• Home
  • About Us
  • Contact Us
  • Terms of Use
  • Privacy Policy
Friday, August 8, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆರೋಗ್ಯ

Heart attack: ಯುವ ಜನರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ತಡೆಯುವುದು ಹೇಗೆ ?

Shri News Desk by Shri News Desk
Oct 30, 2021, 09:36 pm IST
in ಆರೋಗ್ಯ
Share on FacebookShare on TwitterTelegram

ಯುವಜನರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ತೀವ್ರ ಆತಂಕಕಾರಿ ವಿಷಯ. ಭಾರತದಲ್ಲಿ ಹೃದಯಾಘಾತದ ಪ್ರಕರಣಗಳು ತೀವ್ರ ಗತಿಯಲ್ಲಿ ಹೆಚ್ಚಾಗುತ್ತಿದೆ.  ಇಂದಿನ ಮಕ್ಕಳಿಗೆ ಶಾಲಾ ದಿನಗಳಿಂದಲೇ ಹೃದಯಘಾತದ ದುಷ್ಪರಿಣಾಮಗಳಿಗೆ ಕಾರಣವಾಗುವ ವಿವಿಧ ಗಂಡಾಂತರಕಾರಿ ಅಂಶಗಳ ಬಗ್ಗೆ ತಿಳಿಸಿ ಅವರನ್ನು ಜಾಗೃತಗೊಳಿಸುವ ಮುಖಾಂತರ ಆರೋಗ್ಯ ಸದೃಢ ಭವಿಷ್ಯದ ಭಾರತ ನಿರ್ಮಾಣ ಮಾಡುವ ಈ ಸಂದರ್ಭದಲ್ಲಿ ಅಗತ್ಯವಿದೆ.

ಭಾರತದಲ್ಲಿ ಹೃದಯಾಘಾತದ ಪ್ರಕರಣಗಳು ತೀವ್ರ ಗತಿಯಲ್ಲಿ ಹೆಚ್ಚಾಗುತ್ತಿದೆ.ಇದಕ್ಕೆ ವಿರೋಧಾಭಾಸವಾಗಿ ಅಭಿವೃದ್ದಿ ಹೊಂದಿದ ರಾಷ್ಟ್ರಗಳಲ್ಲಿ ಹೃದಯಘಾತ ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗುತ್ತಿದೆ. ಆ ದೇಶಗಳಲ್ಲಿನ ಜನ ಸಾಮಾನ್ಯರಲ್ಲಿ ಹೆಚ್ಚಿದ ಜಾಗೃತಿ ಹಾಗೂ ಆರಂಭದ ವರ್ಷಗಳಲ್ಲೇ ಕೈಗೊಂಡ ಮುನ್ನೆಚ್ಚರಿಕೆಗಳ ಫಲವಾಗಿ ಹಾರ್ಟ್ ಆಟ್ಯಾಕ್ ಹತೋಟಿಗೆ ಬಂದಿದೆ. ಮುಂಜಾಗ್ರತೆ ಕ್ರಮಗಳನ್ನು ಪರಿಣಾಮಕಾರಿಯಾಗಿ ಅಳವಡಿಸಿಕೊಳ್ಳುವುದರಿಂದ ಹೃದಯಾಘಾತವನ್ನು ದೊಡ್ಡ ಮಟ್ಟದಲ್ಲಿ ತಡೆಗಟ್ಟಬಹುದು.

ಭಾರತದಲ್ಲೂ ತುರ್ತಾಗಿ ಈ ಜಾಗೃತಿ ಮತ್ತು ಅರಿವಿನ ಅಗತ್ಯವಿದೆ. ಏಕೆಂದರೆ ಉತ್ಪಾದಕತೆಯ ಜೀವನದ (ಹಣ ಸಂಪಾದನೆಯ) ಗರಿಷ್ಠ ಮಟ್ಟದಲ್ಲಿದ್ದಾಗ ಬಹುತೇಕ ಮಂದಿ ಹೃದಯಘಾತಕ್ಕೆ ತುತ್ತಾಗುತ್ತಿರುವುದರಿಂದ  ಜಾಗೃತಿ ಮೂಡಿಸುವುದು ಅಗತ್ಯವಾಗಿದೆ. ಬದಲಾದ ಜೀವನಶೈಲಿ, ದೈಹಿಕ ಶ್ರಮವಿಲ್ಲದ ದುಡಿಮೆ ಭಾರತೀಯರಲ್ಲಿ ಹೃದಯಾಘಾತದ ಸಾಧ್ಯತಾ ಪ್ರಮಾಣ ಹೆಚ್ಚಿಸಿದೆ. ಆದರೂ ಶೇ. 76ರಷ್ಟುಜನರು ಸಮಸ್ಯೆ ಅಂತಿಮ ಹಂತಕ್ಕೆ ಹೋಗುವ ತನಕ ವೈದ್ಯರ ತಪಾಸಣೆಗೆ ಒಳಗಾಗುತ್ತಿಲ್ಲ.

