• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಂತರಾಷ್ಟ್ರೀಯ

ನಾರ್ವೆಯ ಕಾಂಗ್ಸ್‌ಬರ್ಗ್‌ನಲ್ಲಿ ಬಿಲ್ಲು-ಬಾಣಗಳಿಂದ ದಾಳಿ ನಡೆಸಿ 5 ಜನರ ಹತ್ಯೆ, ಶಂಕಿತನ ಬಂಧನ

ದಾಳಿಯ ಹಿಂದಿನ ಉದ್ದೇಶ ತಿಳಿದುಬಂದಿಲ್ಲ, ಭಯೋತ್ಪಾದಕ ಕೃತ್ಯವನ್ನು ತಳ್ಳಿಹಾಕಲಾಗದು

Shri News Desk by Shri News Desk
Oct 14, 2021, 12:11 pm IST
in ಅಂತರಾಷ್ಟ್ರೀಯ
ನಾರ್ವೆಯ ಕಾಂಗ್ಸ್‌ಬರ್ಗ್‌ನಲ್ಲಿ ಶಂಕಿತನಿಂದ ಸಾರ್ವಜನಿಕರ ಮೇಲೆ ಬಿಲ್ಲು-ಬಾಣಗಳಿಂದ ದಾಳಿ

ನಾರ್ವೆಯ ಕಾಂಗ್ಸ್‌ಬರ್ಗ್‌ನಲ್ಲಿ ಶಂಕಿತನಿಂದ ಸಾರ್ವಜನಿಕರ ಮೇಲೆ ಬಿಲ್ಲು-ಬಾಣಗಳಿಂದ ದಾಳಿ

Share on FacebookShare on TwitterTelegram

ಕಾಂಗ್ಸ್‌ಬರ್ಗ್‌ (ನಾರ್ವೆ): ಬಿಲ್ಲು-ಬಾಣಗಳಿಂದ ಸಜ್ಜಿತನಾಗಿದ್ದ ವ್ಯಕ್ತಿಯೋರ್ವನು ಬುಧವಾರ ಸಂಜೆ ನಾರ್ವೆಯ ಆಗ್ನೇಯ ಭಾಗದ ಕಾಂಗ್ಸ್‌ಬರ್ಗ್ ಎಂಬಲ್ಲಿ ಹಠಾತ್ ದಾಳಿ ನಡೆಸಿ 5 ಜನರ ಹತ್ಯೆ ಮಾಡಿ ಇಬ್ಬರನ್ನು ಗಾಯಗೊಳಿಸಿದ್ದು ಅವನನ್ನು ಬಂಧಿಸಿದ್ದೇವೆ ಎಂದ ಅಲ್ಲಿನ ಪೊಲೀಸರು ತಿಳಿಸಿದ್ದಾರೆ.

ಕಾಂಗ್ಸ್‌ಬರ್ಗ್ ನಗರದ ಹೃದಯಭಾಗದ ಅನೇಕ ಪ್ರದೇಶಗಳಲ್ಲಿ ನಡೆದಿರುವ ದಾಳಿಗಳ ಹಿಂದಿನ ನೈಜ ಉದ್ದೇಶ ಇನ್ನೂ ತಿಳಿದುಬಂದಿಲ್ಲವಾದರೂ ಭಯೋತ್ಪಾದಕ ಕೃತ್ಯದ ಉದ್ದೇಶಗಳನ್ನು ತಳ್ಳಿಹಾಕುವಂತಿಲ್ಲ ಎಂದು ತಿಳಿಸಿದ ಪೋಲೀಸ್ ಅಧಿಕಾರಿ, ಓಯ್‌ವಿಂಡ್ ಆಸ್, ಕೃತ್ಯದಲ್ಲಿ 5 ಜನ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ಗಾಯಗೊಂಡಿರುವ ಇಬ್ಬರು ಆಸ್ಪತ್ರೆಯ ತುರ್ತು ಚಿಕಿತ್ಸಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರ ಪ್ರಾಣಗಳಿಗೆ ಅಪಾಯವಿದೆಯಂದೇನೂ ಎನಿಸುತ್ತಿಲ್ಲ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಗಾಯಗೊಂಡಿರುವ ಇಬ್ಬರಲ್ಲಿ ಒಬ್ಬರು ಕರ್ತವ್ಯದಲ್ಲಿಲ್ಲದ ಪೋಲೀಸ್ ಅಧಿಕಾರಿಯಾಗಿದ್ದು ದಾಳಿ ನಡೆದ ಪ್ರದೇಶಗಳಲ್ಲೊಂದರ ಮಳಿಗೆಯೊಂದರಲ್ಲಿದ್ದರು ಎಂದೂ ಅವರು ತಿಳಿಸಿದರು. ಈ ಕೃತ್ಯವನ್ನೆಸಗಿದ ವ್ಯಕ್ತಿಯನ್ನು ಈಗಾಗಲೇ ಬಂಧಿಸಲಾಗಿದ್ದು ನಮಗಿರುವ ಮಾಹಿತಯ ಪ್ರಕಾರ ಅವನೊಬ್ಬನೇ ಈ ಕೃತ್ಯವನ್ನು ನಡೆಸಿದ್ದಾನೆ ಎಂದೂ ಅವರು ತಿಳಿಸಿದರು. ಮುಂದುವರೆದು ಮಾತನಾಡಿದ ಅವರು, ಘಟನೆ ನಡೆದ ರೀತಿಯನ್ನು ಸೂಕ್ಷ್ಮವಾಗಿ ಗಮನಿಸಿದರೆ ಇದೊಂದ ಭಯೋತ್ಪಾದಕ ದಾಳಿ ಎಂಬ ಶಂಕೆ ಮೂಡುವುದು ಸಹಜವಾದರೂ ಬೇರೆಲ್ಲಾ ಸಾಧ್ಯತೆಗಳ ಬಗ್ಗೆಯೂ ತನಿಖೆ ನಡೆಸಬೇಕಾಗುತ್ತದೆ ಎಂದರು.

