ಚಿಕ್ಕಮಗಳೂರು: ೭೨ ನೇ ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ ದಲಿತರ ಸಬಲೀಕರಣ, ಬಡ್ತಿ ಮೀಸಲಾತಿ, ವಿದ್ಯಾರ್ಥಿ ವೇತನ ಹೆಚ್ಚಳ, ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮ ಸ್ಥಾಪನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ನವೆಂಬರ್ ೨೫ ರಂದು ಬೆಂಗಳೂರು ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಸಮಿತಿ ಸಂಚಾಲಕ ಮಲ್ಲೇಶ್ ಅಂಬುಗ ತಿಳಿಸಿದರು.
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಭಾರತ ಸಂವಿಧಾನವು ದಲಿತರು, ಶೋಷಿತರಿಗೆ ಹಕ್ಕುಗಳನ್ನು ನೀಡಿದ್ದರು ಅವುಗಳನ್ನು ಸರ್ಕಾರಗಳು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ವಿಫಲವಾಗಿವೆ. ಸುಳ್ಳು ಆಶ್ವಾಸನೆ, ಭರವಸೆ ಮೂಲಕ ದಲಿತರನ್ನು ಮತ ಬ್ಯಾಂಕ್ಗಳಾಗಿ ಮಾಡಿಕೊಂಡಿವೆ ಎಂದು ದೂಷಿಸಿದರು.
ದೇಶದಲ್ಲಿ ದಲಿತರ ಸಬಲೀಕರಣವಾಗಬೇಕು, ಬಡ್ತಿ ಮೀಸಲು, ವಿದ್ಯಾರ್ಥಿ ವೇತನ ಹೆಚ್ಚಳ, ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮ ಸ್ಥಾಪನೆ, ಬ್ಯಾಕ್ ಲಾಕ್ ಹುದ್ದೆಗಳ ಭರ್ತಿ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ನ.೨೫ ರಂದು ಬೆಳಗ್ಗೆ ೧೧.೦೦ ಘಂಟೆಗೆ ಚಿಕ್ಕ ಲಾಲ್ ಬಾಗ್ನಿಂದ ಬೃಹತ್ ಮೆರವಣಿಗೆ ಮೂಲಕ ಹೊರಟು ವಿಧಾನ ಸೌಧ ಮುತ್ತಿಗೆ ಹಾಕಲಾಗುವುದು, ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಸುಮಾರು ೫೦೦ ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಬೆಂಗಳೂರು ವಿಧಾನ ಸೌಧ ಚಲೋ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ದೇಶದಲ್ಲಿ ದಲಿತ ಮೇಲೆ ದೌರ್ಜನ್ಯ, ಅತ್ಯಾಚಾರಗಳು ನಡೆಯುತ್ತಿದ್ದು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ ರಾಜ್ಯದ ವಿವಿಧ ಇಲಾಖೆಗಳಲ್ಲಿ ೨೪೩೦ ಕ್ಕೂ ಹೆಚ್ಚು ಬ್ಯಾಕ್ಲಾಕ್ ಹುದ್ದೆಗಳಿದ್ದೂ ನೇಮಕ ಮಾಡುವಲ್ಲಿ ವಂಚನೆ ನಡೆಸುತ್ತಿದೆ. ಅನುದಾನ ಬಿಡುಗಡೆ ಮಾಡುವಲ್ಲಿ ತಾರತಮ್ಯ ಮಾಡುತ್ತಿದೆ, ಜತೆಗೆ ಅನ್ಯ ಉದ್ದೇಶಕ್ಕೆ ಮೀಸಲು ಅನುದಾನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಪ್ರಧಾನ ಸಂಚಾಲಕ ಮರ್ಲೆ ಅಣ್ಣಯ್ಯ, ಮೈಸೂರು ವಿಭಾಗೀಯ ಸಂಚಾಲಕ ಶೂದ್ರ ಶ್ರೀನಿವಾಸ್, ಕಡೂರು ತಾಲ್ಲೂಕು ಸಂಚಾಲಕ ಗಂಗರಾಜ್, ಜಿಲ್ಲಾ ಸಂಘಟನಾ ಸಂಚಾಲಕ ರಾಮಣ್ಣ, ಹನುಮಂತ, ಮಹೇಂದ್ರಸ್ವಾಮಿ, ಶೇಖರ್ ಸೇರಿದಂತೆ ಮತ್ತಿತರರು ಇದ್ದರು.
ಇದನ್ನೂ ಓದಿ:
Atrocities: ದಲಿತ ಕುಟುಂಬದ ಮೇಲೆ ಹಲ್ಲೆ ಸಂತ್ರಸ್ತರ ನ್ಯಾಯಕ್ಕೆ ಒತ್ತಾಯ
Discussion about this post