಎಂದು ಸಚಿವ ಡಾ. ನಾರಾಯಣಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಉತ್ತಮ ಇಳುವರಿ ತೆಗೆಯುತ್ತಿರುವ ರೇಷ್ಮೆ ಬೆಳೆಗಾರರನ್ನು ಗುರುತಿಸಿ ರಾಜ್ಯಮಟ್ಟದಲ್ಲಿ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಸನ್ಮಾನಿಸುವ ಆಲೋಚನೆ ಇದೆ. ಇದಕ್ಕೆ ಅರ್ಹರನ್ನು ಗುರುತಿಸುವಂತೆ ಅಧಿಕಾರಿಳಿಗೆ ಸೂಚಿಸಲಾಗಿದೆ ಎಂದು ಸಚಿವ ನಾರಾಯಣಗೌಡ ಅವರು ಹೇಳಿದರು.

ರೇಷ್ಮೆ ಇಲಾಖೆ ಬಳಿಕ ಕ್ರೀಡಾ ಇಲಾಖೆ ಕುರಿತು ಪ್ರಗತಿ ಕುರಿತು ಸಚಿವ ನಾರಾಯಣ ಗೌಡ ಅವರು ಪರಿಶೀಲನೆ ನಡೆಸಿದರು.

ಬೀದರ್ ಪಟ್ಟಣದಲ್ಲಿರುವ ನೆಹರು ಕ್ರೀಡಾಂಗಣದಲ್ಲಿ ಸುತ್ತಲು ಪ್ರೇಕ್ಷಕರ ಗ್ಯಾಲರಿ ನಿರ್ಮಾಣ ಕಾಮಗಾರಿ ವಿಳಂಬಕ್ಕೆ ಸಚಿವ ನಾರಾಯಣ ಗೌಡ ಅವರು ಆಕ್ರೋಶ ವ್ಯಕ್ತಪಡಿಸಿದರು. KRIDL ಗೆ ನಿರ್ಮಾಣ ಕಾಮಗಾರಿ ಗುತ್ತಿಗೆ ನೀಡಲಾಗಿದ್ದು, ನಿರ್ಲಕ್ಷ್ಯ ಮಾಡಿರುವ ಅಧಿಕಾರಿಗಳ ವಿರುದ್ಧ ಸಚಿವರು ಗರಂ ಆದರು. KRIDL ನವರು ಸರಿಯಾಗಿ ಕೆಲಸ ಮಾಡಲ್ಲ. ನಿಮ್ಮನ್ನ ಬ್ಲಾಕ್ ಲೀಸ್ಟ್‌ಗೆ ಸೇರಿಸಲು ಪತ್ರ ಬರೆಯಲಾಗುತ್ತೆ, ನಿಮ್ಮ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಬೇಜವಾಬ್ದಾರಿ ತೋರುತ್ತಿರುವ ಕೆಆರ್‌ಐಡಿಎಲ್ ಅಧಿಕಾರಿಗಳಿಗೆ ಸಚಿವ ನಾರಾಯಣ ಗೌಡ ಅವರು ವಾರ್ನಿಂಗ್ ನೀಡಿದರು. ಎರಡು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸದಿದ್ದರೇ ಟೆಂಡರ್ ರದ್ದು ಮಾಡಿ, ಬೇರೆಯವರಿಗೆ ನೀಡುವುದಾಗಿ ಸಚಿವರು ಗಡುವು ನೀಡಿದರು.

ಇದೇ ವೇಳೆ ಬೀದರ್‌ನಲ್ಲಿ ಪುಟ್ಬಾಲ್ ಆಟಗಾರರು ಹೆಚ್ಚಿದ್ದು, ಒಂದು ಪುಟ್ಬಾಲ್ ಕ್ರೀಡಾಂಗಣ ಅಗತ್ಯವಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಜೊತೆಗೆ ಜಿಲ್ಲೆಯಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ ಆಗಬೇಕಿದೆ ಎಂದು ತಿಳಿಸಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ನಾರಾಯಣ ಗೌಡ ಅವರು, ಈ ಬಗ್ಗೆ ಸೂಕ್ತ ಕ್ರಮವಹಿಸುವುದಾಗಿ ಭರವಸೆ ನೀಡಿದರು.

