ನವದೆಹಲಿ: ಐಪಿಎಲ್ ಟೂರ್ನಿಯ 15ನೇ ಆವೃತ್ತಿಯ ಹರಾಜು ಪ್ರಕ್ರಿಯೆಗೆ ದಿನಗಣನೆ ಆರಂಭವಾಗುತ್ತಿರುವ ಬೆನ್ನಲ್ಲೇ ಯಾವ ಫ್ರಾಂಚೈಸಿಗಳು ಯಾವ ಆಟಗಾರರನ್ನು ಉಳಿಸಿಕೊಳ್ಳಲಿವೆ ಎಂಬ ಕುತೂಹಲ ಕ್ರಿಕೆಟ್ ಪ್ರೇಮಿಗಳಲ್ಲಿ ಗರಿಗೆದರತೊಡಗಿದೆ.
ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ನಾಯಕ ಎಂ.ಎಸ್.ಧೋನಿ ಅವರನ್ನು ಮುಂದಿನ ಮೂರು ಸೀಸನ್ಗಳಿಗೆ ಉಳಿಸಿಕೊಳ್ಳುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಧೋನಿ ಅವರನ್ನು ಹೊರತುಪಡಿಸಿ ಆಲ್ರೌಂಡರ್ ರವೀಂದ್ರ ಜಡೇಜ, ಓಪನರ್ ಋತುರಾಜ್ ಗಾಯಕ್ವಾಡ್ ಅವರನ್ನೂ ಸಿಎಸ್ಕೆ ತನ್ನಲ್ಲೇ ಉಳಿಸಿಕೊಳ್ಳಲಿದೆ.
ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನಿಯಮದ ಪ್ರಕಾರ, ಪ್ರತಿಯೊಂದು ತಂಡವೂ ನಾಲ್ವರು ಆಟಗಾರರನ್ನು ಉಳಿಸಿಕೊಳ್ಳಬಹುದಾಗಿದೆ. ಇಂಗ್ಲೆಂಡ್ನ ಆಲ್ರೌಂಡರ್ ಆಟಗಾರ ಮೊಯೀನ್ ಅಲಿ ಅವರನ್ನು ಉಳಿಸಿಕೊಳ್ಳಲು ಸಿಎಸ್ಕೆ ಮಾತುಕತೆ ನಡೆಸುತ್ತಿದೆ. ಒಂದು ವೇಳೆ ಅಲಿ ಅವರು ತಂಡದಲ್ಲಿ ಉಳಿಯಲು ಬಯಸದಿದ್ದಲ್ಲಿ ಸ್ಯಾಮ್ ಕರ್ರನ್ ಅವರನ್ನು ಉಳಿಸಿಕೊಳ್ಳುವ ಯೋಜನೆ ಸಿಎಸ್ಕೆ ತಂಡದ್ದು.
ಎಲ್ಲ ಫ್ರಾಂಚೈಸಿಗಳು ತಾವು ಉಳಿಸಿಕೊಳ್ಳಲಿರುವ ಆಟಗಾರರ ಪಟ್ಟಿಯನ್ನು ನವೆಂಬರ್ 30ರ ಒಳಗಾಗಿ ಸಲ್ಲಿಸಬೇಕಿದೆ. ಮುಂದಿನ ತಿಂಗಳು ಹರಾಜು ಪ್ರಕ್ರಿಯೆ ನಡೆಯಲಿದೆ.
ಡೆಲ್ಲಿ ಕ್ಯಾಪಿಟಲ್ಸ್ ವಿಕೆಟ್–ಕೀಪರ್ ಬ್ಯಾಟರ್ ರಿಷಭ್ ಪಂತ್, ಆಲ್ರೌಂಡರ್ ಅಕ್ಷರ್ ಪಟೇಲ್, ಪೃಥ್ವಿ ಶಾ ಹಾಗೂ ಆ್ಯರಿಂಚ್ ನಾರ್ತ್ಜೆ ಅವರನ್ನು ಉಳಿಸಿಕೊಳ್ಳಲಿದೆ. ಶ್ರೇಯಸ್ ಅಯ್ಯರ್ ಬದಲು ಪಂತ್ ಅವರನ್ನೇ ನಾಯಕನಾಗಿ ಮುಂದುವರಿಸುವ ಇರಾದೆಯನ್ನು ಡೆಲ್ಲಿ ಕ್ಯಾಪಿಟಲ್ಸ್ ಹೊಂದಿದೆ ಎನ್ನಲಾಗಿದೆ.
