• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಸಾಹಿತ್ಯ

ಪುಸ್ತಕ ಓದೋಣ: ಸಾಹಿತಿ ಆಶಾ ರಘು ಸಮಗ್ರ ಕೃತಿಗಳಿಗೆ ವಿಶೇಷ ರಿಯಾಯ್ತಿ

ಮಾಯೆ ಪುಸ್ತಕಕ್ಕೆ ಖ್ಯಾತ ಕಾದಂಬರಿಕಾರರಾದ ಡಾ.ಕೆ.ಎನ್ ಗಣೇಶಯ್ಯ ಬರೆದಿರುವ ಬೆನ್ನುಡಿ ಕನ್ನಡ ಸಹೃದಯರ ಗಮನ ಸೆಳೆದಿತ್ತು. 'ಕನ್ನಡನಾಡಿ' ಜಾಲತಾಣದ ಓದುಗರಿಗಾಗಿ ಬೆನ್ನುಡಿಯನ್ನು ಮತ್ತೊಮ್ಮೆ ಪ್ರಕಟಿಸುತ್ತಿದ್ದೇವೆ.

Shri News Desk by Shri News Desk
Oct 19, 2021, 12:08 pm IST
in ಸಾಹಿತ್ಯ
Asha-Raghu-Books

ಸಾಹಿತಿ ಆಶಾರಘು

Share on FacebookShare on TwitterTelegram

ಖ್ಯಾತ ಸಾಹಿತಿ ಆಶಾ ರಘು ಅವರ ಮಾಯೆ ಪುಸ್ತಕ ಬಿಡುಗಡೆಯಾದ ಶುಭ ಸಂದರ್ಭದಲ್ಲಿ ಅವರ ಸಮಗ್ರ ಕೃತಿಗಳಿಗೆ ವಿಶೇಷ ರಿಯಾಯಿತಿ ನೀಡಲಾಗುತ್ತಿದೆ ಎಂದು ಪ್ರಕಾಶನ ಸಂಸ್ಥೆ ತಿಳಿಸಿದೆ. ಮೂರು ಕಾದಂಬರಿಗಳು, ಎರಡು ಕಥಾಸಂಕಲನಗಳು, ಒಂದು ಅತಿಸಣ್ಣ ಕಥೆಗಳ ಸಂಗ್ರಹ, ಎರಡು ನಾಟಕಗಳು ಸೇರಿ ಒಟ್ಟು ಎಂಟು ಪುಸ್ತಕಗಳ ಸಂಗ್ರಹ ಇದೀಗ ಸಾಹಿತ್ಯಲೋಕ ಪಬ್ಲಿಕೇಷನ್ಸ್‌ನಿಂದ ವಿಶೇಷ ರಿಯಾಯಿತಿಯಲ್ಲಿ ಲಭ್ಯವಿದೆ. ಈ ಎಂಟು ಪುಸ್ತಕಗಳ ಮುಖಬೆಲೆ 1610 ರೂಪಾಯಿ. ಆದರೆ ಈಗ ರಿಯಾಯ್ತಿಯ ನಂತರ 1370 ರೂಪಾಯಿಗೆ ಲಭ್ಯವಿದೆ. ಅಂಚೆ ವೆಚ್ಚ ಉಚಿತ. ಪುಸ್ತಕ ಬೇಕಾದವರು ಮೊಬೈಲ್ 99459 39436 ಸಂಖ್ಯೆಗೆ ವಾಟ್ಸಾಪ್ ಮೂಲಕ ಸಂಪರ್ಕಿಸಬಹುದು.

ಮಾಯೆ ಪುಸ್ತಕಕ್ಕೆ ಖ್ಯಾತ ಕಾದಂಬರಿಕಾರರಾದ ಡಾ.ಕೆ.ಎನ್ ಗಣೇಶಯ್ಯ ಬರೆದಿರುವ ಬೆನ್ನುಡಿ ಕನ್ನಡ ಸಹೃದಯರ ಗಮನ ಸೆಳೆದಿತ್ತು. ‘ಕನ್ನಡನಾಡಿ’ ಜಾಲತಾಣದ ಓದುಗರಿಗಾಗಿ ಬೆನ್ನುಡಿಯನ್ನು ಇಲ್ಲಿ ಪ್ರಕಟಿಸುತ್ತಿದ್ದೇವೆ.