ಭಾಲ್ಕಿಯಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಜಾಗ ಇಲ್ಲ. ಅಗತ್ಯ ಜಾಗವನ್ನು ಗುರುತಿಸಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಯಿತು. ಹೊಸದಾಗಿ ಮೂರು ತಾಲೂಕುಗಳು ರಚನೆಯಾಗಿದ್ದು, ಅಲ್ಲಿ ತಾಲೂಕು ಕ್ರೀಡಾಂಗಣ ನಿರ್ಮಾಣಕ್ಕೆ ಕನಿಷ್ಠ 5 ಎಕರೆ ಭೂಮಿಯ ಅಗತ್ಯ ಇದೆ. ಅದನ್ನು ಒದಗಿಸುವಂತೆ ಸಚಿವ ಡಾ. ನಾರಾಯಣಗೌಡ ಅವರು ತಿಳಿಸಿದರು.

ಹಳ್ಳಿಹಳ್ಳಿಯಲ್ಲಿ ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡಬೇಕು ಅನ್ನೋದು ನನ್ನ ಕನಸು. ಕ್ರೀಡೆಗೆ ಹೆಚ್ಚಿನ ಆದ್ಯತೆ‌ ನೀಡಿದರೇ ಬೇರೆ ರೀತಿಯ ಚಟುವಟಿಕೆಗಳು ಕಡಿಮೆ ಆಗಲಿವೆ. ಹಾಗಾಗಿ ಕ್ರೀಡೆಗೆ ಶಕ್ತಿ ತುಂಬುವಂತಹ ಕೆಲಸ ಆಗಬೇಕು ಅನ್ನೋ ನಿಟ್ಟಿನಲ್ಲಿ ಪ್ರತಿ ಜಿಲ್ಲೆಗೆ ಭೇಟಿ ನೀಡುತ್ತಿದ್ದೇನೆ. ಕ್ರೀಡಾ ಇಲಾಖೆಗೆ ಎಲ್ಲಾ ರೀತಿಯ ನೆರವು ಹಾಗೂ ಪ್ರೋತ್ಸಾಹ ನೀಡಲಾಗುವುದು ಎಂದು ಸಚಿವ ನಾರಾಯಣಗೌಡ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ರೇಷ್ಮೆ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ‌‌ ಇದೆ. ಮುಂದಿನ ವರ್ಷದಲ್ಲಿ ಹಲವು ಸಿಬ್ಬಂದಿ ನಿವೃತ್ತಿ ಆಗಲಿದ್ದಾರೆ. ಅದಕ್ಕಾಗಿ ಸಿಬ್ಬಂದಿ ನೇಮಕಾತಿಗೆ ಅನುಮತಿ ಕೋರಿ ಹಣಕಾಸು ಇಲಾಖೆಗೆ ಪತ್ರ ಬರೆಯಲಾಗಿದೆ. ‌ಹಣಕಾಸು ಇಲಾಖೆ ಅನುಮತಿ ಪಡೆದು ಶೀಘ್ರದಲ್ಲೇ ಸಿಬ್ಬಂದಿ ನೇಮಕ ಮಾಡಲಾಗುವುದು ಎಂದು ಸಚಿವ ನಾರಾಯಣಗೌಡ ಅವರು ಹೇಳಿದರು.

ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೆಎಸ್‌ಎಂಡಿ ಅಧ್ಯಕ್ಷೆ ಸವಿತಾ ಅಮರಶೆಟ್ಟಿ, ಜಿಲ್ಲಾಧಿಕಾರಿ ರಾಮಚಂದ್ರನ್, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಆಯುಕ್ತ ಗೋಪಾಲಕೃಷ್ಣ ಸೇರಿದಂತೆ ಹಲವರು ಭಾಗವಹಿಸಿದ್ದರು.

ಇದನ್ನೂ ಓದಿ : e Paper – October 26, 2021

ಇದನ್ನೂ ಓದಿ : Trekkers: ಹಿಮಾಚಲದಲ್ಲಿ ಹಿಮಪಾತಕ್ಕೆ ಮೂವರು ಚಾರಣಿಗರ ದುರ್ಮರಣ

 

 

Tags: Disciplinary actionTOP NEWS
ShareSendTweetShare
Join us on:

Related Posts

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In