ಚಿಕ್ಕಮಗಳೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಗಾಯತ್ರಿ ಶಾಂತೇಗೌಡ ಅವರು ಶುಕ್ರವಾರ ಕಾರ್ಯಕರ್ತರು ಹಾಗೂ ಪಕ್ಷದ ಮುಖಂಡರೊಂದಿಗೆ ತೆರಳಿ ಜಿಲ್ಲಾಧಿಕಾರಿ ರಮೇಶ್ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದರು.
ನಾಮಪತ್ರ ಸಲ್ಲಿಕೆ ಬಳಿಕ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಮಾತನಾಡಿ ದಿವಂಗತ ಇಂದಿರಾಗಾಂಧಿಯವರ ೧೦೪ ಜನ್ಮದಿನದ ಸ್ಮರಣೆಯಲ್ಲಿ ಇಂದು ನಾಮಪತ್ರ ಸಲ್ಲಿಸಲಾಗಿದೆ. ರಾಜ್ಯ ಹಾಗೂ ಕೇಂದ್ರದ ನಾಯಕರು ಹಾಗೂ ಜಿಲ್ಲೆಯ ಮುಖಂಡರ ಒಮ್ಮತದ ತೀರ್ಮಾನದೊಂದಿಗೆ ಚುನಾವಣೆಯಲ್ಲಿ ಸ್ಪರ್ಧಗೆ ಅವಕಾಶ ನೀಡಲಾಗಿದೆ. ಆಡಳಿತ ಬಿಜೆಪಿ ಸರ್ಕಾರದ ಆಡಳಿತ ವ್ಯವಸ್ಥೆ ವಿರುದ್ದ ಜನತೆ ಅಸಮಾಧಾನಗೊಂಡಿದ್ದು ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ತೆಗೆಯುವ ಸೂಚನೆ ನೀಡಿದ್ದಾರೆ. ಜಿಲ್ಲೆಯನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಗ್ರಾ.ಪಂ ಸದಸ್ಯರು ಮತ ನೀಡುವ ಮೂಲಕ ಜಯಶೀಲರನ್ನಾಗಿ ಮಾಡುವಂತೆ ವಿನಂತಿಸಿಕೊಂಡರು.
ಶೃಂಗೇರಿ ಶಾಸಕ ಟಿ.ಡಿ ರಾಜೇಗೌಡ ಮಾತನಾಡಿ ದೇಶದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಜಾರಿಗೊಳಿಸುವ ಮೂಲಕ ಗಾಂಧೀಜಿಯವರ ಕನಸನ್ನು ನನಸು ಮಾಡಿದ್ದು ರಾಜೀವ್ ಗಾಂಧಿಯವರು. ದೇಶದಲ್ಲಿ ಬಿಜೆಪಿ ಸರ್ಕಾರ ಅಭಿವೃದ್ಧಿಗೆ ನೀಡಿರುವ ಅನುದಾನವನ್ನು ವಾಪಸ್ ಪಡೆಯುವ ಮೂಲಕ ದುರಾಡಳಿತ ನಡೆಸುತ್ತಿದೆ ಇದಕ್ಕೆ ಅಂತ್ಯವಾಡಲು ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಕೇಳಿಕೊಂಡರು.
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ನಿಂದ ಗಾಯತ್ರಿ ಶಾಂತೇಗೌಡ ಕಣಕ್ಕೆ
ಮಾಜಿ ಸಚಿವ ಸಗೀರ್ ಅಹಮದ್ ದೇಶದಲ್ಲಿ ಅಧಿಕಾರ ವಿಕೇಂದ್ರಿಕರಣ ನೀತಿಯನ್ನು ಜಾರಿಗೊಳಿಸುವ ಮೂಲಕ ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಶ್ರಮಿಸುತ್ತಾ ಬಂದಿದೆ. ಗ್ರಾಮಪಂಚಾಯಿತಿ ಸದಸ್ಯರು ಸರ್ವಾಧಿಕಾರಿ ಧೋರಣೆ ಸರ್ಕಾರವನ್ನು ಕಿತ್ತೊಗೆಯಲು ಸಂಕಲ್ಪ ಮಾಡಬೇಕು ಎಂದು ಕರೆ ನೀಡಿದರು.
ಜಿಲ್ಲಾಧ್ಯಕ್ಷ ಡಾ. ಅಂಶುಮಂತ್ ಮಾತನಾಡಿ ದೇಶದಲ್ಲಿ ಪ್ರಜಾಪ್ರಭುತ್ವ ವಿರೋಧಿಯಾಗಿ ಸರ್ವಾಧಿಕಾರಿ ಧೋರಣೆ ಮೂಲಕ ಕಾನೂನುಗಳನ್ನು ಉಲ್ಲಂಘಿಸಿ ಬಿಜೆಪಿ ಆಡಳಿತ ನಡೆಸುತ್ತಿದೆ, ಸಂವಿಧಾನ, ಕಾನೂನಿನ ಬಗ್ಗೆ ಗೌರವವಿಲ್ಲದ ಇಂತಹ ಭ್ರಷ್ಟ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಬೇಕು, ಚುನಾವಣೆಗಳಲ್ಲಿ ಮತದಾನದಿಂದ ಮಾತ್ರ ಸಾಧ್ಯ ಆನಿಟ್ಟಿನಲ್ಲಿ ಎಲ್ಲರೂ ಸಂಕಲ್ಪ ಮಾಡಬೇಕಿದೆ ಎಂದರು.
ಗಾಯತ್ರಿ ಶಾಂತೇಗೌಡ ಅವರು ಈ ಹಿಂದೆ ಕಾಂಗ್ರೆಸ್ನಿಂದ ಪರಿಷತ್ ಸದಸ್ಯರಾಗಿ ಆಯ್ಕೆಗೊಂಡು ಮಗದೊಮ್ಮೆ ಸೋಲು ಕಂಡಿದ್ದು ಇದೀಗ ಮೂರನೇ ಬಾರಿಗೆ ಮತ್ತೇ ಸ್ಪರ್ಧೆಗೆ ಇಳಿದಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಎಂ.ಎಲ್ಮೂರ್ತಿ, ಜಿ.ಹೆಚ್.ಶ್ರೀನಿವಾಸ್ , ಸಿ.ಎನ್.ಅಕ್ಮಲ್, ಮಹಡಿಮನೆ ಸತೀಶ್, ಸೇರಿದಂತೆ ಅನೇಕ ಮುಖಂಡರುಗಳು ಉಪಸ್ಥಿತರಿದ್ದರು.
ಇದನ್ನೂ ಓದಿ:
Legislative Council: ಕರ್ನಾಟಕ ವಿಧಾನ ಪರಿಷತ್ಗೆ ದ್ವೈವಾರ್ಷಿಕ ಚುನಾವಣೆ ದಿನಾಂಕ ಪ್ರಕಟ
Discussion about this post