ಬೆಂಗಳೂರು: ಓಮಿಕ್ರಾನ್ ರೂಪಾಂತರಿ ವೈರಸ್ ಬರದಂತೆ ಲಸಿಕೆ ನೀಡಲು ಬಂದಿರುವುದಾಗಿ ವೈದ್ಯರ ಸೋಗಿನಲ್ಲಿ ಬಂದಿದ್ದ ತಂಡವೊಂದು ಮನೆಯವರಿಗೆ ಪಿಸ್ತೂಲ್ ತೋರಿಸಿ ದರೋಡೆ ನಡೆಸಿರುವ ಘಟನೆ ಯಶವಂತಪುರದ ಎಸ್ ಬಿಎಂ ಕಾಲನಿಯಲ್ಲಿ ನಡೆದಿದೆ.’
ಇದನ್ನೂ ಓದಿ: 83 Trailer: ಕಪಿಲ್ ದೇವ್ ಆಗಿ ರಣವೀರ್ ಸಿಂಗ್ ನಟನೆಯ ‘83’ ಕನ್ನಡದಲ್ಲೂ ಬರಲಿದೆ; ಸುದೀಪ್ ಸಾರಥ್ಯದಲ್ಲಿ!
ಸೋಮವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಒಂದು ಕಾರು ಮತ್ತು ಇನ್ನೊಂದು ಬೈಕಿನಲ್ಲಿ ನಾಲ್ವರು ಬಂದಿದ್ದರು. ಉತ್ತರ ಭಾರತ ಮೂಲದ ಸಂಪತ್ ಸಿಂಗ್ ಎಂಬವರ ಮನೆಗೆ ಬಂದಿದ್ದ ತಂಡ, ನಿಮಗೆ ಕೊರೊನಾ ಲಸಿಕೆ ಆಗಿದೆಯೇ ಎಂದು ಕೇಳಿದ್ದಾರೆ. ಲಸಿಕೆ ತಗೊಂಡಿದ್ದೇವೆ ಎಂದಿದ್ದಕ್ಕೆ ಈಗ, ಹೊಸ ವೈರಸ್ ಬಂದಿರುವುದಕ್ಕೆ ಮತ್ತೊಂದು ಲಸಿಕೆ ನೀಡಲು ಬಂದಿದ್ದೇವೆ ಎಂದು ಹೇಳಿ ಮನೆಯ ಒಳಗೆ ಬಂದಿದ್ದಾರೆ.
ಇದನ್ನೂ ಓದಿ: ಓಮಿಕ್ರಾನ್: ಲಾಕ್ಡೌನ್ ಮಾತ್ರ ಬೇಡವೇ ಬೇಡ ಎನ್ನುತ್ತಿರುವ ನೆಟ್ಟಿಗರು
ಮನೆಯಲ್ಲಿ ಸಂಪತ್ ಸಿಂಗ್ ಪತ್ನಿ ಪಿಸ್ತಾ ದೇವಿ ಮತ್ತು ಸೊಸೆ ರಕ್ಷಾ ಮಾತ್ರ ಇದ್ದರು. ಪಿಸ್ತಾ ದೇವಿ ಗಂಡನಿಗೆ ಕರೆ ಮಾಡಲೆಂದು ಮೊಬೈಲ್ ತೆಗೆಯುವಷ್ಟರಲ್ಲಿ ಅವರಲ್ಲಿ ಒಬ್ಬಾತ ಆಕೆಯ ಹಣೆಗೆ ರಿವಾಲ್ವರ್ ಇಟ್ಟಿದ್ದಾನೆ. ಕೂಡಲೇ ಅವರಿಬ್ಬರನ್ನೂ ಮನೆಯ ಕೋಣೆಯೊಳಗೆ ಕೂಡಿ ಹಾಕಿದ್ದಾರೆ. ಬಳಿಕ ಮನೆಯ ಕಪಾಟಿನಲ್ಲಿದ್ದ 50 ಗ್ರಾಮ್ ಚಿನ್ನವನ್ನು ಲೂಟಿ ಮಾಡಿದ್ದಾರೆ. ಇದೇ ವೇಳೆ, ಪಿಸ್ತಾ ದೇವಿಯವರ ಇನ್ನೊಬ್ಬ ಮಗ ವಿಕ್ರಂ ಸಿಂಗ್ ಎಂಬಾತ ಈ ವಿಚಾರ ತಿಳಿಯದೆ ನೇರವಾಗಿ ಮನೆಗೆ ಬಂದಿದ್ದಾನೆ.
ಇದನ್ನೂ ಓದಿ: e Paper – December 30, 2021
ಮನೆಯಲ್ಲಿ ನೋಡಿದರೆ, ನಾಲ್ಕು ಮಂದಿ ವೈದ್ಯರ ಸೋಗಿನಲ್ಲಿದ್ದರು. ಮುಖಕ್ಕೆ ಮಾಸ್ಕ್, ಕೈಗೆ ಗ್ಲೌಸ್ ಹಾಕಿದ್ದವರು, ನಿನಗೆ ಲಸಿಕೆ ಆಗಿದೆಯಾ ಎಂದು ಕೇಳಿದ್ದಾರೆ. ನನಗೆ ಲಸಿಕೆ ಆಗಿದೆ ಎನ್ನುತ್ತಲೇ ತಾಯಿಯನ್ನು ಕರೆಯುತ್ತಾ ಮನೆಯ ಕೋಣೆಯೊಳಗೆ ಹೋಗಿದ್ದಾನೆ. ಅಷ್ಟರಲ್ಲಿ ಆಗಂತುಕರು ಅಲ್ಲಿಂದ ಓಡಿ ತಪ್ಪಿಸಿಕೊಂಡಿದ್ದಾರೆ. ಈ ಬಗ್ಗೆ ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸಿಸಿಟಿವಿ ಪರಿಶೀಲಿಸಿ ಆರೋಪಿಗಳ ಪತ್ತೆ ಕಾರ್ಯ ಆರಂಭಿಸಿದ್ದಾರೆ.
ಇದನ್ನೂ ಓದಿ: ಸಿದ್ದರಾಮಯ್ಯ, ಅನಿಲ್ ಲಾಡ್ ವಿರುದ್ಧ ಪೊಲೀಸರಿಗೆ ದೂರು, ಯಾರಿಂದ? ಸುದ್ದಿ ಓದಿ
Robbery on the pretext of vaccinating ‘Omikron’
Discussion about this post