ಬೆಂಗಳೂರು: ನಾಳೆ ದೆಹಲಿಗೆ ಭೇಟಿ ನೀಡಲಿದ್ದು, ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರಿಗೆ ಬೂಸ್ಟರ್ ಲಸಿಕೆ ಮತ್ತು ಆರೋಗ್ಯದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ತಿಳಿಸಿದ ಅವರು, ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದ ರಾಜ್ಯ ಕಾರ್ಯಪಡೆಯ ಸಭೆಯಲ್ಲಿ ಆರೋಗ್ಯ ಕಾರ್ಯಕರ್ತರಿಗಾದರೂ ಬೂಸ್ಟರ್ ಡೋಸ್ ನೀಡಬಹುದು ಎನ್ನುವ ಅಭಿಪ್ರಾಯ ತಜ್ಞರಿಂದ ವ್ಯಕ್ತವಾಗಿದೆ. ಇದರ ಬಗ್ಗೆ ಕೇಂದ್ರ ಸಚಿವರ ಜೊತೆ ಚರ್ಚಿಸುವೆ. ಬೂಸ್ಟರ್ ಡೋಸ್ ನೀಡುವ ಬಗ್ಗೆ ಕೇಂದ್ರದ ಅನಿಸಿಕೆ ಪಡೆಯಲಾಗುವುದು ಎಂದರು.
ರಾಜ್ಯಗಳ ಗಡಿಭಾಗ, ವಿಶೇಷವಾಗಿ ಕೇರಳಾ ಮತ್ತು ಮಹಾರಾಷ್ಟ್ರದಿಂದ ಬಂದವರ ಮೇಲೆ ಗಮನ ಹರಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಕೋವಿಡ್ ಲಸಿಕೆ ಕಡ್ಡಾಯ ಎನ್ನುವ ನಿಯಮ ಮಾಡುವುದಿಲ್ಲ. ಇದರ ಬದಲು ಲಸಿಕಾಕರಣ ಚುರುಕುಗೊಳಿಸಲಾಗುವುದು, ಜನರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದರು.
ಬೆಂಗಳೂರು ಹಾಗೂ ಮಂಗಳೂರು ವಿಮಾನ ನಿಲ್ದಾಣಕ್ಕೆ ನಿತ್ಯ ಕನಿಷ್ಠ 2,500 ಕ್ಕೂ ಹೆಚ್ಚು ಜನ ವಿದೇಶದಿಂದ ಬರುತ್ತಾರೆ. ಅವರೆಲ್ಲರಿಗೂ ಪರೀಕ್ಷೆ ಕಡ್ಡಾಯಗೊಳಿಸಲಾಗಿದ್ದು, ನೆಗಟಿವ್ ವರದಿ ಬಂದರೂ ಅವರ ಮೇಲೆ ನಿಗಾ ವಹಿಸಲಾಗುವುದು ಎಂದರು.
ನಗರದ ಖಾಸಗಿ ಹೋಟೆಲೊಂದರಲ್ಲಿ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಯ ಸಚಿವರು, ಶಾಸಕರು ಮತ್ತು ಮುಖುಂಡರ ಜೊತೆ ಸಭೆ ನಡೆಸಿ ಚುನಾವಣಾ ರೂಪರೇಷೆಗಳ ಬಗ್ಗೆ ಚರ್ಚಿಸಿದರು. ನಂತರ ಹು-ಧಾ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗುವರು.
Discussion with Union Minister on booster vaccine.
Discussion about this post