20ರಿಂದ 65 ವಯೋಮಾನದ ಶೇ.60ರಷ್ಟು ಭಾರತೀಯರಿಗೆಈ ಕುರಿತು ಸೂಕ್ತ ತಿಳುವಳಿಕೆಯೇ ಇಲ್ಲ. 20ರಿಂದ 30ರ ಹರೆಯದ ಯುವ ಜನತೆ, ತಮಗೆ ಹೃದಯಸಂಬಂಧಿ ಸಮಸ್ಯೆ ಬರುವುದಿಲ್ಲ ಎಂಬ ದೃಢನಂಬಿಕೆಯಲ್ಲಿ ತಪಾಸಣೆಗೆ ಒಳಗಾಗುವುದಿಲ್ಲ.ಇತ್ತೀಚಿನ ಸಾಮಾಜಿಕ ಜಾಲತಾಣ ಯುಗದಲ್ಲಿ ಆರೋಗ್ಯಕ್ಕೆ ಅಪಾಯಕಾರಿಯಾಗುವ ಜೀವನ ಶೈಲಿಯ ನಡುವಳಿಕೆಗಳಿಗಳನ್ನು ಅಳುವಡಿಸಿ ಕೊಳ್ಳುತ್ತಿದ್ದಾರೆ . ದಿನಗಳಲ್ಲಿ ಆದರೆ, ಶೇ. 20ರಷ್ಟು ಜನರಿಗೆ ಹೃದ್ರೋಗ ವಂಶವಾಹಿಯಾಗಿದೆ ಎಂದು  ಆರೋಗ್ಯ ಸಮೀಕ್ಷೆ ತಿಳಿಸಿದ್ದು, ಆಧುನಿಕ ಜೀವನಶೈಲಿಯು ಯುವಜನತೆಯಲ್ಲಿ ಹೃದಯನಾಳ ತೊಂದರೆ, ಹೃದಯಾಘಾತ, ಪಾಶ್ರ್ವವಾಯು ಸಂಭವವನ್ನು ಮೂರುಪಟ್ಟು ಹೆಚ್ಚಿಸಿದೆ. ಭಾರತದಲ್ಲಿ ಹೃದಯಾಘಾತ ಸಂಭವದ ವಯೋಮಿತಿಯು 40ರಿಂದ 30 ವರ್ಷಕ್ಕೆ ಇಳಿದಿದೆ. ಇದೊಂದು ಆತಂಕದ ವಿಷಯ.

ಕೂತಲ್ಲೇ ಕೆಲಸ (ಮಾಹಿತಿ ತಂತ್ರಜ್ಞಾನ, ಕಚೇರಿ ಕೆಲಸ); ವಿಶ್ರಾಂತಿರಹಿತ ದುಡಿಮೆ, ದೈಹಿಕ ಚಟುವಟಿಕೆ ಇಲ್ಲದಿರುವುದು, ಧೂಮಪಾನ, ಮದ್ಯಪಾನ ಹವ್ಯಾಸ-ಹೃದಯಾಘಾತ ಹೆಚ್ಚಲು ಪ್ರಮುಖ ಕಾರಣವಾಗಿದೆ. ವಿಶ್ವ ಆರೋಗ್ಯ ಸಂಸ್ಥೆ (WHO) ಪ್ರಕಾರ, ಪ್ರಪಂಚದ ನಂಬರ್ ಒನ್ ಕಿಲ್ಲರ್ ಹೃದಯಾಘಾತ.ಒತ್ತಡದ ಜೀವನ, ದೇಹದಲ್ಲಿ ಹೆಚ್ಚಿನ ಕೊಬ್ಬಿನಂಶ, ಧೂಮಪಾನ, ಮದ್ಯಪಾನ, ದೈಹಿಕ ಶ್ರಮ ರಹಿತ ಜೀವನ ಹೃದಯಾಘಾತ  ಸಂಭವ ಹೆಚ್ಚಲು ಪ್ರಮುಖ ಕಾರಣ. ನಿಯಮಿತವಾಗಿ ದೇಹ ತೂಕದ ತಪಾಸಣೆ, ಕೊಬ್ಬು ರಹಿತ ಪದಾರ್ಥಗಳ ಸೇವನೆ ಹಾಗೂ ಪ್ರತಿದಿನಿತ್ಯ 45 ನಿಮಿಷಗಳ ಕಾಲ ವೇಗದ ನಡಿಗೆ ಮಾಡುವ ಮೂಲಕ ಹೃದಯ ಸಂಬಂಧಿ ರೋಗಗಳನ್ನು ನಿಯಂತ್ರಿಸಬಹುದು.

