ಚಿಕ್ಕಮಗಳೂರು : ಜಿಲ್ಲಾಡಳಿತದ ವತಿಯಿಂದ ನಡೆದ ಕನಕದಾಸರ ಜಯಂತಿಯಲ್ಲಿ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿಯ ಪತಿ ಶಾಂತೇಗೌಡರು ಮತ್ತು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ವಿ.ಮಂಜುನಾಥ್ ಒಳಗೊಂಡಂತೆ ಅನೇಕ ರಾಜಕೀಯ ಮುಖಂಡರನ್ನು ಆಹ್ವಾನಿಸಿ ಜಿಲ್ಲಾ ಚುನಾವಣಾಧಿಕಾರಿ ಕೆ.ಎನ್.ರಮೇಶ್ ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದು ಇವರ ವಿರುದ್ಧ ನೀತಿ ಸಂಹಿತೆ ಕಾನೂನು ಉಲ್ಲಂಘನೆ ದೂರು ದಾಖಲಿಸಬೇಕು ಎಂದು ಜಿಲ್ಲಾ ಬಿಜೆಪಿ ವಕ್ತಾರ ವರಸಿದ್ಧಿ ವೇಣುಗೋಪಾಲ್ ಆರೋಪಿಸಿದ್ದಾರೆ.
ಕನಕ ಜಯಂತಿಯಲ್ಲಿ ರಾಜಕೀಯ ನಾಯಕರನ್ನು ಕರೆಸುವ ಉದ್ದೇವೇನಿತ್ತು? ಚುನಾವಣಾಧಿಕಾರಿಗಳು ಪಕ್ಷದ ಪರವಾಗಿ ವರ್ತಿಸುತ್ತಿದ್ದಾರೆ ಎನ್ನುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ನಾಮಪತ್ರ ಸಲ್ಲಿಸುವ ವೇಳೆಯಲ್ಲೂ ೬ ಕ್ಕಿಂತ ಹೆಚ್ಚು ಮಂದಿ ಕೂರಿಸಿಕೊಂಡು ನಾಮಪತ್ರವನ್ನು ಸ್ವೀಕರಿಸಿರುತ್ತಾರೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವವರ ವಿರುದ್ಧ ದೂರು ದಾಖಲಿಸಬೇಕು. ನಿಷ್ಪಕ್ಷಪಾತವಾಗಿ ಚುನಾವಣೆ ನಡೆಯಲು ಜಿಲ್ಲಾ ಚುನಾವಣಾಧಿಕಾರಿಗಳನ್ನು ಬದಲಾಯಿಸಿ ಬೇರೆ ಚುನಾವಣಾಧಿಕಾರಿಗಳನ್ನು ನೇಮಿಸಬೇಕೆಂದು ಆಗ್ರಹಿಸಿರುವುದಾಗಿ ತಿಳಿಸಿದ್ದಾರೆ.
ಸ್ಥಳೀಯ ಸಂಸ್ಥೆ ಚುನಾವಣೆ: ವೈಎಸ್ಆರ್ ಕಾಂಗ್ರೆಸ್ ಭರ್ಜರಿ ಗೆಲುವು
Discussion about this post