ಇದನ್ನೂ ಓದಿ: ಹಾಲಿ ಚಾಂಪಿಯನ್ ಸಿಎಸ್ಕೆ ತವರು ಚೆನ್ನೈಯಲ್ಲಿ ಏಪ್ರಿಲ್ 2ರಿಂದ ಐಪಿಎಲ್ ಟೂರ್ನಿ: ವರದಿ
ಮುಂಬೈ ಇಂಡಿಯನ್ಸ್ ತಂಡವು ರೋಹಿತ್ ಶರ್ಮಾ ಮತ್ತು ಜಸ್ಪ್ರೀತ್ ಬೂಮ್ರಾ ಅವರನ್ನು ಉಳಿಸಿಕೊಳ್ಳಲಿದೆ. ಕೀರನ್ ಪೊಲಾರ್ಡ್ ಜತೆ ಮಾತುಕತೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.
ಹೊಸ ಫ್ರಾಂಚೈಸಿಗಳು ಭಾರತದ ಪ್ರಮುಖ ಆಟಗಾರರನ್ನು ಸಂಪರ್ಕಿಸುತ್ತಿದ್ದು, ಇನ್ನಷ್ಟೇ ಅಂತಿಮ ನಿರ್ಧಾರ ಕೈಗೊಳ್ಳಬೇಲಿದೆ. ಕನ್ನಡಿಗ ಕೆ.ಎಲ್.ರಾಹುಲ್ ಅವರು ಲಖನೌ ತಂಡ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.
ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಸುನಿಲ್ ನರೈನ್, ಆ್ಯಂಡ್ರೆ ರಸೆಲ್ ಹಾಗೂ ವರುಣ್ ಚಕ್ರವರ್ತಿಯನ್ನು ಉಳಿಸಿಕೊಳ್ಳುವ ನಿರೀಕ್ಷೆ ಇದೆ. ಶುಭಮನ್ ಗಿಲ್ ಮತ್ತು ವೆಂಕಟೇಶ್ ಅಯ್ಯರ್ ಅವರನ್ನು ಉಳಿಸಿಕೊಳ್ಳುವ ಬಗ್ಗೆ ಇನ್ನಷ್ಟೇ ನಿರ್ಧಾರ ಕೈಗೊಳ್ಳಬೇಕಿದೆ ಎನ್ನಲಾಗಿದೆ.
ಇನ್ನಷ್ಟು ಸುದ್ದಿಗಳು…
ವಿರಾಮದ ವೇಳೆ ವಿರಾಟ್ ಸೆಲ್ಫೀ: ಅನುಷ್ಕಾರನ್ನು ‘ಮೈ ರಾಕ್’ ಎಂದ ಕಿಂಗ್ ಕೊಹ್ಲಿ
ಟ್ವೆಂಟಿ-20 ಕ್ರಿಕೆಟ್ನಲ್ಲಿ ಅತಿಹೆಚ್ಚು ರನ್: ವಿರಾಟ್ ಕೊಹ್ಲಿಯ ಹಿಂದಿಕ್ಕಿದ ಮಾರ್ಟಿನ್ ಗಪ್ಟಿಲ್
ನಾಯಕ ರೋಹಿತ್, ರಾಹುಲ್ ಅಬ್ಬರದ ಬ್ಯಾಟಿಂಗ್: ನ್ಯೂಜಿಲೆಂಡ್ ವಿರುದ್ಧ ಟ್ವೆಂಟಿ-20 ಸರಣಿ ಗೆದ್ದ ಭಾರತ
Discussion about this post