ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮೊಟ್ಟಮೊದಲ ಬಾರಿಗೆ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯೊಂದಿಗೆ ಬನ್ನಿಸ್ ತರಬೇತಿ ಶಿಬಿರವು ಯಶಸ್ವಿಯಾಗಿದ್ದು ಮುಂದಿನ ದಿನಗಳಲ್ಲಿ ಜಿಲ್ಲೆಯಾದ್ಯಂತ ಇರುವ ಎಲ್ಲಾ ಅಂಗನವಾಡಿ ಕಾರ್ಯಕರ್ತರಿಗೆ ತರಬೇತಿಯನ್ನು ನೀಡಲಾಗುವುದು ಎಂದು ಜಿಲ್ಲಾ ಸ್ಕೌಟ್ ಆಯುಕ್ತರಾದ ಎ.ಎನ್. ಮಹೇಶ್ ಹೇಳಿದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ವತಿಯಿಂದ ನಗರದ ಜಿಲ್ಲಾ ಸ್ಕೌಟ್ ಭವನದಲ್ಲಿ ಶುಕ್ರವಾರ ನಡೆದ ಬನ್ನಿಸ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಈ ತರಬೇತಿಯಿಂದ ಮುಗಿದ ನಂತರ ತಾವೆಲ್ಲರೂ ತಮ್ಮ ತಮ್ಮ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಕಲಿಕೆಯ ಮುಖಾಂತರ ತಾವು ಕಲಿತಿರುವ ಚಟುವಟಿಕೆಗಳನ್ನು ಅವರಿಗೆ ಬೋಧಿಸುವ ಮುಖಾಂತರ ಮಕ್ಕಳಲ್ಲಿ ಆಸಕ್ತಿ ಮೂಡಿಸಿ ಅವರ ಬೆಳವಣಿಗೆಗೆ ಸಹಕರಿಸಬೇಕಾಗಿ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಮುಖ್ಯ ಆಯುಕ್ತ ಎಂ ಎನ್ ಷಡಕ್ಷರಿ ಮಾತನಾಡಿ ಜಿಲ್ಲಾಡಳಿತದ ನೆರವಿನಿಂದಾಗಿ ಮೊದಲ ಹಂತದ ತರಬೇತಿ ಶಿಬಿರವು ಪೂರ್ಣಗೊಂಡಿದ್ದು ಮುಂದಿನ ಹಂತದಲ್ಲಿ ಜಿಲ್ಲಾ ಸಂಸ್ಥೆ ವತಿಯಿಂದ ಇನ್ನೂ ಅನೇಕ ತರಬೇತಿ ಶಿಬಿರಗಳನ್ನು ಆಯೋಜಿಸಲಾಗುವುದು ಎಂದರು.
ಅಂಗನವಾಡಿಯ ಶಿಕ್ಷಕಿಯರಿಗೆ ಈ ತರಬೇತಿಯು ಅತ್ಯವಶ್ಯಕವಾಗಿದ್ದು ಈ ನಿಟ್ಟಿನಲ್ಲಿ ತಾವೆಲ್ಲರೂ ಈ ಶಿಬಿರದಲ್ಲಿ ಭಾಗವಹಿಸಿರುವುದು ಅತ್ಯಂತ ಸಂತಸ ತಂದಿದೆ ಎಂದರು.
ಈ ಕಾರ್ಯಕ್ರಮದಲ್ಲಿ ಗೈಡ್ಸ್ ಜಿಲ್ಲಾ ಆಯುಕ್ತರಾದ ಡಿಎಸ್ ಮಮತ, ಜಿಲ್ಲಾ ತರಬೇತಿ ಆಯುಕ್ತರಾದ ಶ್ರೀಮತಿ ಸಂಧ್ಯಾರಾಣಿ, ಈ ಶಿಬಿರದ ನಾಯಕರಾದ ಶ್ರೀಮತಿ ಡಾಕ್ಟರ್ ಕೃಪಾ ವಿಜಯ್ , ಜಿಲ್ಲಾ ಸಂಘಟಕರಾದ ಕಿರಣ್ ಕುಮಾರ್, ನವೀನ್ ಕುಮಾರ್, ಸಹಾಯಕ ನಾಯಕರಾದ, ಶ್ರೀಮತಿ ಪ್ರತಿಮಾ, ಶ್ರೀಮತಿ ಭಾಗ್ಯ, ಶ್ರೀಮತಿ ವಾಸಂತಿ, ಶ್ರೀಮತಿ ತರಾನ, ಶ್ರೀಮತಿ ಪಲ್ಲವಿ, ಮತ್ತಿತರರು ಉಪಸ್ಥಿತರಿದ್ದರು.

























Discussion about this post