• Home
  • About Us
  • Contact Us
  • Terms of Use
  • Privacy Policy
Tuesday, August 11, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆಧ್ಯಾತ್ಮ

‘ ದೀಪಾವಳಿ ’ ಎಲ್ಲರ ಮನೆ-ಮನಗಳನ್ನು ಬೆಳಗುವಂತಾಗಲಿ

Shri News Desk by Shri News Desk
Nov 3, 2021, 10:42 pm IST
in ಆಧ್ಯಾತ್ಮ, ಚಿಕ್ಕಮಗಳೂರು, ಸಾಹಿತ್ಯ
Share on FacebookShare on TwitterTelegram

ಭಾರತೀಯ ಹಿಂದೂ ಸಂಸ್ಕೃತಿಯಲ್ಲಿ ಪ್ರತಿಯೊಂದು ಹಬ್ಬಗಳು ತಮ್ಮದೇ ಆದ ವಿಶೇಷ ಮಹತ್ವ ಹೊಂದಿದೆ. ಯುಗಾದಿ, ಗೌರಿ ಗಣೇಶ ಚತುರ್ಥಿ, ಸಂಕ್ರಾಂತಿ ಹೀಗೆ ವರ್ಷ ಪೂರ್ತಿ ಹಬ್ಬಗಳ ಸರಮಾಲೆಯೇ ಇದ್ದು ಪ್ರತಿ ಹಬ್ಬವೂ ಒಂದೊಂದು ವಿಶೇಷತೆ ಒಳಗೊಂಡಿವೆ. ಅದರಲ್ಲೂ ನವೆಂಬರ್ ಕಾರ್ತಿಕ ಮಾಸದ ಕೃಷ್ಣ ಪಕ್ಷದ ದಿನದ ದೀಪಾವಳಿ ಸಂಭ್ರಮದೊಂದಿಗೆ ಅತ್ಯಂತ ವಿಶೇಷವೂ ಹೌದು.

ಸಾಮಾನ್ಯವಾಗಿ ‘ದೀಪಾವಳಿ’ಎಂದಾಕ್ಷಣ ನಮ್ಮ ಕಣ್ಣಮುಂದೆ ಬರುವುದು ದೀಪ, ಹಣತೆ, ಬೆಳಕು. ಪ್ರತಿನಿತ್ಯ ನಾವೆಲ್ಲರೂ ಮನೆ ಮನೆಗಳಲ್ಲಿ ದೀಪವನ್ನು ಬೆಳಗುತ್ತೇವೆ, ದೀಪಾವಳಿ ಹಬ್ಬದಲ್ಲೇ ಹಣತೆ, ಬೆಳಕಿಗೆ ಏಕೀಷ್ಟು ಪ್ರಾಮುಖ್ಯತೆ ಎಂದು ನೀವೆಲ್ಲಾ ಆಲೋಚಿಸಿರಬಹುದು ಹೌದು, ಭಾರತೀಯ ಸಂಸ್ಕೃತಿಯಲ್ಲಿ ದೀಪ, ಬೆಳಕಿಗೆ ವಿಶೇಷ ಪ್ರಾಧಾನ್ಯತೆ ಇದೆ. ನಮ್ಮೊಳಗಿನ ಅಂಧಕಾರವನ್ನು ತೊರೆದು ಅಂತ ರಂಗವನ್ನು ಬೆಳಗಿಸುವ ಸಂದೇಶವನ್ನು ಈ ದೀಪ ಸಾರುತ್ತವೆ. ಅದಕ್ಕಾಗಿ ಯಾವುದೇ ಕೆಲಸವನ್ನು ದೀಪ ಬೆಳಗುವ ಮೂಲಕವೇ ಆರಂಭಿಸುತ್ತೇವೆ. ವಿಘ್ನಗಳು ಜರುಗದಂತೆ ದೇವರನ್ನು ಸ್ತುತಿಸುತ್ತೇವೆ.