ಜೀವನಶೈಲಿ ಬದಲಾವಣೆ:

ಒತ್ತಡಕ್ಕೆ ಸಂಬಂಧಿಸಿದ ಹೃದ್ರೋಗ ತಡೆಗಟ್ಟಲು ಜೀವನಶೈಲಿ ಬದಲಾವಣೆಯೂ ಅಗತ್ಯ.
1. ಧೂಮಪಾನ ವರ್ಜಿಸಿ : ಧೂಮಪಾನ  ದುಶ್ಚಟದಿಂದ ದೂರವಿರಿ. ಧೂಮಪಾನ ವರ್ಜಿಸಲು ನಿರ್ಧರಿಸಿದ ತಕ್ಷಣ ಸಿಗರೇಟ್‍ಗಳು, ಆ್ಯಷ್‍ಟ್ರೇ ಮತ್ತು ಲೈಟರ್‍ನನ್ನು ಹೊರಗೆ ಎಸೆಯಿರಿ.ನಿಮ್ಮ ವೈದ್ಯರೊಂದಿಗೆ ಈ ಕುರಿತು ಮುಕ್ತ ಚರ್ಚೆ ನಡೆಸಿರಿ. ಧೂಮಪಾನ ವರ್ಜಿಸಿದ ನಂತರ ನಿಮ್ಮ ದೇಹದಲ್ಲಿ ಕೆಲವು ಪ್ರತಿಕ್ರಿಯೆಗಳು ಕಂಡುಬಂದರೆ  ಔಷಧಿ ನೀಡಬೇಕಾಗುತ್ತದೆ. ನಿಮಗೆ ನಿಕೋಟಿನ್ ಪರ್ಯಾಯದ ಅಗತ್ಯವಿದಯೇ ಎಂಬುದನ್ನು ಪರೀಕ್ಷಿಸಿಕೊಳ್ಳಿ. ಇದು ಗಮ್, ಇನ್‍ಹೇಲರ್ ಮೊದಲಾದ ರೂಪದಲ್ಲಿ ಬರುತ್ತದೆ. ಯಾವುದೇ ರೀತಿಯ ತಂಬಾಕು ಸೇವನೆ ಗುಟ್ಕಾ , ಪಾನ್ ಬೀಡಾ , ನಸ್ಯ (snuff) ಚಟಗಳನ್ನು ಬಿಡಬೇಕು .

2. ಆರೋಗ್ಯಕರ ಆಹಾರ : ಆರೋಗ್ಯ ರಕ್ಷಣೆ ಹಾಗೂ ದೈಹಿಕ-ಮಾನಸಿಕ ಆರೋಗ್ಯ ಹೆಚ್ಚಳದಲ್ಲಿ ಉತ್ತಮ ಆಹಾರ ಮಹತ್ವದ ಪಾತ್ರ ವಹಿಸುತ್ತದೆ. ಹಸಿರು ತಾಜಾ ತರಕಾರಿ , ಹಣ್ಣು ಹಂಪಲ , ಡ್ರೈ ಫ್ರುಟ್ಸ್ ,ಪೂರ್ತಿ ಕಾಳು ಆರೋಗ್ಯಕರವಾದ ಸಂತುಲಿತ ಮತ್ತು ಪ್ರೊಟೀನ್ ಯುಕ್ತ ಪೌಷ್ಟಿಕ ಆಹಾರ ದೇಹವನ್ನು ಸಮತೋಲನದಲ್ಲಿ ಇಡುತ್ತದೆ. ಆದರೆ ಸಕಾಲದಲ್ಲಿ ಸೇವನೆ ಮತ್ತು ಸೂಕ್ತ ಪ್ರಮಾಣದಲ್ಲಿ ಆಹಾರ ಸೇವನೆ ಮುಖ್ಯ. ಆದಷ್ಟು ಬಿಳಿ ಪೂರ್ಣ ಪಾಲಿಶ್ ಮಾಡಿದ ಅಕ್ಕಿ ಅನ್ನದ ಬದಲಾಗಿ ಕುಶಲಕ್ಕಿ , ಬಾಯಿಲ್ಡ್ ಅಕ್ಕ್ಕಿ , ಅನ್ ಪಾಲಿಶ್/ಕುಟ್ಟಿದ ಅಕ್ಕಿ ಬಳಸಬೇಕು .

