ನವದೆಹಲಿ: ಮಾಜಿ ಕ್ರಿಕೆಟ್ ಆಟಗಾರ, ಹಾಲಿ ಸಂಸದ ಗೌತಮ್ ಗಂಭೀರ್ ಹಾಗೂ ಅವರ ಕುಟುಂಬ ವರ್ಗಕ್ಕೆ ಕಾಶ್ಮೀರದ ಐಎಸ್ಐಎಸ್ ಭಯೋತ್ಪಾದಕ ಸಂಘಟನೆ ಜೀವ ಬೆದರಿಕೆ ಹಾಕಿದೆ.
ಈ ಸಂಬಂಧ ಗೌತಮ್ ಗಂಭೀರ್ ದೆಹಲಿ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಗೌತಮ್ ಗಂಭೀರ್ ಅವರ ಮನೆಗೆ ಬಿಗಿ ಭದ್ರತೆಯನ್ನು ಒದಗಿಸಿದೆ. ಜೀವ ಬೆದರಿಕೆ ಹಾಕಿರುವ ಸಂಘಟನೆ ವಿರುದ್ಧ ತನಿಖೆ ಕೈಗೊಂಡಿದ್ದಾರೆ.
ಕಾಶ್ಮೀರ ಮೂಲದ ಐಎಸ್ ಐಎಸ್ ಭಯೋತ್ಪಾದಕ ಸಂಘಟನೆಯು ಇಮೇಲ್ ಮೂಲಕ ಗೌತಮ್ ಗಂಭೀರ್ ಅವರಿಗೆ ಜೀವ ಬೆದರಿಕೆ ಹಾಕಿರುವುದು ಸತ್ಯ. ಹೀಗಾಗಿ, ಅವರ ಮನೆ ಹೊರಗಿನ ಭದ್ರತೆಯನ್ನು ಹೆಚ್ಚಿಸಿದ್ದೇವೆ ಎಂದು ಪೊಲೀಸ್ ಅಧಿಕಾರಿ ಶ್ವೇತಾ ಚೌಹಾಣ್ ಸ್ಪಷ್ಟಪಡಿಸಿದ್ದಾರೆ.
40 ವರ್ಷದ ಗೌತಮ್ ಗಂಭೀರ್ ಕ್ರಿಕೆಟ್ ಜೀವನದಿಂದ ರಾಜಕೀಯಕ್ಕೆ ಕಾಲಿಟ್ಟು, ಪಶ್ಚಿಮ ದೆಹಲಿಯಿಂದ ಸಂಸದರಾಗಿ ಆಯ್ಕೆಯಾಗಿದ್ದಾರೆ. ಮಂಗಳವಾರ ಭಯೋತ್ಪಾದನೆ ಸಂಘಟನೆಯಿಂದ ಜೀವ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಅವರ ದೆಹಲಿಯ ಮನೆಗೆ ಬಿಗಿ ಭದ್ರತೆ ಏರ್ಪಡಿಸಲಾಗಿದೆ.
ಇದನ್ನೂ ಓದಿ: ಪೂರ್ಣಾವಧಿ ನಾಯಕನಾಗಿ ರೋಹಿತ್ ಶರ್ಮಾ ಅತ್ಯುತ್ತಮ ಬ್ಯಾಟಿಂಗ್: ಗೌತಮ್ ಗಂಭೀರ್ ಮೆಚ್ಚುಗೆ
Discussion about this post