ನಾವು ಆಚರಿಸುವ ಪ್ರತಿಯೊಂದು ಹಬ್ಬವೂ ಪ್ರಕೃತಿಯೊಂದಿಗೆ ಅವಿನಾಭಾವ ಸಂಬಂಧ ಹೊಂದಿದೆ. ಪ್ರಕೃತಿಯಲ್ಲಿ ನಾವು ಹಲವು ದೈವಿ  ಸ್ವರೂಪವನ್ನು ಕಾಣುತ್ತೇವೆ. ಯಾವುದೇ ಪ್ರದೇಶದಲ್ಲಿ ಜೀವಿಸುತ್ತಿರಲಿ, ಆಯಾ ಪರಿಸರದಲ್ಲಿ ಪ್ರಕೃತಿಯಲ್ಲಿ ಆಗುವ ಬದಲಾವಣೆಯನ್ನು ಭಗವಂತನ ಕೃಪೆ, ಲಕ್ಷ್ಮಿಯ ಲೀಲಾವಿಲಾಸ ಎಂದು ಭಾವಿಸಿ ನಾವು ಋತುಗಳ ಹಬ್ಬವನ್ನು ಆಚರಿಸುತ್ತೇವೆ. ಅದರಂತೆ ದೀಪಾವಳಿ ಎನ್ನುವುದು ಭಾರತೀಯ ಸಂಸ್ಕೃತಿಯಲ್ಲಿ ವಿಶೇಷ ಹಬ್ಬಗಳಲ್ಲಿ ಒಂದು.

ದೀಪಾವಳಿಯ ಮೂಲ ಹುಡುಕುತ್ತಾ ಹೋದಂತೆ ನಮಗೆ ತಿಳಿಯುವುದು ಪ್ರಾಚೀನ ಭಾರತದಲ್ಲಿ ಅದೊಂದು ಸುಗ್ಗಿಯ ಹಬ್ಬವಾಗಿ ಪ್ರಾರಂಭವಾಯಿತು ಎಂದು. ಆದಾಗ್ಯೂ ಇತಿಹಾಸದ ದಂತಕಥೆಗಳ ಅನುಗುಣವಾಗಿ ಕೆಲವರು ಲಕ್ಷ್ಮಿ ಮತ್ತು ಭಗವಾನ್ ವಿಷ್ಣುವಿನ ಮದುವೆಯ ಆಚರಣೆಯ ನಂಬಿಕೆಯಿಂದ ಎಲ್ಲೆಲ್ಲೂ ದೀಪ ಬೆಳಗುವ ಮೂಲಕ ಈ ದಿನವನ್ನು ಆಚರಿಸುತ್ತಾರೆ. ಮತ್ತು ಕೆಲವರು ಕಾರ್ತಿಕ ಅಮವಾಸ್ಯೆಯ ದಿನದಂದು ಲಕ್ಷ್ಮಿ ದೇವಿಯ ಜನ್ಮ ದಿನದ ಆಚರಣೆ ಎಂದು ಸಹ ನಂಬಿದ್ದಾರೆ.