3. ಉತ್ತಮ ನಿದ್ರೆ : ಮನುಷ್ಯನ ಆರೋಗ್ಯ ಸ್ಥಿತಿಗೆ ಸೂಕ್ತ ನಿದ್ರೆಯೂ ಅತ್ಯಗತ್ಯ. ಸಾಕಷ್ಟು ನಿದ್ರೆಯ ಮಹತ್ವದ ಬಗ್ಗೆ ಜನರಲ್ಲಿ ಅನೇಕ ತಪ್ಪು ತಿಳುವಳಿಕೆ ಇದೆ. ಸೂಕ್ತ ಸಮಯದಲ್ಲಿ ನಿದ್ರೆ ಮಾಡುವುದು ಒಳ್ಳೆಯದು. ಬೇಗನೆ ಮಲಗಿ ಬೇಗನೆ ಏಳುವುದು ಉತ್ತಮ ಅಭ್ಯಾಸ. ಆದಾಗ್ಯೂ ಸಾಕಷ್ಟು ನಿದ್ರೆ ಇಲ್ಲದಿದ್ದರೆ ಕೆಲವೊಂದು ತೊಂದರೆಗಳಿಗೆ ಕಾರಣವಾಗುತ್ತದೆ. ಅನಿದ್ರತೆ, ತಲೆನೋವು, ನಿರುತ್ಸಾಹ, ಮಂಕು ಇತ್ಯಾದಿ. ಕೆಲವೊಮ್ಮೆ ಇದು ಬೊಜ್ಜು, ಅಜೀರ್ಣ, ಜ್ಞಾಪಕ ಶಕ್ತಿ ನಷ್ಟದಂಥ ಗಂಭೀರ ಸಮಸ್ಯೆಗಳಿಗೂ ಎಡೆ ಮಾಡಿಕೊಡಬಹುದು.
4 . ನಿರಂತರ ನಿಯಮಿತ ವ್ಯಾಯಾಮ
ಕನಿಷ್ಠ ದಿನಕ್ಕೆ 45 ನಿಮಿಷ ಏರೋಬಿಕ್ ಎಕ್ಸರ್ಸೈಜ್ , ನಡಿಗೆ , ವಾರಕ್ಕೆ 3-4 ಸಾವಿರ ಕ್ಯಾಲೋರಿಸ್ ದೈಹಿಕ ಶ್ರಮದ ಮುಖಾಂತರ ವ್ಯಯಸ ಬೇಕು ,

