ಕೊಟ್ಟಿಗೆಹಾರ: ಕೆಲದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಳೂರಿನ ನಾಗೇಶ್ ಅಚಾರ್(46) ಅವರ ಮೃತದೇಹ ಬಿದಿರುತಳದಲ್ಲಿ ಮಂಗಳವಾರ ಸಂಜೆ ಪತ್ತೆಯಾಗಿದೆ.
ಇದನ್ನೂ ಓದಿ: Online Painting Competition: ನಿಸರ್ಗ ಚಿತ್ರಗಳ ಆನ್ಲೈನ್ ಚಿತ್ರಕಲಾ ಸ್ಪರ್ಧೆ
ಬಿದಿರುತಳಕ್ಕೆ ಕೆಲಸಕ್ಕೆಂದು ಹೋಗಿದ್ದ ನಾಗೇಶ್ ಆಚಾರ್ ಅವರು ಕೆಲದಿನಗಳಿಂದ ನಾಪತ್ತೆಯಾಗಿದ್ದರು. ಈ ಬಗ್ಗೆ ನಾಗೇಶ್ ಆಚಾರ್ ಅವರ ಪತ್ನಿ ಸುಮ ಬಾಳೂರು ಠಾಣೆಗೆ ಕಾಣೆಯಾಗಿರುವ ಬಗ್ಗೆ ದೂರು ನೀಡಿದ್ದರು.
ಇದನ್ನೂ ಓದಿ: President.: ಮೂರು ಕೃಷಿ ಕಾಯ್ದೆ ರದ್ದುಗೊಳಿಸುವ ಮಸೂದೆಗೆ ರಾಷ್ಟ್ರಪತಿ ಅಂಕಿತ.
ಬಿದಿರುತಳದಲ್ಲಿ ಕಳೆದ ಎರಡು ದಿನಗಳಿಂದ ಪೋಲಿಸರು, ಅರಣ್ಯ ಅಧಿಕಾರಿಗಳು ಹಾಗೂ ೧೦೦ ಕ್ಕೂ ಹೆಚ್ಚು ಗ್ರಾಮಸ್ಥರು ಹುಡುಕಾಟ ನಡೆಸಿದ್ದು ಮಂಗಳವಾರ ಸಂಜೆ ಬಿದಿರುತಳದ ಅರಣ್ಯದಲ್ಲಿ ಮೃತ ದೇಹ ಪತ್ತೆಯಾಗಿದೆ.
ಇದನ್ನೂ ಓದಿ: Theatre-Mall: ಒಮಿಕ್ರಾನ್ ರೂಪಾಂತರಿ: ಥೇಟರ್ ಮಾಲ್ಗಳಿಗೆ ಆತಂಕ ಸದ್ಯಕ್ಕಿಲ್ಲ
ಬಿದಿರುತಳ ಗ್ರಾಮದಿಂದ ಸುಮಾರು ಒಂದು ಕಿ.ಮಿ ದೂರದಲ್ಲಿ ಅರಣ್ಯ ಪ್ರದೇಶದಲ್ಲಿ ಮೃತದೇಹವನ್ನು ಹೂತು ಹಾಕಿದ್ದು ವಾಸನೆ ಹಾಗೂ ಹೆಜ್ಜೆ ಗುರುತಿನ ಆಧಾರದಲ್ಲಿ ಮೃತದೇಹವನ್ನು ಪತ್ತೆ ಹಚ್ಚಲಾಯಿತು
ಇದನ್ನೂ ಓದಿ:. Lovers who committed suicide : ಮದುವೆ ಮಾಡದ ಪೋಷಕರು: ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು
ಮೃತದೇಹವನ್ನು ಹಾಸನದ ಶವಾಗಾರಕ್ಕೆ ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದ್ದು ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಪ್ರಕರಣದ ಸಂಬಂಧ ಪೋಲಿಸರು ಮೂವರನ್ನು ಬಂದಿಸಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಇದನ್ನೂ ಓದಿ: e Paper – December 1, 2021
Suspected murder

























Discussion about this post