ದಾಳಿ ನಡೆಸಿದ ಶಂಕಿತ ವ್ಯಕ್ತಿಯನ್ನು ಕಾನ್ಸ್‌ಬರ್ಗ್‌ವಾಸಿ 37 ವರ್ಷದ ಡೇನಿಶ್ ನಾಗರಿಕನೆಂದು ಗುರುತಿಸಲಾಗಿದೆಯೆಂದು ತಿಳಿಸಿದ ಅವರು ಈ ಮೊದಲು ಸ್ಥಳೀಯ ದೂರದರ್ಶನದಲ್ಲಿ ವರದಿಯಾಗಿದ್ದಂತೆ ನಾರ್ವೆ ದೇಶದ ಪ್ರಜೆಯಲ್ಲವೆಂದು ತಿಳಿಸಿದರು. ಸಾಮಾಜಿಕ ಜಾಲತಾಣಗಳ ಮಾಯಿತಿಗಳಲ್ಲಿ ಅನೇಕ ಊಹಾಪೋಹಗಳು ಕಂಡುಬಂದಿದ್ದು ಇದಕ್ಕೆ ಸಂಬಂಧಪಡದ ವ್ಯಕ್ತಿಗಳ ಹೆಸರುಗಳೂ ಕಂಡಬಂದ ಕಾರಣ ಮಾಹಿತಿಗಳ ಸತ್ಯಾಸತ್ಯತೆಯನ್ನು ನಾವು ಖಚಿತಪಡಿಸಿಕೊಳ್ಳಲು ನಿರ್ಧರಿಸಿದೆವು ಎಂದೂ ಅವರು ತಿಳಿಸಿದರು. ಶಂಕಿತನನ್ನು ಸಮೀಪದ ಡ್ರಾಮನ್‌ ನಗರದ ಪೋಲೀಸ್ ಠಾಣೆಗೆ ಕರೆದೊಯ್ಯಲಾಗಿದೆಯೆಂದೂ ಅವರು ತಿಳಿಸಿದರು.

ಈ ಕೃತ್ಯದ ಪ್ರತ್ಯಕ್ಷದರ್ಶಿ ಮಹಿಳೆಯೊಬ್ಬರು ಟಿವಿ2 ವಾಹಿನಿಗೆ ತಿಳಿಸಿದಂತೆ ಪ್ರದೇಶದಲ್ಲಿ ಸ್ವಲ್ಪ ಶಾಂತಿಭಂಗವುಂಟಾಗಿ ಮಹಿಳೆಯೊಬ್ಬಳು ರಕ್ಷಣೆಗಾಗಿ ಸುರಕ್ಷಿತ ಸ್ಥಳಕ್ಕೆ ಓಡುತ್ತಿದ್ದು ಬಿಲ್ಲು-ಬಾಣಗಳನ್ನು ಹೊಂದಿದ್ದ ವ್ಯಕ್ತಿಯೊಬ್ಬನು ಮೂಲೆಯೊಂದರಲ್ಲಿ ನಿಂತಿದ್ದುದು ಕಂಡುಬಂತು ಎಂದು ತಿಳಿಸಿದರು. ಅದಾದ ನಂತರ, ಜನರು ರಕ್ಷಣೆಗಾಗಿ ಅತ್ತಿಂದಿತ್ತ ಓಡತ್ತಿದ್ದು ಅವರಲ್ಲಿ ಮಗುವನ್ನು ಎತ್ತಿಕೊಂಡಿದ್ದ ಮಹಿಳೆಯೊಬ್ಬರು ಇದ್ದರು ಎಂದೂ ಅವರು ತಿಳಿಸಿದರು.

