ಮೈಸೂರು: ರಾಜ್ಯದ ಜನರನ್ನು ಬೆಚ್ಚಿ ಬೀಳಿಸಿದ ಮೈಸೂರಿನ ಲಲಿತಾದ್ರಿಯ ಗುಡ್ಡದಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಮೊಬೈಲ್ ಸಿಗ್ನಲ್ ಹೊಸ ತಿರುವು ನೀಡಿದೆ.
ಘಟನಾ ಸ್ಥಳದಲ್ಲಿ ಸಿಕ್ಕಿದ್ದ ಬಸ್ ಟಿಕೆಟ್, ಹೆಂಡದ ಬಾಟಲ್ ಗಳು ಸಹ ಸಾಕ್ಷ್ಯ ಒದಗಿಸಿದ್ದವು. ಮದ್ದ್ಯದ ಬಾಟಲ್ ನಲ್ಲಿ ಬಾರ್ ಕೋಡ್ ಪರಿಶೀಲಿಸಿದ್ದ ಪೊಲೀಸರು, ಮದ್ಯದಂಗಡಿಗಳಲ್ಲಿ ಸಿಸಿಟಿವಿ ತಪಾಸಣೆ ನಡೆಸಿದ್ದರು.
ಹತ್ತು ಮಂದಿ ಮೇಲೆ ಶಂಕೆ ವ್ಯಕ್ತವಾಗಿದ್ದು, ತೀವ್ರ ಶೋಧನೆಗಾಗಿ ಪೊಲೀಸರ ತನಿಖಾ ತಂಡಗಳು ತಮಿಳುನಾಡು ಮತ್ತು ಕೇರಳಕ್ಕೆ ತೆರಳಿದ್ದವು. ಇವರಲ್ಲಿ ೫ ಜನ ಆರೋಪಿಗಳನ್ನು ತಮಿಳುನಾಡಿನಲ್ಲಿ ಶುಕ್ರವಾರ ತಡರಾತ್ರಿ ವಶಕ್ಕೆ ಪಡೆಯಲಾಗಿದೆ.
ಈ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿರುವ ಪೊಲೀಸರು, ಆರೋಪಿಗಳು ಘಟನೆ ನಡೆದ ಸ್ಥಳಕ್ಕೆ ಏಕೆ ಹೋಗಿದ್ದರು, ಮತ್ತೆ ಏಕೆ ರಾಜ್ಯ ಬಿಟ್ಟು ಪರಾರಿಯಾಗಿದ್ದರು ಎಂಬುದಕ್ಕೆ ಮಾಹಿತಿ ಕಲೆ ಹಾಕುತ್ತಿದ್ದಾರೆ ಎನ್ನಲಾಗಿದೆ.
ಆರೋಪಿಗಳು ಕೂಲಿ ಕಾರ್ಮಿಕರಾಗಿದ್ದು, ತಮಿಳುನಾಡಿನಿಂದ ಮೈಸೂರು ಮಂಡಿಗಳಿಗೆ ಬಾಳೆ ಸರಬರಾಜು ಮಾಡುತ್ತಿದ್ದರು, ಯುವಕ-ಯುವತಿಯನ್ನು ಮೂರು ದಿನ ಗಮನಿಸಿ, ನಾಲ್ಕನೆ ದಿನ ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ.
ಇದರ ನಡುವೆ ಯುವತಿ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿದ್ದು, ಪಾಲಕರೊಡನೆ ಮುಂಬೈಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೆ ಯುವತಿ ಯಾವುದೇ ದೂರನ್ನು ನೀಡಿರುವುದಿಲ್ಲ. ಘಟನೆಗೆ ಸಂಬಂಧಪಟ್ಟಂತೆ, ಆನ್ ಲೈನ್ ನಲ್ಲೇ ಯುವತಿಯ ವಿಚಾರಣೆ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿದೆ.

























Discussion about this post