ಇನ್ನೂ ಬಂಗಾಳದಲ್ಲಿ, ದೀಪಾವಳಿಯು ಶಕ್ತಿಶಾಲಿ ದೇವತೆಯಾದ ಕಾಳಿ ದೇವಿಯ ಆರಾಧನೆಯ ದಿನವಾಗಿದೆ. ಕೆಲವರ ಮನೆಗಳಲ್ಲಿ ಮಂಗಳಕರ ಗಣೇಶನ ಪೂಜೆಯನ್ನು ಸಹ ಕೈಗೊಳ್ಳುತ್ತಾರೆ. ಈ ರೀತಿಯಲ್ಲಿ ವಿವಿದೆಡೆ ದೀಪಾವಳಿಯನ್ನು ಅತ್ಯಂತ ಶ್ರದ್ದಾ ಭಕ್ತಿಯಿಂದ ಸಾಂಪ್ರಾದಾಯಿಕವಾಗಿ ಆಚರಿಸುತ್ತಾರೆ. ವಿಶೇಷವಾಗಿ ಹಿಂದೂಗಳಿಗೆ ದೀಪಾವಳಿ ಶ್ರೀರಾಮನು ೧೪ ವರ್ಷದ ವನವಾಸದ ಬಳಿಕ ಅಯೋಧ್ಯೆಗೆ ಹಿಂತಿರುಗಿನ ದಿನ. ಎಂಬ ನಂಬಿಕೆಯೊಂದಿಗೆ ದೀಪ ಬೆಳಗುವ ಮೂಲಕ ರಾಮನನ್ನು ಸ್ವಾಗತಿಸಿದ ದಿನ ಎಂದು ಪುರಾಣಗಳು ತಿಳಿಸುತ್ತವೆ.

‘ಅಸತೋಮಾ ಸದ್ಗಮಯಾ, ತಮಸೋ ಮಾ ಜ್ಯೋತಿರ್ಗಮಯ’ ಎಂಬಂತೆ ದೀಪಾವಳಿ ಎಂಬುದು ಮನೆ-ಮನಗಳಲ್ಲಿ ಬೆಳಕನ್ನು ಚೆಲ್ಲುತ್ತಾ ಕತ್ತಲೆಯನ್ನು ಹೊಡೆದೋಡಿಸುವ ದಿನವಿದು, ಅಂದರೆ ಜೀವನದಲ್ಲಿನ ನೋವು, ದುಃಖ ಎಲ್ಲವನ್ನೂ ಮರೆತು ಸಂತೋಷದ ಬದುಕು ಮತ್ತು ಬೆಳಕು ಕಳೆಗಟ್ಟಲಿ ಎಂಬ ಆಶಯದೊಂದಿಗೆ ಹಬ್ಬವನ್ನು ವಿಶೇಷವಾಗಿ ಆಚರಿಸುತ್ತೇವೆ. ಜೀವನದಲ್ಲಿ ಎಲ್ಲಾ ಕೆಟ್ಟ ಸಂದರ್ಭಗಳು ಇಲ್ಲೇ ಕೊನೆಗೊಂಡು ಖುಷಿಯ ದಿನಗಳಷ್ಟೇ ಇನ್ನು ಮುಂದೆ ನಮ್ಮದಾಗಲಿ ಎಂದು ಭಕ್ತಿಯಿಂದ ದೇವರ ಮೊರೆ ಹೋಗುವ ದಿನವಿದು.

ಬೆಳಕಿನೆಡೆಗೆ ಬದುಕು ಎಂಬ ಸಾರವನ್ನು ಸಾರುತ್ತಾ ಹೊಸ ಆರಂಭವನ್ನು ಕಂಡುಕೊಳ್ಳುವ ದಿನವಿದು. ಕುಟುಂಬಸ್ಥರು, ಸ್ನೇಹಿತರು, ಮನೆಯವರು ಎಲ್ಲರೂ ಖುಷಿಯಿಂದ ಸೇರಿ ಹೊಸ ಉಡುಗೆ-ತೊಡುಗೆಗಳನ್ನು ತೊಟ್ಟು, ಸಿಹಿ ತಿಂಡಿಗಳನ್ನು ಮಾಡುವ ಮೂಲಕ ವರಲಕ್ಷ್ಮಿಯನ್ನು ಪೂಜಿಸಿ ಹಬ್ಬವನ್ನು ಆಚರಿಸಲಾಗುತ್ತದೆ. ನಮ್ಮೊಳಗಿನ ಅಂಧಕಾರವನ್ನು ತೊರೆದು ಅಂತ ರಂಗವನ್ನು ಬೆಳಗಿಸುವ ಸಂದೇಶವನ್ನು ಸಾರುವ ದೀಪಾವಳಿ ಹಬ್ಬ ನಮಗೆಲ್ಲರಿಗೂ ವಿಶೇಷವೇ ಸರಿ.

