ನವದೆಹಲಿ- ದೇಶದ ವಿವಿಧ ರಾಜ್ಯಗಳಲ್ಲಿ ನಡೆದ 30 ವಿಧಾನಸಭೆ ಹಾಗೂ ಮೂರು ಲೋಕಸಭಾ ಉಪಚುನಾವಣೆಗಳಲ್ಲಿ ಪಕ್ಷದ ಸೋಲು, ಗೆಲುವಿನ ಪರಾಮರ್ಶೆಯ ವರದಿ ನೀಡಬೇಕೆಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಆಯಾ ರಾಜ್ಯದ ಚುನಾವಣೆಯ ಉಸ್ತುವಾರಿ ಹೊತ್ತವರನ್ನು ಕೇಳಿದ್ದಾರೆ.
ಅಕ್ಟೋಬರ್ 30ರಂದು, ಒಟ್ಟು 14 ರಾಜ್ಯಗಳ ವಿಧಾನಸಭೆ ಚುನಾವಣೆ ನಡೆದು, ನವೆಂಬರ್ 2ರಂದು ಫಲಿತಾಂಶ ಪ್ರಕಟವಾಗಿತ್ತು. ಚುನಾವಣೆಯ ಉಸ್ತುವಾರಿವಹಿಸಿಕೊಂಡವರು ಹಾಗೂ ಆಯಾ ರಾಜ್ಯದ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಸೋಲು ಗೆಲುವಿನ ಆತ್ಮಾವಲೋಕನ ವರದಿ ನೀಡುವಂತೆ ಸೂಚಿಸಿದ್ದಾರೆ.
ವರದಿಯು ಪ್ರಮುಖ 8 ಅಂಶಗಳನ್ನು ಒಳಗೊಂಡಿರಬೇಕು ಎಂದು ಪ್ರಧಾನ ಕಾರ್ಯದರ್ಶಿಗಳು ಉಲ್ಲೇಖಿಸಿದ್ದಾರೆ. ಇದರ ಜೊತೆಗೆ 1) ಉಪಚುನಾವಣೆಗೆ ನಡೆಯಲು ಕಾರಣ 2) ಅಭ್ಯರ್ಥಿ ಆಯ್ಕೆಗೆ ಮಾನದಂಡಗಳೇನು 3) ಪಕ್ಷದ ಗೆಲುವು ಅಥವಾ ಸೋಲಿನಲ್ಲಿ ಪ್ರಚಾರ, ರೂಪಿಸಿದ ತಂತ್ರಗಳ ಪಾತ್ರವೇನು.
4) ಎದುರಾಳಿ ಪಕ್ಷದ ಪ್ರಭಾವ ಎಷ್ಟಿತ್ತು 5) ಉಪಚುನಾವಣೆಯ ಫಲಿತಾಂಶ ರಾಜ್ಯ ರಾಜಕೀಯದ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ ಎಂಬುದನ್ನು ವರದಿಯಲ್ಲಿ ವಿವರಿಸಬೇಕು ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷವು ಹಿಮಾಚಲಪ್ರದೇಶ ಉಪಚುನಾವಣೆಯಲ್ಲಿ ಮೂರು ವಿಧಾನಸಭೆ ಹಾಗೂ ಒಂದು ಲೋಕಸಭೆ ಸ್ಥಾನದಲ್ಲಿ ಗೆಲುವು ಸಾಧಿಸಿದೆ.
ಅದೇ ರೀತಿ, ಮಹಾರಾಷ್ಟ್ರ, ಮಧ್ಯಪ್ರದೇಶ ಹಾಗೂ ಕರ್ನಾಟಕದಲ್ಲಿ ತಲಾ ಒಂದೊಂದು ಗೆಲುವು ಕಂಡಿದೆ. ಕರ್ನಾಟಕದ ಮಟ್ಟಿಗೆ ಹೇಳಬೇಕಾದರೆ, ಮುಖ್ಯಮಂತ್ರಿಗಳ ಹಿಡಿತದಲ್ಲಿ ಇದೆ ಎಂದು ನಂಬಿದ್ದ ಹಾನಗಲ್ ವಿಧಾನಸಭೆ ಕ್ಷೇತ್ರವನ್ನು ಕಾಂಗ್ರೆಸ್ ತನ್ನ ತೆಕ್ಕೆಗೆ ಹಾಕಿಕೊಂಡಿದೆ.
ಅಸ್ಸಾಮ್, ತೆಲಂಗಾಣ, ಆಂಧ್ರಪ್ರದೇಶ, ಬಿಹಾರ್, ಮೇಘಾಲಯ, ಪಶ್ಚಿಮ ಬಂಗಾಳದಲ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಸೋತು ಸುಣ್ಣವಾಗಿದೆ.
Congress party asked review report Who take Election Responsibility
ಇದನ್ನೂ ಓದಿ: Congress: ಉಪಚುನಾವಣೆ ಫಲಿತಾಂಶ 2023 ಕ್ಕೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದರ ಮುನ್ಸೂಚನೆ
Discussion about this post