ಸುಖ ಪಡೆಯಲೆಂದು ಹೆಣ್ಣು, ಹೊನ್ನು ಮತ್ತು ಮಣ್ಣುಗಳ ಹಿಂದೆ ಬಿದ್ದ ಜೀವಕ್ಕೆ ಆ ಸುಖವು ಎಂದೂ ಮರೀಚಿಕೆಯಾಗಿಯೇ ಉಳಿಯುತ್ತದೆ ಎನ್ನುವುದು ಚಿರಪರಿಚಿತ ಬೋಧನೆಯಷ್ಟೇ ಅಲ್ಲದೆ ಮಾನವನ ಚರಿತ್ರೆಯುದ್ದಕ್ಕೂ ಪುನರಾವರ್ತಿತವಾಗಿ ಗೋಚರಿಸುವ ಸತ್ಯ ಕೂಡ, ಇದರ ಇನ್ನೊಂದು ಮಗ್ಗುಲಾಗಿ ನೆಲೆಯಾಗಿರುವ ಮತ್ತೊಂದು ಸತ್ಯವೆಂದರೆ ಆ ಮೂರೂ ಆಸೆಗಳನ್ನು ತೊರೆದ ಜೀವಕ್ಕೆ ಆಹ್ಲಾದಕರ ಆನಂದದ ಜೊತೆಗೆ ಪಾರಮಾರ್ಥಿಕ ಸುಖವೂ ದೊರೆಯುತ್ತದೆ ಎನ್ನುವುದು. ಈ ಎರಡೂ ಸತ್ಯಗಳನ್ನು ನಿರೂಪಿಸಲೆಂದೆ ಆಶಾ ರಘು ಅವರು ಈ ಕಾದಂಬರಿಯನ್ನು ಕಟ್ಟಿಕೊಟ್ಟಿದ್ದಾರೆಯೇ ಎಂಬ ಅನಿಸಿಕೆ ಓದುಗರಲ್ಲಿ ಮೂಡುವುದು ಖಂಡಿತ, ಅಷ್ಟರಮಟ್ಟಿಗೆ ಈ ಕಾದಂಬರಿಯ ರಚನೆ ಮತ್ತು ಉದ್ದೇಶ ಸಫಲಗೊಂಡಿದೆ ಎನ್ನುವುದೂ ಖಚಿತ.

ಒಂದು ಚಾರಿತ್ರಿಕ ಹಿನ್ನೆಲೆಯಲ್ಲಿ ಬೆಳೆಯುವ ಕಥಾಹಂದರವು ಪಾತ್ರಗಳ ನೆನಪುಗಳ ಸರಮಾಲೆಯಾಗಿಯೇ ಓದುಗನಿಗೆ ತೆರೆದುಕೊಳ್ಳುವುದು ಈ ಕಾದಂಬರಿಯ ಒಂದು ವಿಶೇಷ, ಬಲವಂತದಲ್ಲಿ ಪ್ರೀತಿಯನ್ನು ಪಡೆಯುವ ಛಲ ನಿಧಿಯ ಬೇಟೆ, ಆಸ್ತಿಯ ಆಸೆ, ಸಿಂಹಾಸನದ ಉತ್ತರಾಧಿಕಾರಿಯ ಜನ್ಮ ರಹಸ್ಯ ಮುಂತಾದ ಹೆಗ್ಗುರುತುಗಳಿಗೆ ಓದುಗನನ್ನು ಕಟ್ಟಿಹಾಕಿ, ಆ ಹೆಗ್ಗುರುತುಗಳ ನಕ್ಷೆಯೊಳಗೆ ಕತೆಯನ್ನು ಬೆಳೆಸುತ್ತಾರೆ ಆಶಾ,

ಕಥಾನಾಯಕ ಅತಿಯಾಗಿ ಪ್ರೀತಿಸಿದ ಬಾಲ್ಯದ ಪ್ರೇಯಸಿಯು ವಿಧಿಯ ಕೈಚಳಕದಿಂದ ದೂರವಾದ ನಂತರ ಆಕೆಯ ಸ್ಥಾನದಲ್ಲಿ ನೆಲೆಯಾದ ಮತ್ತೊಂದು ಹೆಣ್ಣು ಅವನ ನೈತಿಕ ಸಮತೋಲನವನ್ನು ಸಂಪೂರ್ಣವಾಗಿ ಕದಡಿ ಅವನಲ್ಲಿ ‘ಮಾನವ ಸಹಜ’ ದುರಾಸೆಗಳನ್ನು ಆಳವಾಗಿ ಬಿತ್ತಿ ಬೆಳೆಸುತ್ತಾಳೆ: ಪರಿಣಾಮವಾಗಿ, ತನ್ನದಲ್ಲದ ಮಣ್ಣನ್ನು ಕಬಳಿಸಿ, ಪರರ ಹೊನ್ನಿಗೆ, ಹೆಣ್ಣಿಗೆ ಕೈ ಚಾಚಿದ ಅವನ ಜೀವನ ಕೊನೆಗೆ ಸುಂಟರಗಾಳಿಗೆ ಸಿಕ್ಕ ತರಗೆಲೆಯಂತಾಗುತ್ತದೆ. ಅಮಾನವೀಯ ಕೃತ್ಯಗಳಿಗೆ ಕನ್ನಡಿ ಹಿಡಿಯುವಂತೆ ಸೃಷ್ಟಿಸಲಾಗಿರುವ ಮತ್ತೊಂದು ಪಾತ್ರದ ಅಮಾಯಕ ವ್ಯಕ್ತಿ, ತಾನು ವಾರಸುದಾರನಾಗಿದ್ದ ಹೊನ್ನನ್ನೂ, ಅಧಿಕಾರವನ್ನೂ ದೂರ ತಳ್ಳಿ, ಸ್ನೇಹಕ್ಕೆ ಸತ್ಯಕ್ಕೆ ಜೋತುಬಿದ್ದ ಕಾರಣ, ಸರಳವಾದರೂ ಸುಂದರ ಹಾಗೂ ಆನಂದಮಯ ಜೀವನ ಸಾಗಿಸುತ್ತಾನೆ.

