• Home
  • About Us
  • Contact Us
  • Terms of Use
  • Privacy Policy
Tuesday, August 11, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಕಡೆಗೂ ಬಿಡುಗಡೆ: 28 ದಿನಗಳ ಬಳಿಕ ಮನೆಗೆ ಬಂದ ಆರ್ಯನ್ ಖಾನ್

ಶುಕ್ರವಾರ ಸಂಜೆ ಒಳಗೆ ಕಾಗದ ಪತ್ರಗಳನ್ನು ಹೊಂದಿಸಿಕೊಳ್ಳಲು ಆಗದ ಕಾರಣ ಆರ್ಯನ್ ಮತ್ತೊಂದು ರಾತ್ರಿ ಜೈಲಿನಲ್ಲಿ ಇರಬೇಕಾಯಿತು.

Shri News Desk by Shri News Desk
Oct 30, 2021, 03:21 pm IST
in ರಾಷ್ಟ್ರೀಯ, ಸಿನಿಮಾ
ಆರ್ಯನ್ ಖಾನ್

ಆರ್ಯನ್ ಖಾನ್

Share on FacebookShare on TwitterTelegram

ಮುಂಬೈ: ಬಾಲಿವುಡ್ ನಟ ಶಾರುಖ್‌ ಖಾನ್ ಪುತ್ರ ಆರ್ಯನ್ ಖಾನ್ ಕಡೆಗೂ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಆತನ ವಕೀಲರು ಶುಕ್ರವಾರ ಶತಪ್ರಯತ್ನ ಮಾಡಿದರೂ ಸಂಜೆ ಒಳಗೆ ನಿಗದಿತ ಕಾಗದ ಪತ್ರಗಳನ್ನು ಹೊಂದಿಸಿಕೊಳ್ಳಲು ಆಗದ ಕಾರಣ ಆರ್ಯನ್ ಮತ್ತೊಂದು ರಾತ್ರಿ ಜೈಲಿನಲ್ಲಿ ಇರಬೇಕಾಯಿತು.

ಐಷಾರಾಮಿ ಹಡಗಿನಲ್ಲಿ ಮಾದಕವಸ್ತು ಸೇವನೆ ಕೇಸ್‌ನಲ್ಲಿ ಬಂಧಿತನಾಗಿ 28 ದಿನ (ಐದು ದಿನ ಪೊಲೀಸ್ ಲಾಕಪ್‌ನಲ್ಲಿ ಇದ್ದಿದ್ದು ಸೇರಿ) ಜೈಲಿನಲ್ಲಿದ್ದ ಬಾಲಿವುಡ್ ನಟ ಶಾರುಕ್ ಖಾನ್ ಮಗ ಆರ್ಯನ್ ಖಾನ್ (23) ಶನಿವಾರ ಬೆಳಗ್ಗೆ 11 ಗಂಟೆಗೆ ಆರ್ಥರ್ ಜೈಲಿನಿಂದ ಬಿಡುಗಡೆಯಾಗಿದ್ದಾನೆ.

ಜೈಲಿನಿಂದ ಹೊರಬರುತ್ತಿದ್ದಂತೆ ರೇಂಜ್ ರೋವರ್ ಕಾರಿನಲ್ಲಿ ಆರ್ಯನ್‌ನನ್ನು ‘ಮನ್ನತ್’ಗೆ (ಶಾರುಕ್ ಖಾನ್ ನಿವಾಸ) ಕರೆದೊಯ್ಯಲಾಯಿತು. ಶಾರುಕ್ ಖಾನ್ ಅಭಿಮಾನಿಗಳು ಅವರ ಮನೆ ಮುಂದೆ ಬೆಳಗ್ಗೆಯಿಂದಲೇ ಜಮಾಯಿಸಿ, ಆರ್ಯನ್ ಖಾನ್ ಸ್ವಾಗತಕ್ಕೆ ಪೋಸ್ಟರ್ ಹಿಡಿದು ನಿಂತಿದ್ದರು.

ಬಾಂಬೆ ಹೈಕೋರ್ಟ್ ಆರ್ಯನ್ ಖಾನ್, ಅರ್ಬಾಜ್ ಖಾನ್ ಮತ್ತು ಮುನ್ಮುನ್ ಧಮೇಚಾರಿಗೆ ಗುರುವಾರವೇ ಜಾಮೀನು ನೀಡಿತ್ತು. ಆದರೆ, ಆದೇಶದ ಪ್ರಮಾಣೀಕೃತ ಪ್ರತಿ ಮತ್ತು ಇನ್ನಿತರ ದಾಖಲೆಗಳನ್ನು ಶುಕ್ರವಾರ ಸಂಜೆ 5.30ರೊಳಗೆ ಹೊಂದಿಸಿಕೊಳ್ಳಲು ಆರ್ಯನ್ ಖಾನ್ ವಕೀಲರಿಗೆ ಸಾಧ್ಯವಾಗದ ಕಾರಣ ಆತನ ಬಿಡುಗಡೆ ಒಂದು ದಿನ ತಡವಾಯಿತು. ಆರ್ಯನ್ ಪರವಾಗಿ ಸುಪ್ರೀಂಕೋರ್ಟ್ನ ಹೆಸರಾಂತ ವಕೀಲ ಮುಕುಲ್ ರೊಹಟಗಿ ವಾದಿಸಿದ್ದರು.