ಹೃದಯಾಘಾತದ ಸಾಮಾನ್ಯ ಲಕ್ಷಣಗಳು :
1. ಎದೆನೋವು, ಹೃದಯ ಭಾರವಾಗುವಿಕೆ
2. ಉಸಿರಾಟದಲ್ಲಿ ತೊಂದರೆ, ಕೆಮ್ಮು , ವ್ಹಿಜಿಂಗ್
3. ಮಾನಸಿಕ ಕ್ಷೋಭೆ ಅಥವಾ ಒತ್ತಡದಂಥ ಲಕ್ಷಣಗಳು
4. ಹೊಟ್ಟೆ ,ಹೆಗಲು, ಕುತ್ತಿಗೆ ,ಭುಜ ,ಕೈ ಅಥವಾ ದವಡೆ ನೋವು
5. ಅಸ್ವಸ್ಥತೆ, ಸುಸ್ತು
6. ಕಡಿಮೆ ನಾಡಿಮಿಡಿತ
7. ಅತಿಯಾಗಿ ಬೆವರುವಿಕೆ
8. ವಾಂತಿ, ಅಸಿಡಿಟಿ
9. ತಲೆಸುತ್ತುವಿಕೆ/ಶಿರೋಭ್ರಮಣೆ/ ಜ್ಞಾನ ತಪ್ಪುವುದು
ಹೃದಯಾಘಾತದ ಚಿಹ್ನೆ ಮತ್ತು ಲಕ್ಷಣಗಳಲ್ಲಿ ವ್ಯತ್ಯಾಸಗಳಿರುತ್ತವೆ. ಒಮ್ಮೊಮ್ಮೆ ಈ ಲಕ್ಷಣ ಬಿರುಸಾಗಿದ್ದರೆ, ಕೆಲವೊಮ್ಮೆ ಲಘುವಾಗಿರುತ್ತದೆ. ಕೆಲವು ಸಂದರ್ಭದಲ್ಲಿ ಯಾವುದೇ ಲಕ್ಷಣವಿಲ್ಲದೇ ಅಥವಾ ಲಘು ಲಕ್ಷಣಗಳೊಂದಿಗೆ ಸಂಭವಿಸುವ ಹಾರ್ಟ್ ಅಟ್ಯಾಕ್ ತೀವ್ರ ಎದೆನೋವಿನಂಥ ಮರಣಾಂತಿಕ ಪರಿಣಾಮಗಳಷ್ಟೇ ಅಪಾಯ ತಂದೊಡ್ಡುತ್ತವೆ ಎಂಬುದನ್ನು ಗಮನದಲ್ಲಿಟ್ಟುಕೊಳ್ಳಬೇಕು.

ಹೃದಯಾಘಾತಕ್ಕೆ ಕಾರಣವಾಗುವ ಕೆಲವು ರಿಸ್ಕ್ ಫ್ಯಾಕ್ಟರ್‍ಗಳು:

1 .ತಂಬಾಕು ಸೇವನೆ/ಧೂಮಪಾನ
2. ಅಧಿಕ ಕೊಲೆಸ್ಟರಾಲ್
3. ಅಧಿಕ ಎಲ್‍ಡಿಎಲ್ ಕೊಲೆಸ್ಟರಾಲ್
4. ಕಡಿಮೆ ಎಚ್‍ಡಿಎಲ್ ಕೊಲೆಸ್ಟರಾಲ್
5. ಅಧಿಕ ಬ್ಲಡ್ ಷುಗರ್/ಡಯಾಬಿಟಿಸ್
6. ಅಧಿಕ ರಕ್ತದೊತ್ತಡ
7. ಅಧಿಕ ತೂಕ
8 ದೈಹಿಕ ಶ್ರಮವಿಲ್ಲದ ಜೀವನ
9 ಐಷಾರಾಮಿ ಅಭ್ಯಾಸಗಳು/ಸೇಡೆಂಟರಿ ಲೈಫ್ ಸ್ಟೈಲ್
10 ಉದ್ವೇಗ ಮಾನಸಿಕ, ಉದ್ಯೋಗದ , ನಗರ ಜೀವನದ ಒತ್ತಡಗಳು ಮತ್ತು ಆಯಾಸ
11 ಸಂಸ್ಕರಿಸಿದ ಆಹಾರ/ಜಂಕ್ ಫುಡ್ /ಅತಿಯಾದ ಜಿಡ್ಡು ಪದಾರ್ಥ ಸೇವನೆ
12 ಪರಿಸರ / ಗಾಳಿ ಮಾಲಿನ್ಯ
13 ಅನುವಂಶಿಯ ಅಂಶಗಳು
ಡಾ. ಮಹಾಂತೇಶ ಆರ್. ಚರಂತಿಮಠ
MD.DM.FACC.FESC.FSCAI (USA)
ಹೃದ್ರೋಗ ತಜ್ಞರು

Tags: Heart attack
ShareSendTweetShare
Join us on:

