ಬೆಂಗಳೂರು: ಕೊರೋನಾ ವೈರಾಣುವಿನ ಹೊಸ ರೂಪಾಂಪತಿ ಒಮಿಕ್ರಾನ್ ತೀರಾ ಅಪಾಯಕಾರಿ ಎನಿಸಿದೆ. ಸೋಂಕಿನ ಭೀತಿಯು ಎಲ್ಲೆಡೆ ವ್ಯಕ್ತವಾಗುತ್ತಿದೆ. ಆದರೆ ರಾಜ್ಯದಲ್ಲಿ ಸದ್ಯಕ್ಕೆ ಶಾಲಾ-ಕಾಲೇಜು ಬಂದ್ ಮಾಡುವ ನಿರ್ಧಾರ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಕೊರೋನಾ ಹೊಸ ತಳಿ ಹಿನ್ನೆಲೆ ಪೋಷಕರು ಯಾವುದೇ ರೀತಿ ಆತಂಕ ಪಡುವ ಅಗತ್ಯವಿಲ್ಲ. ಆರೋಗ್ಯ ಇಲಾಖೆ ಜತೆ ಶಿಕ್ಷಣ ಇಲಾಖೆ ನಿರಂತರ ಸಂಪರ್ಕದಲ್ಲಿದೆ. ಸದ್ಯ ಶಾಲಾಕಾಲೇಜುಗಳಲ್ಲಿ ಕೊರೋನಾ ಗಂಭೀರವಾಗಿಲ್ಲ. ಕೇಂದ್ರ ಸರ್ಕಾರದ ಸಲಹೆ ಪಡೆದು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
Schools Collegest to continue As Usual Inspite of Omicron threat says BC Nagest
Discussion about this post