ಜೀವನದ, ಮನದ ಎಲ್ಲಾ ಋಣಾತ್ಮಕ ಅಂಶಗಳನ್ನು ಹೋಗಲಾಡಿಸಲು ದೀಪ ಬೆಳಗುತ್ತೇವೆ. ದೀಪಗಳ ತುದಿ ಸರ್ವತೋಮುಖವಾಗಿದೆ, ದೀಪ ಹಚ್ಚಿದರೆ ಸುತ್ತಲೂ ಬೆಳಗುತ್ತದೆ. ಆದರೆ ದೀಪದ ಗಮನ ಊರ್ದ್ವಮುಖವಾಗಿರುತ್ತದೆ. ಅಂದರೆ ದೀಪ ಬೆಳಗುವ ಮನುಷ್ಯನ ಮನಸ್ಸು ಕೂಡ ಸದಾ ಊರ್ದ್ವಗಾಮಿಯಾಗಿರಬೇಕು, ಮನುಷ್ಯ ಸದಾ ಇತಿಮಿತಿಗಳನ್ನು ಮೀರಿ ದೀಪದಂತೆ ಮೇಲಕ್ಕೆ ಬೆಳಗುತ್ತಾ ಹೋಗಬೇಕು. ದೀಪ ಹೇಗೆ ತನ್ನನ್ನು ತಾನು ಉರಿದುಕೊಂಡು ಸುತ್ತಲಿಗೆ ಬೆಳಕು ಕೊಡುತ್ತದೋ ಮನುಷ್ಯ ಕೂಡ ತಾನು ತ್ಯಾಗ ಮಾಡಿ ಸುತ್ತಲಿನವರ ಬಾಳಿಗೆ ಬೆಳಕಾಗಬೇಕು ಎಂಬ ಸಂಕೇತ ಕೂಡ ಇಲ್ಲಿ ಅಡಗಿದೆ.

ದೀಪಾವಳಿ ಪ್ರಾಚೀನ ಕಾಲದಿಂದಲೂ ಪ್ರಸಿದ್ಧ ಹಬ್ಬ. ಇಲ್ಲಿ ಲಕ್ಷ್ಮಿ ದೇವಿಯನ್ನು ನಮ್ಮ ಜೀವನ ವೃದ್ಧಿಯ, ಬೆಳಕಿನ ಸಂಕೇತವಾಗಿ ಕಾಣುತ್ತೇವೆ. ಮನುಷ್ಯನಲ್ಲಿರುವ ಅಂಧಕಾರ, ಅಜ್ಞಾನ, ಬುದ್ಧಿ, ಆಚಾರ, ವಿಚಾರಗಳಿಗೆ ಅಂಟಿ ಕೊಂಡಿರುವಂತಹ  ಕತ್ತಲೆಯನ್ನು ಹೋಗಲಾಡಿಸುವಂತಹದ್ದು ಎಂಬರ್ಥ ಕೂಡ ಇದೆ. ಒಟ್ಟಾರೆಯಾಗಿ ಕೊರೋನಾ ಸಾಂಕ್ರಾಮಿಕ ರೋಗದಿಂದ ತತ್ತರಿಸಿರುವ ದೇಶದ ಜನತೆಗೆ ದೀಪಾವಳಿ ಸುಖ ಶಾಂತಿ, ಸಮೃದ್ಧ ಆರೋಗ್ಯ ನೀಡಿ ಮನೆಮನೆಗಳ್ಳಿ ಹೊಸ ಬೆಳಕು ಮೂಡುವಂತೆ ಆಗಲಿ.

 

Tags: Diwalifestivalhome
ShareSendTweetShare
Join us on:

Related Posts

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In