ಚಿಕ್ಕಮಗಳೂರು: ಇಲ್ಲಿನ ಉಪವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಡಾ. ಹೆಚ್.ಎಲ್. ನಾಗರಾಜ್ ಅವರ ವರ್ಗಾವಣೆಯನ್ನು ರದ್ದು ಮಾಡಲಾಗಿದೆ.
ಅವರನ್ನು ಅಪರ ಜಿಲ್ಲಾಧಿಕಾರಿಯಾಗಿ ಬಡ್ತಿ ನೀಡಿ ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆ ಮಾಡಲಾಗಿತ್ತು. ಆಡಳಿತಾತ್ಮಕ ಕಾರಣದಿಂದಾಗಿ ವರ್ಗಾವಣೆ ರದ್ದುಪಡಿಸಲಾಗಿದೆ ಎಂದು ತಿಳಿದುಬಂದಿದೆ.
ಹಿರಿಯ ಕಂದಾಯ ಉಪವಿಭಾಗಾಧಿಕಾರಿಯಾಗಿರುವ ನಾಗರಾಜ್ ಕೆರೆಗಳ ಸಂರಕ್ಷಣೆ, ಭೂ ವಿವಾದ ವ್ಯಾಜ್ಯಗಳ ಶೀಘ್ರ ಇತ್ಯರ್ಥ ಸೇರಿದಂತೆ ಅನೇಕ ಜನಪರ ಕಾರ್ಯಕ್ರಮಗಳ ಮೂಲಕ ಮನ್ನಣೆ ಗಳಿಸಿದ್ದರು. ನಾಗರಾಜ್ ಅವರಿಗೆ ಬಡ್ತಿ ಸಿಕ್ಕಿರುವ ಬಗ್ಗೆ ಸಂತಸ ವ್ಯಕ್ತವಾಗಿದ್ದರೂ ಅವರ ವರ್ಗಾವಣೆ ಸರಿಯಲ್ಲ ಎಂದು ಅನೇಕರು ಅಭಿಪ್ರಾಯಿಸಿದ್ದರು.
ಇದನ್ನೂ ಓದಿ:
ಮಂಗಳೂರು ಅಪರ ಜಿಲ್ಲಾಧಿಕಾರಿಯಾಗಿ ಎಸಿ ನಾಗರಾಜ್ಗೆ ಪದೋನ್ನತಿ
Discussion about this post