Related Posts

5 lifestyle to lose belly fat

ಹೊಟ್ಟೆಯ ಬೊಜ್ಜು ಕರಗಿಸಲು ಬದಲಿಸಿ ನಿಮ್ಮ ಜೀವನ ಶೈಲಿಯನ್ನು

Bare Fruit

Bare Fruit Benefits: ಬಡವರ ಸೇಬು ಬೋರೆ ಹಣ್ಣು: ರುಚಿಗೂ ಸೈ ಆರೋಗ್ಯಕ್ಕೂ ಜೈ

ದೇಶದ 14 ಸಿಟಿಗಳಲ್ಲಿ ಕೋವಿಡ್‌ ಸೋಂಕು ಏರಿಕೆ: 8 ರಾಜ್ಯಗಳಿಗೆ ಕೇಂದ್ರ ಪತ್ರ

ದೇಶದ 14 ಸಿಟಿಗಳಲ್ಲಿ ಕೋವಿಡ್‌ ಸೋಂಕು ಏರಿಕೆ: 8 ರಾಜ್ಯಗಳಿಗೆ ಕೇಂದ್ರ ಪತ್ರ

Omicron

ಓಮಿಕ್ರಾನ್ ಬಂದರೆ ಆರೋಗ್ಯದಲ್ಲಿ ಆಗುವ ಬದಲಾವಣೆಗಳೇನು?

ನೀಟ್‌ ಪಿಜಿ ಕೌನ್ಸಲಿಂಗ್‌ ವಿಳಂಬ ವಿರೋಧಿಸಿ ದೆಹಲಿ ವೈದ್ಯರ ತೀವ್ರ ಪ್ರತಿಭಟನೆ

ನೀಟ್‌ ಪಿಜಿ ಕೌನ್ಸಲಿಂಗ್‌ ವಿಳಂಬ ವಿರೋಧಿಸಿ ದೆಹಲಿ ವೈದ್ಯರ ತೀವ್ರ ಪ್ರತಿಭಟನೆ

ಕೋವಿಡ್‌ ಸೋಂಕು ಹೆಚ್ಚಳದ ಕಾರಣ ವಿಶ್ವದಾದ್ಯಂತ 11,500 ವಿಮಾನಗಳ ಸಂಚಾರ ರದ್ದು

ಕೋವಿಡ್‌ ಸೋಂಕು ಹೆಚ್ಚಳದ ಕಾರಣ ವಿಶ್ವದಾದ್ಯಂತ 11,500 ವಿಮಾನಗಳ ಸಂಚಾರ ರದ್ದು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಇಂಥವರನ್ನು ಎಂದಿಗೂ ಮನೆಗೆ ಕರಿಯಬೇಡಿ ಎನ್ನುತ್ತಾರೆ ಚಾಣಕ್ಯರು..

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

ನಿಮ್ಮ ದೃಷ್ಟಿ ತೀಕ್ಷ್ಣವಾಗಿರಬೇಕು, ಕಣ್ಣು ಆರೋಗ್ಯವಾಗಿರಬೇಕು ಅಂದ್ರೆ ಈ ಟಿಪ್ಸ್ ಅನುಸರಿಸಿ

Beauty Tips: ಈ 6 ಸೌಂದರ್ಯ ಸಲಹೆ ಅನುಸರಿಸಿ, ನಿಮ್ಮ ಬ್ಯೂಟಿ ಹೆಚ್ಚಿಸಿ

Spiritual Story: ವಿಷ್ಣು ಮತ್ತು ಲಕ್ಷ್ಮೀ ಮಾರುವೇಷದಲ್ಲಿ ಭೂಲೋಕಕ್ಕೆ ಬಂದಾಗ ಏನಾಗಿತ್ತು..? ಸುಂದರ ಕಥೆ

Spiritual: 6 ಪುರಾಣ ಕಥೆಗಳು: ಗಂಗಾ ಸ್ನಾನ, ಭೃಗು ಋಷಿ ಶಾಪ, ಹನುಮನ ಗಧೆ ಹಲವು ವಿಷಯಗಳ ಬಗ್ಗೆ ಕಥೆ

ನೆನೆಸಿಟ್ಟ ಹೆಸರು ಕಾಳನ್ನು ಒಂದು ತಿಂಗಳು ಸೇವಿಸಿ ನೋಡಿ, ವಾವ್ ಅಂತಾ ನೀವೇ ಹೇಳ್ತೀರಾ..

Recipe: 10 ಬಗೆಯ ರುಚಿಯಾದ ಧಿಡೀರ್ ತಿಂಡಿಗಳ ರೆಸಿಪಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In