ರಾಜಧಾನಿ ಓಸ್ಲೋದಿಂದ ಸುಮಾರು 80 ಕಿ.ಮೀ. ದೂರದಲ್ಲಿರುವ, 2500 ಜನಸಂಖ್ಯೆಯ ನಗರದಲ್ಲಿ ನಡೆದ ದಾಳಿಗಳ ಬಗ್ಗೆ ಸಂಜೆ 6:13ಕ್ಕೆ ಮಾಹಿತಿ ಪಡೆದ ಪೋಲೀಸರು ಸುಮಾರು 6:47ರ ಸಮಯದಲ್ಲಿ ಶಂಕಿತನನ್ನು ವಶಕ್ಕೆ ಪಡೆದರು.

ಇಂತಹ ಘಟನೆಗಳು ನಮ್ಮನ್ನು ಗಾಬರಿಗೊಳಿಸುತ್ತವೆ ಎಂದು ಪ್ರಧಾನ ಮಂತ್ರಿ ಎರ್ನಾ ಸೋಲ್‌ಬರ್ಗ್ ತಿಳಿಸಿದರು. ಇಂದು ಅವರ ಅಧಿಕಾರದ ಕಡೆಯ ದಿನವಾಗಿದ್ದು ಇತ್ತೀಚಿನ ಪಾರ್ಲಿಮೆಂಟ್‌ ಚುನಾವಣೆಗಳಲ್ಲಿ ಜಯಗಳಿಸಿದ ಲೇಬರ್ ಪಕ್ಷದ ಜೊನಾಸ್ ಸ್ಟೋರ್‌ರಿಗೆ ಅಧಿಕಾರ ಹಸ್ತಾಂತರಿಸಲಿದ್ದಾರೆ.

ಕಾಂಗ್ಸ್‌ಬರ್ಗ್‌ಲ್ಲಿ ದಾಳಿ ನಡೆದ ಪ್ರದೇಶಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿರುವ ಪೋಲೀಸರು ಸಾರ್ವಜನಿಕರು ಮನೆಗಳಲ್ಲಿಯೇ ಇರುವಂತೆ ಮನವಿ ಮಾಡಿದ್ದಾರೆ. ದೂರದರ್ಶನದಲ್ಲಿ ಅಂಬ್ಯುಲೆನ್ಸ್‌ಗಳು ಹಾಗೂ ಸಶಸ್ತ್ರ ಪೋಲೀಸರು ಪ್ರದೇಶದಲ್ಲಿದ್ದುದು ಕಂಡುಬಂತಲ್ಲದೇ ಒಂದು ಹೆಲಿಕ್ಯಾಪ್ಟರ್ ಹಾಗೂ ಬಾಂಬ್ ನಿಷ್ಕ್ರಿಯ ದಳವನ್ನೂ ಸ್ಥಳಕ್ಕೆ ಕಳುಹಿಸಲಾಯಿತು.

ಸ್ಕಾಂಡಿನೇವಿಯನ್ ದೇಶದ ಪೋಲೀಸರು ಸಾಮಾನ್ಯ ಪರಿಸ್ಥಿತಿಗಳಲ್ಲಿ ಹೆಚ್ಚು ಶಸ್ತ್ರಸಜ್ಜಿತರಾಗಿರುವುದಿಲ್ಲ, ಆದರೆ, ಈ ಘಟನೆಯ ನಂತರ ರಾಷ್ಟ್ರೀಯ ಪೋಲೀಸ್ ನಿರ್ದೇಶನಾಲಯವು ಎಲ್ಲಾ ಅಧಿಕಾರಿಗಳು ಇನ್ನು ಮುಂದೆ ದೇಶಾದ್ಯಂತ ಸಂಪೂರ್ಣ ಶಸ್ತ್ರಸಜ್ಜಿತರಾಗಿರಬೇಕೆಂದು ಆದೇಶ ನೀಡಿದೆ.

ಪ್ರತ್ಯಕ್ಷದರ್ಶಿಯೊಬ್ಬರು ಕಳುಹಿಸಿದ, ಕಪ್ಪು ಬಾಣವೊಂದು ಗೋಡೆಗೆ ನಾಟಿಕೊಂಡಿರುವ ಛಾಯಾಚಿತ್ರವನ್ನು ಸ್ಥಳೀಯ ವಾರ್ತಾಸಂಸ್ಥೆಯೊಂದು ಬಿತ್ತರಿಸಿತ್ತು. ಇತರೆ ಛಾಯಾಚಿತ್ರಗಳಲ್ಲಿ, ಕೆಲವು ಸ್ಪರ್ಧಾತ್ಮಕ ಮಟ್ಟದ ಬಾಣಗಳು ಸ್ಥಳದಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದುದು ಕಂಡುಬಂತು.