ಗುರುವಾರ ಆರೋಪಿಗಳಿಗೆ ಜಾಮೀನು ಮಂಜೂರು ಮಾಡುವ ವೇಳೆ 14 ಷರತ್ತನ್ನು ಹೈಕೋರ್ಟ್ ಹಾಕಿತ್ತು. ಇದರಲ್ಲಿ ಪ್ರಮುಖವಾಗಿ ತಲಾ 1 ಲಕ್ಷ ರೂಪಾಯಿ ಮೊತ್ತದ ವೈಯಕ್ತಿಕ ಬಾಂಡ್ ನೀಡಬೇಕು. ಜೊತೆಗೆ ಇಷ್ಟೇ ಮೊತ್ತಕ್ಕೆ ಇನ್ನೊಬ್ಬರ ಖಾತರಿಯನ್ನು ನೀಡಬೇಕು ಎಂದು ಹೈಕೋರ್ಟ್ ಹೇಳಿತ್ತು. ನಟಿ ಜೂಹಿ ಚಾವ್ಲಾ ಶುಕ್ರವಾರವೇ 1 ಲಕ್ಷ ರೂಪಾಯಿಯ ಖಾತ್ರಿಯನ್ನು ನೀಡಿದ್ದರು. ಜೂಹಿ ಚಾವ್ಲಾ ಮತ್ತು ಶಾರುಖ್ ಖಾನ್ ಅನೇಕ ಸಿನಿಮಾದಲ್ಲಿ ಜೊತೆಯಾಗಿ ನಟಿಸಿದ್ದಾರೆ ಮತ್ತು ಇವರಿಬ್ಬರು ಕೋಲ್ಕತ್ತ ನೈಟ್ ರೈಡರ್ ಐಪಿಎಲ್ ತಂಡದ ಸಹಮಾಲೀಕರೂ ಆಗಿದ್ದಾರೆ.

ಆರೋಪಿಗಳು ತಮ್ಮ ಪಾಸ್ಪೋರ್ಟ್ ಅನ್ನು ವಿಶೇಷ ಕೋರ್ಟ್ ವಶಕ್ಕೆ ನೀಡಬೇಕು. ಕೋರ್ಟ್ನ ಅನುಮತಿ ಇಲ್ಲದೆ ವಿದೇಶಕ್ಕೆ ತೆರಳುವಂತಿಲ್ಲ. ಮುಂಬೈನಿಂದ ಹೊರಹೋಗಬೇಕಿದ್ದರೆ ಪ್ರಕರಣದ ತನಿಖಾಧಿಕಾರಿಗೆ ಮಾಹಿತಿ ನೀಡಬೇಕು. ಪರಸ್ಥಳದಲ್ಲಿನ ತಮ್ಮ ಭೇಟಿಯ ಬಗ್ಗೆ ವಿವರ ಸಲ್ಲಿಸಬೇಕು. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಕ್ಕೆ ಹೇಳಿಕೆ ನೀಡುವಂತಿಲ್ಲ ಅಥವಾ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್/ಕಾಮೆಂಟ್ ಮಾಡುಂವತಿಲ್ಲ ಎಂದು ಕೋರ್ಟ್ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ
ಮುಂಬೈನಿಂದ ಗೋವಾಕ್ಕೆ ಹೋಗುತ್ತಿದ್ದ ವಿಹಾರ ನೌಕೆಯಲ್ಲಿ ಅ.2ರಂದು ರೇವ್ ಪಾರ್ಟಿ ನಡೆಸಿ ಮಾದಕವಸ್ತು ಸೇವಿಸಿದ ಪ್ರಕರಣದ ಸಂಬಂಧ ಆರ್ಯನ್ ಖಾನ್ ಮತ್ತು ಇತರ ಏಳು ಮಂದಿಯನ್ನು ಮಾದಕವಸ್ತು ನಿಯಂತ್ರಣ ದಳ (ಎನ್ಸಿಬಿ) ಬಂಧಿಸಿತ್ತು. ಇವರ ವಿಚಾರಣೆಯ ನಂತರ ಇನ್ನೂ 12 ಮಂದಿಯನ್ನು ದಸ್ತಗಿರಿ ಮಾಡಿತ್ತು. ಪ್ರಕರಣದ ತನಿಖಾಧಿಕಾರಿಯಾದ ಎನ್ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ವಿರುದ್ಧ ಮಾಡಲಾಗಿರುವ 8 ಕೋಟಿ ರೂಪಾಯಿ (ಒಟ್ಟು 25 ಕೋಟಿ ರೂಪಾಯಿ) ಲಂಚದ ಆರೋಪದ ಬಗ್ಗೆ ಎನ್ಸಿಬಿ ವಿಚಕ್ಷಣ ದಳದಿಂದ ತನಿಖೆಗೆ ಆದೇಶಿಸಿದೆ.

Aryan Khan Released From Arthur Road Jail in Mumbai

ಇದನ್ನೂ ಓದಿ: ಆರ್ಯನ್ ಖಾನ್‌ಗೆ ಜಾಮೀನು ಸಿಕ್ಕ ತಕ್ಷಣ ಶಾರೂಖ್ ಅತ್ತುಬಿಟ್ಟಿದ್ದರು
ಇದನ್ನೂ ಓದಿ: ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್ ಬಂಧನದ ನಂತರ ಪ್ರಥಮ ಬಾರಿಗೆ ಬಹಿರಂಗವಾಗಿ ಕಾಣಿಸಿಕೊಂಡ ಶಾರುಖ್

Tags: Aryan KhanTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In