ಮಂಡ್ಯದ ಗಂಡು, ಕನ್ನಡ ಚಿತ್ರರಂಗದ ಅನನ್ಯ ತಾರೆ ಅಂಬರೀಷ್ ಅವರ ಪುಣ್ಯತಿಥಿಯಂದು ಕೂ ಆ್ಯಪ್ನಲ್ಲಿ ಹಲವರು ಅಂಬರೀಷ್ ಅವರನ್ನು ಸ್ಮರಿಸಿದ್ದಾರೆ. : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂ ಮಾಡಿ, ಜನಪ್ರಿಯ ಕಲಾವಿದ, ಅಭಿಮಾನಿಗಳ ನೆಚ್ಚಿನ ರೆಬೆಲ್ ಸ್ಟಾರ್, ಮಾಜಿ ಕೇಂದ್ರ ಸಚಿವ ಶ್ರೀ ಅಂಬರೀಶ್ ಅವರ ಪುಣ್ಯತಿಥಿಯಂದು ಅಭಿಮಾನಪೂರ್ವಕ ನಮನಗಳು. ಹಲವಾರು ಯಶಸ್ವಿ ಚಲನಚಿತ್ರಗಳ ಜೊತೆಗೆ ತಮ್ಮ ವಿಶಿಷ್ಟ ನಡೆ, ನುಡಿ, ವ್ಯಕ್ತಿತ್ವಗಳಿಂದ ಅಭಿಮಾನಿಗಳ ಹೃದಯದಲ್ಲಿ ಅವರು ಶಾಶ್ವತವಾಗಿ ನೆಲೆಸಿದ್ದಾರೆ” ಎಂದು ತಿಳಿಸಿದ್ದಾರೆ.
ಕನ್ನಡ ಚಿತ್ರರಂಗದ ರೆಬೆಲ್ ಸ್ಟಾರ್, ಮಂಡ್ಯದ ಗಂಡು ಎಂದೇ ಖ್ಯಾತಿ ಗಳಿಸಿದ್ದ ನಟ ದಿವಂಗತ ಅಂಬರೀಶ್ ತಮ್ಮ ನಟನೆಯ ಮೂಲಕ ಸುದೀರ್ಘ 46 ವರ್ಷಗಳ ಕಾಲ ಚಿತ್ರರಸಿಕರನ್ನು ರಂಜಿಸಿದ್ದರು. ನಟನೆ ಮಾತ್ರವಲ್ಲದೆ ರಾಜಕಾರಣದಲ್ಲೂ ತಮ್ಮ ಛಾಪನ್ನು ಮೂಡಿಸಿದ್ದರು. ಇಂದು ಅವರ ಪುಣ್ಯಸ್ಮರಣೆಯಂದು ಅವರನ್ನು ನೆನೆಯುತ್ತಾ ಅವರಿಗೆ ಗೌರವ ಪೂರ್ವಕವಾಗಿ ನಮಿಸುವೆ ಎಂದು ಶಾಸಕ ಜೆ ಟಿ ದೇವೇಗೌಡ ಕೂ ಮಾಡಿದ್ದಾರೆ.
ರೆಬೆಲ್ ಸ್ಟಾರ್, ಕಲಿಯುಗದ ಕರ್ಣ, ಮಂಡ್ಯದ ಗಂಡು ಎಂದು ಜನರಿಂದ ಪ್ರೀತಿಯಿಂದ ಕರೆಸಿಕೊಳ್ಳುತ್ತಿದ್ದ, ತಮ್ಮದೇ ಶೈಲಿಯಲ್ಲಿ ಜನರನ್ನು ಪ್ರೀತಿಸುತ್ತಿದ್ದ ಅಂಬರೀಶ್ ಅವರ ಪುಣ್ಯಸ್ಮರಣೆಯಂದು ಅವರಿಗೆ ಪ್ರಣಾಮಗಳು ಎಂದು ಶಾಸಕ ರಘುಮೂರ್ತಿ ಕೂ ಮಾಡಿದ್ದಾರೆ.
ಕನ್ನಡ ಚಿತ್ರರಂಗದ ಅಜಾತಶತ್ರು, ರೆಬೆಲ್ ಸ್ಟಾರ್ ಅಂಬರೀಶ್ ಅವರ ನೆನಪು ಸದಾ ಜೀವಂತ. ಇಂದು ಅವರ ಪುಣ್ಯಸ್ಮರಣೆ. ಅವರಿಗೆ ಗೌರವ ನಮನಗಳು. – ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜಿಮ್ ಕೂ ಮಾಡಿದ್ದಾರೆ.
Discussion about this post