ಮೈಸೂರು: ತಮ್ಮ ಮದುವೆ ಮಾಡದ ಪೋಷಕರ ವರ್ತನೆಯಿಂದ ಬೇಸೆತ್ತ ಪ್ರೇಮಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಇದನ್ನೂ ಓದಿ: Illegal slaughterhouse: ಅಕ್ರಮ ಕಸಾಯಿಖಾನೆ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ನಿರ್ದೇಶನ
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ಪ್ರೇಮಿಗಳಾದ ಬಿಜಿ.ಸತೀಶ್ (21) ಬಿಜಿ.ವರಲಕ್ಷ್ಮಿ (20) ಮೃತ ಪ್ರೇಮಿಗಳು. ಈ ಜೋಡಿ 4 ವರ್ಷಗಳಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದರು. ಈ ಮಧ್ಯೆ ಸರ್ಕಾರಿ ಕೆಲಸದ ನಂತರ ಮದುವೆ ಮಾಡುವುದಾಗಿ ಹುಡುಗಿ ಮನೆಯವರು ಹೇಳಿದ್ದರು. ಬಿಎ ಓದಿದ್ದ ಯುವಕ ಪೊಲೀಸ್ ಕೆಲಸಕ್ಕೆ ಸೇರುವ ಯತ್ನ ಮಾಡುತ್ತಿದ್ದನು. ಯುವತಿ ನರ್ಸಿಂಗ್ ಓದುತ್ತಿದ್ದಳು.
ಇದನ್ನೂ ಓದಿ: Price hike for gas cylinder: ವಾಣಿಜ್ಯ ಗ್ಯಾಸ್ ಸಿಲಿಂಡರ್ನ ಬೆಲೆ ಪ್ರತಿ ಸಿಲಿಂಡರ್ಗೆ 103.50 ರೂ. ಹೆಚ್ಚಳ
ಕೆಲಸ ಸಿಕ್ಕ ನಂತರ ಮದುವೆ ಮಾಡುವುದಾಗಿ ಹುಡುಗಿ ತಂದೆ ಸಿದ್ದಲಿಂಗ ನಾಯ್ಕ ತಾಕೀತು ಮಾಡಿದ್ದರು. ಪೋಷಕರ ನಡೆಗೆ ಬೇಸೆತ್ತು ಮೈಸೂರಿಗೆ ಆಗಮಿಸಿದ್ದ ಪ್ರೇಮಿಗಳು ಮಂಗಳವಾರ ನಗರದಲ್ಲಿರುವ ಸಂಜೆ ಲಾಡ್ಜ್ವೊಂದರಲ್ಲಿ ರೂಂ ತೆಗೆದುಕೊಂಡಿದ್ದರು. ರಾತ್ರಿಯೂ ಹೊರ ಬಂದಿರಲಿಲ್ಲ.
ಇದನ್ನೂ ಓದಿ: booster vaccine: ನಾಳೆ ದೆಹಲಿಗೆ ಸಿಎಂ ಬೊಮ್ಮಾಯಿ: ಬೂಸ್ಟರ್ ಲಸಿಕೆ ಬಗ್ಗೆ ಕೇಂದ್ರ ಸಚಿವರ ಜೊತೆ ಚರ್ಚೆ.
ಬೆಳಿಗ್ಗೆಯೂ ಹೊರ ಬಾರದ ಹಿನ್ನಲೆ, ರೂಮ್ ಬಳಿ ತೆರಳಿ ನೋಡಿದಾಗ ಇಬ್ಬರೂ ಸೀಲಿಂಗ್ ಕೊಕ್ಕೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಈ ಕುರಿತು ಲಾಡ್ಜ್ ಮಾಲೀಕ ಲಷ್ಕರ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಭೇಟಿ ನೀಡಿದ ಲಷ್ಕರ್ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ಮಾಂಸಾಹಾರದಲ್ಲಿರುವ ಐದು ಪೌಷ್ಟಿಕಾಂಶಗಳು
Lovers who committed suicide
Discussion about this post