ಬೆಂಗಳೂರು: ರಾಜ್ಯಕ್ಕೆ ನವೆಂಬರ್ 26ರಂದು (ಶನಿವಾರ) ಮತ್ತೊಂದು ಸೈಕ್ಲೋನ್ ಅಪ್ಪಳಿಸಲಿದ್ದು, ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಇದನ್ನೂ ಓದಿ: 66 ವೈದ್ಯಕೀಯ ವಿದ್ಯಾರ್ಥಿಗಳಿಗೆ ಕೋವಿಡ್: ಜನರಲ್ಲಿ ಆತಂಕ ಸೃಷ್ಟಿ!
ವಿಧಾನಸೌಧದಲ್ಲಿ ಮಾತನಾಡಿದ ಅವರು,ಚೆನ್ನೈಗೆ ಅಪ್ಪಳಿಸಲಿರುವ ಸೈಕ್ಲೋನ್ ರಾಜ್ಯದ ಮೇಲೂ ಪರಿಣಾಮ ಬೀರಲಿದೆ. ಮೈಸೂರು, ಉಡುಪಿ, ಕರಾವಳಿ ಭಾಗ, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆಗಳಲ್ಲಿ ಚಂಡಮಾರುತದ ಪರಿಣಾಮ ಬೀರಲಿದ್ದು, ನ.26ರಿಂದ 28ರವರೆಗೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ ಎಂದರು.
ಇದನ್ನೂ ಓದಿ: ಮರಣದಂಡನೆಯನ್ನು ಜೀವಾವಧಿಗೆ ತಗ್ಗಿಸಿದ ಬಾಂಬೆ ಹೈಕೋರ್ಟ್
ವಿಧಾನಪರಿಷತ್ ಚುನಾವಣೆಗೆ ಈಗಾಗಲೇ ನಾಮಪತ್ರಗಳು ಸಲ್ಲಿಕೆಯಾಗಿವೆ. ಹಾಗಾಗಿ ಡಿಸಿಗಳು ಸೈಕ್ಲೋನ್ ಕಡೆಗೆ ಗಮನಹರಿಸಬೇಕಿದೆ. ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.
ಇದನ್ನೂ ಓದಿ: ವಿಚಾರಣೆಗೆ ಹಾಜರಾದ ಮುಂಬೈ ಮಾಜಿ ಪೊಲೀಸ್ ಕಮಿಷನರ್ ಪರಂಬೀರ್ ಸಿಂಗ್
ಈಗಾಗಲೇ ಮಳೆಯಿಂದ ಮನೆ ಹಾನಿಯಾಗಿದ್ದರೆ ತಕ್ಷಣ ಪರಿಹಾರ ನೀಡುವಂತೆ ಸೂಚಿಸಲಾಗಿದೆ. ಬೆಳೆ ಪರಿಹಾರವನ್ನೂ ನೀಡಲಾಗುವುದು. ಮಳೆ ಹಾನಿ ಕುರಿತು ನ.30ರೊಳಗೆ ವರದಿ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ವರದಿ ಬಂದ ಬಳಿಕ 10 ದಿನಗಳೊಳಗೆ ರೈತರಿಗೆ ಪರಿಹಾರ ನೀಡಲಾಗುವುದು ಎಂದು ಹೇಳಿದರು.
ಇದನ್ನೂ ಓದಿ: JDS : ಪಕ್ಷ ತೊರೆಯಲಿದ್ದಾರಾ ಜೆಡಿಎಸ್ ಮುಖಂಡ ಹೆಚ್.ಹೆಚ್.ದೇವರಾಜ್.?
Another cyclone attack for the state today
Discussion about this post