ದಾವಣಗೆರೆ: ಮುಂಬರುವ ದಿನಗಳಲ್ಲಿ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ ಎದುರಿಸಿ, ಸ್ಪಷ್ಟ ಬಹುಮತ ಗಳಿಸಿ, ಬಿಜೆಪಿ ಸರ್ಕಾರವೇ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ದಾವಣಗೆರೆಯಲ್ಲಿ ಗೃಹಸಚಿವ ಅಮಿತ್ ಷಾ ಅವರು ತಮ್ಮ ಪಕ್ಷದ ಬಗ್ಗೆ ಭವಿಷ್ಯ ನುಡಿದಿದ್ದಾರೆ.
ಇದೇ ಸಂದರ್ಭದಲ್ಲಿ, ಕೊರೊನಾ ಸೋಂಕು ಇನ್ನಷ್ಟು ಹೆಚ್ಚುವ ಸಂಭವ ಇದ್ದು, ಇದಕ್ಕಾಗಿ ಸೊಂಕು ತಡೆಯಲು ಸಹ ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಎಲ್ಲರಿಗೂ ಕೊವಿಡ್ ಲಸಿಕೆ ವಿತರಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಹೇಳಿದರು.
ಸರ್ಕಾರ ಪುನರ್ರಚನೆ ಕುರಿತು ಮಾತನಾಡಿದ ಷಾ, ಯಾರಾದರೂ ಹೊಸಬರು ಮುಖ್ಯಮಂತ್ರಿಯಾಗಲಿ ಎಂದು ಬಿಎಸ್ ವೈ ನಿರ್ಧರಿಸಿದ್ದಕ್ಕೆ ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾರೆ. ಬಿಎಸ್ ವೈ ಉತ್ತಮ ಕೆಲಸ ಮಾಡಿದ್ದರು. ಬೊಮ್ಮಾಯಿ ಸಹ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಬೊಮ್ಮಾಯಿಯವರ ಶ್ಲಾಘನೆ ನಡೆಸಿದರು.
Discussion about this post