ಕಲಬುರಗಿ: ಸರ್ಕಾರಗಳು ವೃತ್ತಿಶಿಕ್ಷಣದ ಕಲಿಕೆಗೆ ನೀಡುವಷ್ಟು ಪ್ರಾಧಾನ್ಯತೆಯನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣದ ಕಲಿಕೆಗೆ ನೀಡುತ್ತಿಲ್ಲ ಎಂದು ಸುಪ್ರೀಂಕೋರ್ಟ್ನ ಗೌರವಾನ್ವಿತ ನ್ಯಾಯಮೂರ್ತಿ ಹಾಗೂ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಕಾರಿ ಅಧ್ಯಕ್ಷ ಉದಯ್ ಉಮೇಶ್ ಲಲಿತ್ ವಿಷಾದ ವ್ಯಕ್ತಪಡಿಸಿದರು.
ನಗರದ ಹೆಚ್ಕೆಇ ಸಂಸ್ಥೆಯ ಪಿಡಿಎ ಇಂಜಿನಿಯರಿoಗ್ ಕಾಲೇಜಿನ ಆಡಿಟೋರಿಯಂನಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಲಬುರಗಿ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರಗಳ ಸಹಯೋಗದಲ್ಲಿ ಆಯೋಜಿಸಿದ್ದ ಸುಸ್ಥಿರ ಅಭಿವೃದ್ಧಿಯ ಗುರಿಗಳನ್ನು ಸಾಧಿಸುವಲ್ಲಿ ಹಕ್ಕುಗಳು ಮತ್ತು ಅರ್ಹತೆ ನೀಡುವಿಕೆಯ ವಾಸ್ತವೀಕರಣ-2030 ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡುತ್ತಿದ್ದರು.
ವೈದ್ಯಕೀಯ, ಇಂಜಿನಿಯರಿoಗ್, ಐಐಟಿ ಮುಂತಾದ ವೃತ್ತಿಶಿಕ್ಷಣ ಕೋರ್ಸ್ಗಳ ಬಗ್ಗೆ ಸರ್ಕಾರಗಳು ಮುತುವರ್ಜಿ ವಹಿಸುತ್ತಿವೆ ಎಂದು ದೇಶದಲ್ಲಿರುವ ಸರ್ಕಾರಿ ವಲಯದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ, ಕಿಂಗ್ ಜಾರ್ಜ್ ಇಂಜಿನಿಯರಿಂಗ್ ಕಾಲೇಜು, ಜೆಜೆ ಆರ್ಕಿಟೆಕ್ಚರ್ ಮುಂತಾದ ಉನ್ನತ ಶಿಕ್ಷಣ ಬಗ್ಗೆ ಪ್ರಸ್ತಾಪಿಸಿದ ಅವರು ಸರ್ಕಾರಗಳು ಯಾಕೆ ಇಂತಹ ಕಾಳಜಿಯನ್ನು ಪ್ರಾಥಮಿಕ ಶಿಕ್ಷಣದ ಕಲಿಕೆ ಬಗ್ಗೆ ತೋರುತ್ತಿಲ್ಲ ಎಂದು ಅವರು ಹೇಳಿದರು.
ಎಲ್ಲಾ ಸಮುದಾಯಕ್ಕೂ ಶಿಕ್ಷಣ ಸೇರಿದಂತೆ ಎಲ್ಲಾ ಅವಕಾಶಗಳು ಸಮಾನವಾಗಿ ದೊರಕಬೇಕಾಗಿದೆ ಎಂದು ಅವರು ಪ್ರತಿಪಾದಿಸಿದರು. ಸುಸ್ಥಿರ ಅಭಿವೃದ್ಧಿಯ ಗುರಿಗಳನ್ನು ಸಾಧಿಸಬೇಕಾದರೆ, ಒಟ್ಟು 17 ಅಂಶಗಳ ಮಾನದಂಡವಿದ್ದು, ಮಕ್ಕಳ ಶಿಕ್ಷಣದ ಜೊತೆಗೆ ಮಹಿಳೆಯರ ಸಬಲೀಕರಣವಾಗಬೇಕು ಎಂದು ಅವರು ಒತ್ತಿಹೇಳಿದರು.
