ಚಿಕ್ಕಮಗಳೂರು: ಕೋವಿಡ್ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ೭೬ ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಮಂಗಳವಾರ ೫೯ ಮಂದಿಯಲ್ಲಿ ಸೋಕು ಕಾಣಿಸಿ ಕೊಂಡಿದೆ.
ಚಿಕ್ಕಮಗಳೂರು ತಾಲ್ಲೂಕಿನ ೧೨, ಕಡೂರು ೮, ತರೀಕೆರೆ ೩, ಮೂಡಿಗೆರೆ ೧೬, ನರಸಿಂಹ ರಾಜಪುರ ೧೩, ಕೊಪ್ಪ ೫ ಹಾಗೂ ಶೃಂಗೇರಿ ತಾಲ್ಲೂಕಿನ ಇಬ್ಬರು ವ್ಯಕ್ತಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇಂದು ಪತ್ತೆಯಾದವರಲ್ಲಿ ೪೯ಮಂದಿಯನ್ನು ಹೋಮ್ ಐಸೋಲೇ ಶನ್ಗೆ ಒಳಪಡಿಸಿದ್ದು, ೪ಮಂದಿ ಜಿಲ್ಲಾ ಕೋವಿಡ್ ಆಸ್ಪತ್ರೆ ಹಾಗೂ ೬ಮಂದಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳವಾರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಯಾವುದೇ ವ್ಯಕ್ತಿ ಮೃತಪಟ್ಟಿಲ್ಲ ವೆಂದು ಜಿಲ್ಲಾ ಆರೋಗ್ಯ ಇಲಾಖೆ ದೃಢಪಡಿಸಿದ್ದು, ಜಿಲ್ಲೆಯ ೪೯,೩೭೦ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ೪೭,೮೭೩ಮಂದಿ ಗುಣಮುಖರಾಗಿದ್ದಾರೆ. ಸದ್ಯ ೧೦೪೩ ಮಂದಿಯಲ್ಲಿ ಸೋಂಕು ಸಕ್ರೀಯವಾಗಿದ್ದು, ೩೭೮ಮಂದಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
Discussion about this post