ಹೈದರಾಬಾದ್: ಜಮ್ಮು-ಕಾಶ್ಮೀರದಲ್ಲಿ ಉಗ್ರರು ನಾಗರಿಕರ ಮೇಲೆ ಅವ್ಯಾಹತ ದಾಳಿ ನಡೆಸಿ ಹತ್ಯೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಟಿ-20 ಕ್ರಿಕೆಟ್ ವಿಶ್ವಕಪ್ನಲ್ಲಿ ಪಾಕ್ ವಿರುದ್ಧ ಭಾರತ ಪಂದ್ಯ ಆಡಬಾರದು ಎಂಬ ಅಭಿಯಾನ ಸಾಮಾಜಿಕ ಜಾಲತಾಣದಲ್ಲಿ ಶುರುವಾಗಿದ್ದು, ಅನೇಕರು ಈ ಆಗ್ರಹಕ್ಕೆ ದನಿಗೂಡಿಸಿದ್ದಾರೆ. ಈಗ ಅಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹದುಲ್ ಮುಸ್ಲಿಮೀನ್ (ಎಐಎಂಐಎಂ) ಪಕ್ಷದ ಮುಖ್ಯಸ್ಥ ಮತ್ತು ಸಂಸದ ಅಸಾದುದ್ದೀನ್ ಒವೈಸಿ ಕೂಡ ಇದೇ ವಿಚಾರವನ್ನು ಪ್ರಸ್ತಾಪಿಸಿದ್ದಾರೆ ಮತ್ತು ಪ್ರಧಾನಿ ನರೇಂದ್ರ ಮೋದಿ ಮೌನವಾಗಿದ್ದಾರೆಂದು ಕಿಡಿಕಾರಿದ್ದಾರೆ.
ಲಡಾಖ್ನಲ್ಲಿ ಚೀನಾ ಮುತ್ತಿಗೆ ಹಾಕಿದಾಗಲೂ ಮೋದಿ ತುಟಿಪಿಟಕ್ ಎನ್ನಲಿಲ್ಲ, ಇಂಧನ ದರ ರಾಕೆಟ್ ವೇಗದಲ್ಲಿ ಹೆಚ್ಚುತ್ತಿದ್ದರೂ ತೆಪ್ಪಗಿದ್ದಾರೆ. ಈಗ ಟಿ-20 ವಿಶ್ವಕಪ್ನಲ್ಲಿ ಪಾಕ್ ವಿರುದ್ಧ ಭಾರತ ಕ್ರಿಕೆಟ್ ಪಂದ್ಯ ಆಡಬಾರದೆಂಬ ಒಕ್ಕೊರಲ ಒತ್ತಾಯ ಕೇಳಿಬರುತ್ತಿದೆ. ಆದರೆ ಮೋದಿ ಮಾತ್ರ ಮಹಾ ಮೌನ ತಳೆದಿದ್ದಾರೆ. ಚೀನಾ ಮತ್ತು ತೈಲ ದರ ಏರಿಕೆಯ ಬಗ್ಗೆ ಮಾತನಾಡಲು ಪ್ರಧಾನಿ ಹೆದರುತ್ತಾರೆ ಎಂದು ಒವೈಸಿ ಕಾರ್ಯಕ್ರಮದಲ್ಲಿ ಹಂಗಿಸಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ಉಗ್ರರು ನಿತ್ಯ 20-20 ಆಡುತ್ತಿದ್ದಾರೆ. ಇದರಿಂದ ನಾಗರಿಕರು ಸಾಯುತ್ತಿದ್ದಾರೆ. ಕಾರ್ಯಾಚರಣೆಯಲ್ಲಿ ನಮ್ಮ 9 ಯೋಧರು ಮಡಿದಿದ್ದಾರೆ. ಇಂಥ ಸನ್ನಿವೇಶದಲ್ಲಿ ಪಾಕ್ ವಿರುದ್ಧ ಟ-20 ಮ್ಯಾಚ್ ಆಡಬೇಕೆ ಎಂದು ಒವೈಸಿ ಪ್ರಶ್ನಿಸಿದ್ದಾರೆ. ಕೇಂದ್ರ ಸರ್ಕಾರ ವೈಫಲ್ಯದಿಂದಾಗಿ ಕಾಶ್ಮೀರದಲ್ಲಿ ಜನರು ಜೀವ ಕಳೆದುಕೊಳ್ಳುವಂತಾಗಿದೆ. ಹೊಟ್ಟೆಬಾಡಿಗಾಗಿ ಕಾಶ್ಮೀರಕ್ಕೆ ಬಂದ ಬಡ ಬಿಹಾರಿಗಳು ಸಾಯುವಂತಾಗಿದೆ. ಕೇಂದ್ರ ಗೃಹ ಮಂತ್ರಾಲಯದಡಿ ಇರುವ ಬೇಹುಗಾರಿಕಾ ದಳ ಏನು ಮಾಡುತ್ತಿದೆ? ಇದು ಸಚಿವ ಅಮಿತ್ ಷಾ ಅವರ ವೈಫಲ್ಯವಲ್ಲವೆ? ಎಂದು ಕಿಡಿಕಾರಿದ್ದಾರೆ.
Asaduddin Owaisi Questions PM Narendra Modi on T20 Jammu Kashmir
#WATCH | PM Modi never speaks on 2 things — rise in petrol and diesel prices & China sitting in our territory in Ladakh. PM is afraid of speaking on China. Our 9 soldiers died (in J&K) & on Oct 24 India-Pakistan T20 match will happen: AIMIM chief Asaduddin Owaisi, in Hyderabad pic.twitter.com/Q0AabFZ0BU
— ANI (@ANI) October 19, 2021
ಇದನ್ನೂ ಓದಿ: ಉತ್ತರಾಖಂಡದಲ್ಲಿ ಹೆಚ್ಚಿದ ಮಳೆ, ಭಾರಿ ಪ್ರವಾಹ ಸಿಎಂ ಜತೆ ಪ್ರಧಾನಿ ಮೋದಿ ಚರ್ಚೆ
ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿ ನಿರಂಕುಶವಾದಿ ಅಲ್ಲ: ಅಮಿತ್ ಷಾ
Discussion about this post