ಕರ್ನಾಟಕ ರಾಜ್ಯ ಹೈಕೋರ್ಟ್ನ ಮುಖ್ಯನ್ಯಾಮಮೂರ್ತಿ ಗೌರವಾನ್ವಿತ ರಿತು ರಾಜ್ ಅವಸ್ಥಿ ಆವರು ಮಾತನಾಡಿ, ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಪ್ಯಾನ್ ಇಂಡಿಯಾ ಕಾನೂನು ಅರಿವು ಹಾಗೂ ಜನಸಮೂಹ ಜಾಗೃತಿ ಅಭಿಯಾನ ಕಾರ್ಯಕ್ರಮವು ಗ್ರಾಮೀಣ ಮತ್ತು ದೂರದ ಪ್ರದೇಶದ ಯುವ ಸಮುದಾಯಕ್ಕೆ ತಲುಪಿ, ಅದರ ಪ್ರಯೋಜನ ಪಡೆಯುವಂತಾಗಬೇಕು. ಕಾನೂನು ಅರಿವು ಶಿಕ್ಷಣದ ಮೂಲಕ ಅವರು ಸಶಕ್ತರಾಗಬೇಕು. ಈ ನಿಟ್ಟಿನಲ್ಲಿ ವಕೀಲ ಸಮುದಾಯ, ಕಾನೂನು ವಿದ್ಯಾರ್ಥಿಗಳು,ಪ್ಯಾರಾ ಲೀಗಲ್ ಸ್ವಯಂಸೇವಕರು ಹಾಗೂ ಸಾಮಾಜಿಕ ಕಾರ್ಯಕರ್ತರು ಶ್ರಮಿಸಬೇಕು ಎಂದು ಅವರು ಕರೆ ನೀಡಿದರು.
ಕರ್ನಾಟಕ ರಾಜ್ಯ ಹೈಕೋರ್ಟ್ನ ಗೌರವಾನ್ವಿತ ನ್ಯಾಯಾಧೀಶ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಕಾರಿ ಅಧ್ಯಕ್ಷ ಬಿ, ವೀರಪ್ಪ ಅವರು ಪ್ರಾಸ್ತಾವಿಕ ಭಾಷಣ ಮಾಡಿದರು. ಕರ್ನಾಟಕ ರಾಜ್ಯ ಹೈಕೋರ್ಟ್ನ ಗೌರವಾನ್ವಿತ ನ್ಯಾಯಾಧೀಶ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಪಿ.ಎಸ್. ದಿನೇಶ್ ಕುಮಾರ್ ಅವರು ಸ್ವಾಗತಿಸಿದರು. ಕರ್ನಾಟಕ ರಾಜ್ಯ ಹೈಕೋರ್ಟ್ನ ಗೌರವಾನ್ವಿತ ನ್ಯಾಯಾಧೀಶ ಹಾಗೂ ಆಡಳಿತ ನ್ಯಾಯಧೀಶ ಕೃಷ್ಣ ಎಸ್.ದೀಕ್ಷಿತ್ ಅವರು ವಂದಿಸಿದರು. ಕರ್ನಾಟಕ ರಾಜ್ಯ ಹೈಕೋರ್ಟ್, ಕಲಬುರಗಿ ಪೀಠದ ಸರ್ಕಾರಿ ವಕೀಲರಾದ ಅನುರಾಧ ದೇಸಾಯಿ ಅವರು ಕಾರ್ಯಕ್ರಮ ನಿರೂಪಿಸಿದರು.
ವೇದಿಕೆಯಲ್ಲಿ ಕರ್ನಾಟಕ ರಾಜ್ಯ ಹೈಕೋರ್ಟ್ನ ಗೌರವಾನ್ವಿತ ನ್ಯಾಯಾಧೀಶ ಆರ್. ದೇವದಾಸ್, ಕರ್ನಾಟಕ ಸರ್ಕಾರದ ಅಟ್ವೋಕೇಟ್ ಜನರಲ್ ಪ್ರಭುಲಿಂಗ್ ನಾವಲಗಿ ಇದ್ದರು.
Victory: 100 ಸಂಖ್ಯೆ ರಚಿಸಿ ಬಿಜೆಪಿ ಯುವಮೋರ್ಚಾ ವಿಜಯೋತ್ಸವ ಸಂಭ್ರಮಾಚರಣೆ

























Discussion about this post