ನಾರ್ವೆ ದೇಶದಲ್ಲಿ ಇಂತಹ ಘಟನೆಗಳು ಸಂಭವಿಸುವುದು ಅಪರೂಪವಾದರೂ ಸುಮಾರು 10 ವರ್ಷಗಳ ಹಿಂದೆ ತೀವ್ರ ಬಲಪಂಥೀಯ ವಿಚಾರಧಾರೆಯ ಆಂಡರ್ಸ್ ಬ್ರೆವಿಕ್ ಎಂಬಾತ 77 ಜನರನ್ನು ಹತ್ಯ ಮಾಡಿದ್ದು ಎರಡನೇ ವಿಶ್ವಯುದ್ಧದ ನಂತರದ ಅತಿದೊಡ್ಡ ಹತ್ಯಾಕಾಂಡವಾಗಿತ್ತು. ಮೊದಲು ಪ್ರಧಾನಮಂತ್ರಿ ಕಾರ್ಯಾಲಯದ ಪಕ್ಕದ ಕಟ್ಟಡದಲ್ಲಿ ಬಾಂಬ್ ಸ್ಫೋಟಿಸಿದ್ದ ಬ್ರೆವಿಕ್ ನಂತರ ಉಟೋಯಾ ದ್ವೀಪದಲ್ಲಿ ನಡೆಯುತ್ತಿದ್ದ ಎಡಪಂಥೀಯರು ಭಾಗವಹಿಸಿದ್ದ ಯುವ ಬೇಸಿಗೆ ಶಿಬಿರವೊಂದರ ಮೇಲೆ ಗುಂಡಿನ ಮಳೆಗರೆದಿದ್ದ. ಇದೇ ರೀತಿಯ ಇನ್ನೊಂದು ಘಟನೆಯಲ್ಲಿ, ಸ್ವಘೋಷಿತ ನಿಯೋ-ನಾಝಿ ಫಿಲಿಪ್ ಮಾನ್‌ಶಾಸ್ 2019ರ ಆಗಸ್ಟ್‌ನಲ್ಲಿ ಓಸ್ಲೋ ನಗರದ ಹೊರವಲಯದಲ್ಲಿರುವ ಮಸೀದಿಯೊಂದರ ಮೇಲೆ ಗುಂಡಿನ ಮಳೆಗರೆದಿದ್ದು ಅಲ್ಲಿದ್ದವರೇ ಅವನನ್ನು ವಶಕ್ಕೆ ಪಡೆದಿದ್ದರು, ಘಟನೆಯಲ್ಲಿ ಯಾರಿಗೂ ಗಂಭೀರ ಗಾಯಗಳಾಗಿರಲಿಲ್ಲ. ಇದಕ್ಕೂ ಮೊದಲು ಅವನು ಚೀನಾದಿಂದ ದತ್ತು ಪಡೆಯಲಾಗಿದ್ದ ತನ್ನ ಮಲ ಸಹೋದರಿಯನ್ನೇ ಗುಂಡು ಹಾರಿಸಿ ಕೊಂದಿದ್ದ ಹಾಗೂ ಇದನ್ನು ಜನಾಂಗೀಯ ಹತ್ಯೆ ಎಂದು ಪರಿಗಣಿಸಲಾಗಿತ್ತು.

ಕೆಲವು ಜಿಹಾದಿ ದಾಳಿಗಳನ್ನೂ ರಕ್ಷಣಾಪಡೆಗಳು ವಿಫಲಗೊಳಿಸಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.

Suspect attacks public with bow and arrows in Kongsberg, terrorist act not ruled out

ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಹೆಚ್ಚುತ್ತಿರುವ ಭಯೋತ್ಪಾದನೆ: ಹೆಚ್ಚಿದ ಆತಂಕ

ಇದನ್ನೂ ಓದಿ: ತಾಲಿಬಾನಿಗಳ ಭಯೋತ್ಪಾದನೆ ವಿರುಧ್ದ ಎಲ್ಲಾ ರಾಷ್ಟ್ರಗಳು ಒಟ್ಟಾಗಬೇಕು : ಸಚಿವ ಸುನಿಲ್ ಕುಮಾರ್

Tags: TOP NEWS
ShareSendTweetShare
Join us on:

Related Posts

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In