ಡೆಹ್ರಾಡೂನ್: ಉತ್ತರಾಖಂಡದ ಲಂಖಾಗಾ ಪಾಸ್ ಪರ್ವತ ಪ್ರದೇಶದಲ್ಲಿ ಸಂಭವಿಸಿದ ಭಾರಿ ಹಿಮಪಾತದಲ್ಲಿ 11 ಮಂದಿ ಚಾರಣಿಗರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಸಮುದ್ರ ಮಟ್ಟದಿಂದ 17,000 ಅಡಿ ಎತ್ತರದಲ್ಲಿರುವ ಲಂಖಾಗಾ ಪಾಸ್ ಪ್ರದೇಶಕ್ಕೆ ತೆರಳುವ ಮಾರ್ಗದ ಹರ್ಸಿಲ್ ಎಂಬಲ್ಲಿ ಹಿಮಪಾತ ಸಂಭವಿಸಿದಾಗ ಚಾರಣಿಗರು, ಪ್ರವಾಸಿಗರು, ಮಾರ್ಗದರ್ಶಕರು ಸೇರಿದಂತೆ 17 ಮಂದಿ ಇದ್ದರು ಎನ್ನಲಾಗಿದೆ. ಹಿಮಪಾತ ಹಾಗೂ ಪ್ರತಿಕೂಲ ಹವಾಮಾನದಿಂದಾಗಿ ಅಕ್ಟೋಬರ್ 18ರಂದೇ ಚಾರಣಿಗರಿಗೆ ದಾರಿ ತಪ್ಪಿತ್ತು.
ಭಾರತೀಯ ವಾಯುಪಡೆಯು ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತವಾಗಿದ್ದು, ಈವರೆಗೆ 11 ಮೃತದೇಹಗಳು ಪತ್ತೆಯಾಗಿವೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಓದಿ: ಸೇನೆಯ 39 ಮಹಿಳಾ ಅಧಿಕಾರಿಗಳು ಪೂರ್ಣಾವಧಿ ನೇಮಕದ ಸೇವಾ ಸ್ಥಿತಿ ಖಾತರಿಗೆ ಸೂಚನೆ
ಅಕ್ಟೋಬರ್ 20ರಂದೇ ವಾಯುಪಡೆ ರಕ್ಷಣಾ ಕಾರ್ಯಾಚರಣೆ ಆರಂಭಿಸಿದೆ. ಇದಕ್ಕಾಗಿ ಎರಡು ಅತ್ಯಾಧುನಿಕ ಲಘು ಹೆಲಿಕಾಪ್ಟರ್ಗಳನ್ನೂ ಬಳಸಿಕೊಳ್ಳಲಾಗಿದೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್) ಕೂಡ ಕಾರ್ಯಾಚರಣೆಯಲ್ಲಿ ಕೈಜೋಡಿಸಿವೆ.
ಮೃತದೇಹಗಳನ್ನು ಸ್ಥಳೀಯ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಗಾಯಾಳುಗಳಿಗೆ ಹರ್ಸಿಲ್ನಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಬಳಿಕ ಉತ್ತರಕಾಶಿಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
Discussion about this post