ಒಟ್ಟಿನಲ್ಲಿ, ಸುಖವು ಸುತ್ತಲೂ ಇದ್ದರೂ ಅದನ್ನು ಗ್ರಹಿಸದೆ ಮತ್ತೆಲ್ಲೋ ಅದು ಸಿಗುತ್ತದೆ ಎಂಬ ಭ್ರಮೆಯ ‘ದೂರ ತೀರಕೆ ಕರೆದೊಯ್ಯುವ ‘ಮೋಹನ(ದ) ಮುರುಳಿ’ ಯ ಕರೆಗೆ ಬಲಿಯಾಗುವ ಎಲ್ಲ ಮನಸುಗಳಿಗೆ ಎಚ್ಚರಿಕೆಯ ಕರೆಘಂಟೆಯಂತೆ ಆಶಾ ಅವರ ಈ ಕಾದಂಬರಿ ಮೂಡಿ ಬಂದಿದೆ.

Kannada Literature Special Discount for Writer Asha Raghu Books

Asha-Raghu-Books
ಆಶಾರಘು ಅವರ ಪುಸ್ತಕಗಳು

ಇದನ್ನೂ ಓದಿ: ನೇತಾಜಿ ಸುಭಾಷ್ ಚಂದ್ರ ಬೋಸ್: ಮರೆಯಬಾರದ ಮಹಾನ್ ತೇಜಸ್ಸು!!!
ಇದನ್ನೂ ಓದಿ: ಚಿಕ್ಕಮಗಳೂರು ನೆಲೆ-ಬೆಲೆ ಪುಸ್ತಕ ಬಿಡುಗಡೆ

Tags: Asha RaghuBooksTOP NEWS
ShareSendTweetShare
Join us on:

Related Posts

ಮೊಗೆದಷ್ಟೂ ಬೆರಗು : ಅಣ್ಣನ ನೆನಪಿನಲ್ಲಿ ತೇಜಸ್ವೀ ಮಿನುಗು!

ಮೊಗೆದಷ್ಟೂ ಬೆರಗು : ಅಣ್ಣನ ನೆನಪಿನಲ್ಲಿ ತೇಜಸ್ವೀ ಮಿನುಗು!

ಕುವೆಂಪು ಭಾವಲಹರಿಯಲ್ಲಿ: ಕನ್ನಡವೇ ಸತ್ಯ !

ಕುವೆಂಪು ಭಾವಲಹರಿಯಲ್ಲಿ: ಕನ್ನಡವೇ ಸತ್ಯ !

Keshava Reddy Handrala

ಕೇಶವ ರೆಡ್ಡಿ ಹಂದ್ರಾಳರ ಹೊಸ ಕಥಾ ಸಂಕಲನ ಸೋನಾಗಾಚಿಗೆ ಆರ್‌ ಡಿ ಹೆಗಡೆ ಆಲ್ಮನೆ ಬರೆದ ಮುನ್ನುಡಿ

Opinions

Opinion: ನಾವು ನಡುಪಂಥೀಯರಲ್ಲ, ನೇರಪಂಥೀಯರು: ಕಥೆಗಾರ ಮಧು ವೈಎನ್

ಮೊಗೆದಷ್ಟೂ ಅರಿವು, ತಿಳಿದಷ್ಟು ಬೆರಗು: ಪೂರ್ಣ ಚಂದ್ರ ತೇಜಸ್ವಿ ಸೊಬಗು !

ಮೊಗೆದಷ್ಟೂ ಅರಿವು, ತಿಳಿದಷ್ಟು ಬೆರಗು: ಪೂರ್ಣ ಚಂದ್ರ ತೇಜಸ್ವಿ ಸೊಬಗು !

ಸಂತಕವಿ ದಾರ್ಶನಿಕ ಭಕ್ತ ಕನಕದಾಸರು: ಕನ್ನಡ ಸಾಹಿತ್ಯ ಸಿರಿಪದಕದ ಅಮೂಲ್ಯ ಹೆಸರು!

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In