ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಬಿಳಗುಲಿ ಸಮೀಪದ ಗದ್ದೆಯ ಬಳಿ ಹುಲಿಯೊಂದು ಜನಸಾಮಾನ್ಯರಂತೆ ನಡೆದು ಹೋಗಿರುವ ಹುಲಿ ಹೆಜ್ಜೆಯನ್ನು ಕಂಡು ರೈತರ ಆತಂಕಕ್ಕೆ ಕಾರಣವಾಗಿದೆ.
ಬಿಳಗುಲಿ ಗ್ರಾಮದ ಉಮೇಶ್ರವರ ಗದ್ದೆಯಲ್ಲಿ ಭಾರೀ ಗಾತ್ರದ ಹುಲಿ ಹೆಜ್ಜೆ ಕಂಡಿದೆ. ಹುಲಿಯ ದೊಡ್ಡ ಹೆಜ್ಜೆಯ ಪಂಜ ಕಂಡ ಹಳ್ಳಿಗರು ಭಯಭೀತರಾಗಿದ್ದು, ಹೊಲ, ಗದ್ದೆ, ತೋಟಕ್ಕೆ ಹೋಗಲು ಭಯಪಡುವಂತಹ ಸ್ಥಿತಿ ನಿರ್ಮಾಣವಾಗಿದೆ.
ಬಿಳಗಲಿ ಹಾಗೂ ಹುತ್ತಿನಕೊಳಲು ಗ್ರಾಮದಲ್ಲಿ ಹುಲಿ ಓಡಾಡಿರುವ ಶಂಕೆಯಿಂದ ಕತ್ತಲಾಗುತ್ತಿದ್ದಂತೆ ಜನ ಮನೆಯಿಂದ ಹೊರಬರೋದಕ್ಕೂ ಹೆದರುತ್ತಿದ್ದಾರೆ. ಬಿಳಗುಲಿ, ಹುತ್ತಿನಕೊಳಲು ಗ್ರಾಮವಷ್ಟೇ ಅಲ್ಲದೆ ಭಾರತೀಬೈಲು ಗ್ರಾಮದಲ್ಲೂ ಹುಲಿ ಹಾವಳಿ ಹೆಚ್ಚಿತ್ತು.
ಜನ ಹಗಲಲ್ಲೂ ಓಡಾಡೋದಕ್ಕೆ ಭಯ ಬೀಳುತ್ತಿದ್ದರು. ಹಳ್ಳಿಯಿಂದ ಹಳ್ಳಿಗೆ ಸಂಚರಿಸುತ್ತಿದ್ದ ಹುಲಿ ಹೊಲಗದ್ದೆಗಳಲ್ಲಿ ಓಡಾಡೋದನ್ನ ಸ್ಥಳಿಯರು ನೋಡಿ ಭಯಭೀತರಾಗಿದ್ದರು. ಈಗ ಮತ್ತೆ ಹುಲಿಯ ದೊಡ್ಡ ಹೆಜ್ಜೆ ಕಾಣಿಸಿಕೊಂಡಿದ್ದು, ಜನ ಕಂಗಾಲಾಗಿದ್ದಾರೆ.
ತಾಲೂಕಿನಲ್ಲಿ ಕಳೆದ ಕೆಲ ತಿಂಗಳಿಂದ ಕಾಡುಪ್ರಾಣಿಗಳ ಹಾವಳಿ ಮಿತಿಮೀರಿದೆ. ಈ ಮಧ್ಯೆ ಹುಲಿಯ ಹೆಜ್ಜೆ ಕಂಡು ಜನ ಕಂಗಾಲಾಗಿದ್ದಾರೆ. ಕೂಡಲೇ ಅರಣ್ಯ ಅಧಿಕಾರಿಗಳು ಹುಲಿಯನ್ನು ಸೆರೆ ಹಿಡಿದು ಸ್ಥಳಾಂತರಿಸಿ ಹಳ್ಳಿಗರ ಆತಂಕವನ್ನ ದೂರ ಮಾಡುವಂತೆ ಆಗ್ರಹಿಸಿದ್ದಾರೆ.

























Discussion about this post