ಚಿಕ್ಕಮಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾನುವಾರವೂ ಮಳೆ ಮುಂದುವರಿಯಲಿದೆ. ಹವಾಮಾನ ಇಲಾಖೆಯು ನೀಡಿರುವ ಅಕ್ಟೋಬರ್ 10ರವರೆಗಿನ ಮುನ್ಸೂಚನೆಯಂತೆ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ತುಂತುರು ಮಳೆ ಸುರಿಯುವ ಸಾಧ್ಯತೆಯಿದೆ. ಕಾಸರಗೋಡು, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಯ ಹಲವೆಡೆ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಆಗುಂಬೆ ಭಾಗದಲ್ಲಿಯೂ ಮಳೆ ಸುರಿಯುವ ನಿರೀಕ್ಷೆಯಿದೆ.
ಮಂಡ್ಯ, ಚಾಮರಾಜನಗರ, ಬೆಂಗಳೂರು, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಬೀದರ್, ಗುಲ್ಬರ್ಗ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಯ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ. ಕರ್ನಾಟಕದ ಇತರ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ.
ರಾಜ್ಯದಲ್ಲಿ ಮುಂಗಾರು ಮಾರುತಗಳು ಇನ್ನೂ ಪ್ರಬಲವಾಗಿಯೇ ಇವೆ. ಇದರ ನಡುವೆ ಅರಬ್ಬಿ ಸಮುದ್ರದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂಥ ಚಲನೆ ಪ್ರಾರಂಭವಾಗಿದೆ. ಅಕ್ಟೋಬರ್ 13ರ ವೇಳೆಗೆ ವಾಯುಭಾರ ಕುಸಿತವು ಸ್ವಲ್ಪ ಪ್ರಬಲವಾಗುವ ಸಾಧ್ಯತೆ ಇದೆ. ಅದೇ ವೇಳೆಗೆ ಪೂರ್ವ ಕರಾವಳಿಯಲ್ಲಿ, ಅಂದರೆ ಬಂಗಾಳ ಕೊಲ್ಲಿಯಲ್ಲೂ ವಾಯುಭಾರ ಕುಸಿತ ಉಂಟಾಗುವ ಮುನ್ಸೂಚನೆ ಇದೆ.
ವಾಯುಭಾರ ಕುಸಿತದ ಪ್ರಭಾವದಿಂದ ಕರ್ನಾಟಕ ಕರಾವಳಿ ಭಾಗದ ಮಳೆಯ ಮೇಲೆ ಹೆಚ್ಚು ವ್ಯತ್ಯಾಸವಾಗುವುದಿಲ್ಲ. ಆದರೆ ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮಳೆ ಚುರುಕಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಗುಲಾಬ್ ಮತ್ತು ಶಾಹೀನ್ ಚಂಡಮಾರುತ ಪ್ರಭಾವದಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶನಿವಾರ ಉತ್ತಮ ಮಳೆಯಾಯಿತು. ಮುಂದಿನ ನಾಲ್ಕು ದಿನಗಳ ಅವಧಿಗೆ ಮಳೆ ಮುಂದುವರಿಯುವ ಸೂಚನೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
Current Nowcast at 1600 IST today. For details kindly visit:https://t.co/w8q0AaMm0I
Report any severe weather at:https://t.co/5Mp3RKfD4y
Download Damini App for Lightning Alerts:
Android-https://t.co/IYCSTf9o1U
IOS-https://t.co/gRs5rUfLW3 pic.twitter.com/APU6up4ptK— India Meteorological Department (@Indiametdept) October 9, 2021
Weather Prediction Rain Expected in Chikmagalur Kodagu and Other Districts of Karnataka
ಇದನ್ನೂ ಓದಿ: ರಾಜ್ಯದಲ್ಲಿ ಮೂರುದಿನ ಭಾರೀ ಮಳೆ
ಇದನ್ನೂ ಓದಿ: Video: ಧಾರಾಕಾರ ಮಳೆಗೆ ನಲುಗಿದ ಹೈದರಾಬಾದ್
Discussion about this post