ಚಿಕ್ಕಮಗಳೂರು: ಮೂರು ದಿನಗಳ ಕಾಲ ನಡೆಯುವ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ನಗರದ ಕುವೆಂಪು ಕಲಾಮಂದಿರದಲ್ಲಿ ನಡೆಯುವ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶದ ಜನಸಂಖ್ಯೆಯಲ್ಲಿ ಶೇಕಡಾ ೪೦ರಷ್ಟಿರುವ ಮಕ್ಕಳ ಭವಿಷ್ಯವನ್ನು ಹೇಗೆ ಕೊಂಡೊಯ್ಯಬಹುದು ಎಂಬುದರ ಮೇಲೆ ದೇಶದ ಉನ್ನತಿ ನಿಂತಿದೆ. ಮಕ್ಕಳಿಗೆ ಮೌಲ್ಯಯುತ ಮತ್ತು ಸಂಸ್ಕಾರಯುತ ಶಿಕ್ಷಣ ನೀಡುವುದು ಮುಖ್ಯವಾಗಿದೆ ಎಂದರು. ಕಲೆಗೆ ಗೌರವ ಸಿಗುವಲ್ಲಿ ಕಲೆಯೂ ಉಳಿಯುತ್ತದೆ. ಯುವಜನೋತ್ಸವ ಮೂಲಕ ಕಲೆಗೆ ಬೆಳವಣಿಗೆಗೂ ಪ್ರೋತ್ಸಾಹ ಸಿಗುತ್ತಿದೆ ಎಂದು ಅವರು ಹೇಳಿದರು.
ಅಧ್ಯಕ್ಷತೆಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ವಹಿಸಿದ್ದರು. ನಮ್ಮ ಶಕ್ತಿಯ ಮೇಲೆ ನಂಬಿಕೆ ಇಡುವುದರಿಂದಲೇ ನಮ್ಮ ಏಳಿಗೆ ಸಾಧ್ಯ. ಸ್ವಾಮಿ ವಿವೇಕಾನಂದರು ಇದನ್ನೇ ಪ್ರತಿಪಾದಿಸಿದ್ದರು ಎಂದು ಹೇಳಿದರು.
ಕುವೆಂಪು ವಿಶ್ವವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯ ಸಂಯೋಜನಾಧಿಕಾರಿ ಡಾ. ಪರಿಸರ ನಾಗರಾಜ್ ಉಪಸ್ಥಿತರಿದ್ದರು.
ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕಿ ಡಾ. ಮಂಜುಳಾ ಹುಲ್ಲಹಳ್ಳಿ ಸ್ವಾಗತಿಸಿದರು. ನೆಹರು ಯುವಕೇಂದ್ರದ ಅಭಿಷೇಕ್ ಚೌಹಾರೆ ಉಪಸ್ಥಿತರಿದ್ದರು.
District Youth Festival launched
Discussion about this post