ಮಂಡ್ಯ: ಜಿಲ್ಲಾ ಉಸ್ತುವಾರಿ ಸಚಿವ ಆಗಿರೋ ಮಾಸ್ ಲೀಡರ್ ನಾರಾಯಣ ಗೌಡ ೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ೪ ಬಿಜೆಪಿ ಶಾಸಕರು ಗೆಲ್ಲುತ್ತಾರೆ. ಹಾಗೆಯೇ ರಾಜ್ಯದಲ್ಲಿ ೧೪೦ಗೂ ಅಧಿಕ ಸ್ಥಾನಗಳನ್ನು ಗೆಲ್ಲುವ ಮೂಲಕ BJP ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮಂಡ್ಯದಲ್ಲಿ ಭವಿಷ್ಯ ನುಡಿದಿದ್ದಾರೆ.
ಇಂದು ಕೆ.ಆರ್. ಪೇಟೆಯಲ್ಲಿ ಸಚಿವ ನಾರಾಯಣಗೌಡರ ಮನೆಗೆ ಭೇಟಿ ನೀದಿ ಅವರು ಮಾತನಾಡಿದರು. ಹಳೆ ಮೈಸೂರು ಭಾಗದಲ್ಲಿ, ಬಿಜೆಪಿ ಪಕ್ಷವನ್ನು ಬಲಿಷ್ಠಗೊಳಿಸುವ ಹಿನ್ನೇಲೆಯಲ್ಲಿ ಪಕ್ಷ ಸಂಂಘಟನೆಗೆ ಮುಂದಾಗಿದ್ದೇವೆ ಎಂದರು. ಮೈಸೂರಿನಿಂದ ಚನ್ನರಾಯಪಟ್ಟಣಕ್ಕೆ ಹೋಗುವಾಗ ಕೆ. ಆರ್. ಪೇಟೆಯಲ್ಲಿ ಅವರು ಸಚಿವ ನಾರಾಯಣಗೌಡರನ್ನು ಬೇಟಿ ಮಾಡಿದ್ದರು.
Discussion about this post